ಬಿಬಿಎಂಪಿ ಚುನಾವಣೆ, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆಯೇ ತೆರೆ
ಬೆಂಗಳೂರು, ಆಗಸ್ಟ್ 19 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ನಂತರ ಮೊಬೈಲ್ ಮೂಲಕ ಎಸ್ಎಂಎಸ್ ಕಳುಹಿಸುವಂತಿಲ್ಲ, ರೇಡಿಯೋ ಹಾಗೂ ಟಿವಿ, ಪತ್ರಿಕಾ ಮಾಧ್ಯಮಗಳ ಮೂಲಕವೂ ಪ್ರಚಾರ ಮಾಡಬಾರದು ಎಂದು ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ. [ಚುನಾವಣಾ ಪ್ರಚಾರದ ಚಿತ್ರಗಳು]
ಆ.22ರ ಶನಿವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯಲಿದೆ. ಮತದಾನಕ್ಕೆ 48 ಗಂಟೆ ಮುಂಚಿತವಾಗಿ ಬಹಿರಂಗ ಪ್ರಚಾರವನ್ನು ಅಂತ್ಯಗೊಳಿಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಅದರ ಅನ್ವಯ ಇಂದು ಸಂಜೆ ಬಹಿರಂಗ ಪ್ರಚಾರ ಬಹುತೇಕ ಅಂತ್ಯಗೊಳ್ಳಲಿದೆ. [ಚುನಾವಣೆ ದಿನ ರಜೆ ಘೋಷಣೆ]

ಶನಿವಾರ ಬೆಳಗ್ಗೆ 7ಗಂಟೆಗೆ ಮತದಾನ ಆರಂಭವಾಗುತ್ತದೆ. ಅದಕ್ಕೆ 48 ಗಂಟೆಗಳ ಮೊದಲು ಅಂದರೆ ಆ.20ರ ಗುರುವಾರ ಬೆಳಗ್ಗೆ 7ಕ್ಕೆ ಬಹಿರಂಗ ಪ್ರಚಾರವನ್ನು ರಾಜಕೀಯ ಪಕ್ಷಗಳು ಅಂತ್ಯಗೊಳಿಸಬೇಕು. ಆದ್ದರಿಂದ ವಿವಿಧ ಪಕ್ಷಗಳು ಬುಧವಾರ ರಾತ್ರಿಯೇ ಬಹಿರಂಗ ಪ್ರಚಾರ ಮುಕ್ತಾಯಗೊಳಿಸಲಿವೆ. [500 ರೂ. ಕೊಟ್ಟವರನ್ನು ಆರಿಸಿ ಐದು ವರ್ಷ ಕೂರಿಸಬೇಡಿ]
ಗುರುವಾರದಿಂದ ಅಭ್ಯರ್ಥಿಗಳು ಮನೆ-ಮನೆಗೆ ತೆರಳಿ ಪ್ರಚಾರ ಕಾರ್ಯ ನಡೆಸಬಹುದಾಗಿದೆ. ಬಹಿರಂಗ ಪ್ರಚಾರದ ಅವಧಿ ಮುಕ್ತಾಯಗೊಂಡ ಬಳಿಕ. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗಳು ಸಾರ್ವಜನಿಕ ಸಭೆ ಅಥವಾ ಸಮಾರಂಭಗಳನ್ನು ಮಾಡುವಂತಿಲ್ಲ ಎಂದು ಆಯೋಗ ಸೂಚಿಸಿದೆ.
ಎಸ್ಎಂಎಸ್ ಕಳಿಸುವಂತಿಲ್ಲ : ಇತ್ತೀಚಿನ ದಿನಗಳಲ್ಲಿ ಆಧುನಿಕ ಮಾಧ್ಯಮಗಳನ್ನು ಉಪಯೋಗಿಸಿಕೊಂಡು ಪ್ರಚಾರ ಮಾಡಲಾಗುತ್ತಿದೆ. ಆದ್ದರಿಂದ ಬಹಿರಂಗ ಪ್ರಚಾರ ಮುಗಿದ ಬಳಿಕ ಮೊಬೈಲ್ ಮೂಲಕ ಎಸ್ಎಂಎಸ್ ಕಳುಹಿಸುವಂತಿಲ್ಲ, ರೇಡಿಯೋ ಹಾಗೂ ಟಿವಿ, ಪತ್ರಿಕಾ ಮಾಧ್ಯಮಗಳ ಮೂಲಕ ಪ್ರಚಾರ ಮಾಡಬಾರದು ಎಂದು ಆಯೋಗ ನಿರ್ದೇಶನ ನೀಡಿದೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications