'ನಿಂಗ್ಯಾಕೋ ಚುನಾವಣೆ, ಮಟನ್ನಂತೆ ಕೊಚ್ಚಿ ಹಾಕ್ತೇವೆ'
ಬೆಂಗಳೂರು, ಆಗಸ್ಟ್ 19 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿಗೆ ಜೀವ ಬೆದರಿಕೆ ಕರೆ ಬಂದಿದೆ. 'ಮಟನ್ ಕೊಚ್ಚಿದಂತೆ ಕೊಚ್ಚಿ ಹಾಕ್ತೇವೆ' ಎಂದು ದೂರವಾಣಿ ಕರೆ ಮೂಲಕದ ಬೆದರಿಕೆ ಹಾಕಲಾಗಿದೆ.
ಸುಬ್ರಮಣ್ಯ ನಗರ ವಾರ್ಡ್ (ನಂ 66) ಜೆಡಿಎಸ್ ಅಭ್ಯರ್ಥಿ ನಾಗರಾಜ್ಗೆ ಅನಾಮಿಕ ವ್ಯಕ್ತಿಗಳು ಬೆದರಿಕೆ ಕರೆ ಮಾಡಿದ್ದಾರೆ. ಅಲ್ಲದೇ ನಾಗರಾಜ್ ಅವರ ಕಾರಿನ ಗಾಜನ್ನು ಪುಡಿ-ಪುಡಿ ಮಾಡಿದ್ದಾರೆ. ಬೆದರಿಕೆ ಕರೆ ಕುರಿತು ನಾಗರಾಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. [ಶಿವಾಜಿನಗರ ಕ್ಷೇತ್ರದಲ್ಲಿ ಯಾರಿಗೆ ಗೆಲುವು?]

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ನಾಗರಾಜ್ ಅವರು, 'ನನ್ನ ವಿರೋಧಿಗಳು ನನಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಮಾಡೋದು ಬಿಟ್ಟು ರಾಜಕೀಯಕ್ಕೆ ಬಂದಿದ್ದೀಯಾ?. ಮಟನ್ ಕೊಚ್ಚಿದಂತೆ ಕೊಚ್ಚಿ ಹಾಕ್ತೇವೆ. ಮಟನ್ ಅಂಗಡಿ ನೋಡಿದ್ದೀಯಾ?' ಎಂಬ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು. [ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೆ ಎಚ್ಡಿಕೆ ಸವಾಲು]
'ನಿನಗೆ ಯಾಕೋ ಚುನಾವಣೆ, ದೇವಸ್ಥಾನದಲ್ಲಿ ಪೂಜೆ ಮಾಡೋದು ಬಿಟ್ಟು ರಾಜಕೀಯ ಮಾಡ್ತೀಯಾ. ಇನ್ನೆರಡು ದಿನದಲ್ಲಿ ರಾಜಕೀಯ ಅಂದರೆ ಏನು ಎಂದು ತೋರಿಸುತ್ತೇವೆ' ಎಂದು ಧಮಕಿ ಹಾಕಿದ್ದಾರೆ ಎಂದು ನಾಗರಾಜ್ ತಿಳಿಸಿದರು. [ಬಿಬಿಎಂಪಿ ಚುನಾವಣೆ, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆಯೇ ತೆರೆ]
ಈ ಬೆದರಿಕೆ ಕರೆ ಬಂದ ಬಳಿಕ ಇಂದು ಮುಂಜಾನೆ ನಾಗರಾಜ್ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ದುಷ್ಕರ್ಮಿಗಳು ಪುಡಿ-ಪುಡಿ ಮಾಡಿದ್ದಾರೆ. ನಾಗರಾಜ್ ಅವರು ಈ ಬೆದರಿಕೆ ಕರೆ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.
ನಾಗರಾಜ್ ಅವರಿಗೆ ಕರೆ ಮಾಡಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ಇಂದು ನಾಗರಾಜ್ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ಆ.22ರಂದು ಬಿಬಿಎಂಪಿ ಚುನಾವಣೆಯ ಮತದಾನ ನಡೆಯಲಿದ್ದು, ಇಂದು ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications