ನಾಮಪತ್ರ ಸಲ್ಲಿಸಿದ ಬಿಬಿಎಂಪಿ ಮಾಜಿ ಮೇಯರ್ ಕಟ್ಟೆ ಸತ್ಯಾ
ಬೆಂಗಳೂರು, ಆಗಸ್ಟ್ 10 : ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಅವರಿಗೆ ಕೊನೆ ಕ್ಷಣದಲ್ಲಿ ಬಿಜೆಪಿ ಟಿಕೆಟ್ ನೀಡಿದೆ. ಬಸವನಗುಡಿ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಅವರು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಸೋಮವಾರ ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಬಿಬಿಎಂಪಿ ಕಚೇರಿಯಲ್ಲಿ ಕಟ್ಟೆ ಸತ್ಯನಾರಾಯಣ ಅವರು ನಾಮಪತ್ರ ಸಲ್ಲಿಸಿದ್ದಾರೆ. 'ಮಾಜಿ ಮೇಯರ್ಗಳಿಗೆ ಟಿಕೆಟ್ ನೀಡುವುದಿಲ್ಲ' ಎಂದು ನಿರ್ಣಯ ಕೈಗೊಂಡಿದ್ದ ಬಿಜೆಪಿ ಮೊದಲ ಪಟ್ಟಿಯಲ್ಲಿ ಯಾರಿಗೂ ಟಿಕೆಟ್ ನೀಡಿರಲಿಲ್ಲ. ಆದರೆ, ಮೂರನೇ ಪಟ್ಟಿಯಲ್ಲಿ ಶಾಂತ ಕುಮಾರಿ ಮತ್ತು ಕಟ್ಟೆ ಸತ್ಯನಾರಾಯಣ ಅವರಿಗೆ ಟಿಕೆಟ್ ನೀಡಲಾಗಿತ್ತು. [ಬಿಜೆಪಿ ಬಿಬಿಎಂಪಿ ಚುನಾವಣಾ ವೆಬ್ ಸೈಟ್]

ಬಿಬಿಎಂಪಿಯ ಐದು ವರ್ಷಗಳ ಆಡಳಿತದಲ್ಲಿ ಎಸ್.ಕೆ. ನಟರಾಜ್ (ಸಾರಕ್ಕಿ ವಾರ್ಡ್), ಶಾರದಮ್ಮ (ಶೆಟ್ಟಿಹಳ್ಳಿ ವಾರ್ಡ್), ಡಿ.ವೆಂಕಟೇಶಮೂರ್ತಿ (ಕತ್ರಿಗುಪ್ಪೆ ವಾರ್ಡ್), ಕಟ್ಟೆ ಸತ್ಯನಾರಾಯಣ (ಬಸವನಗುಡಿ ವಾರ್ಡ್) ಮತ್ತು ಎನ್.ಶಾಂತಕುಮಾರಿ (ಮೂಡಲಪಾಳ್ಯ ವಾರ್ಡ್) ಮೇಯರ್ ಆಗಿದ್ದರು. [ಬಿಜೆಪಿ 96 ಅಭ್ಯರ್ಥಿಗಳ ಪಟ್ಟಿ]
ಐವರು ಮಾಜಿ ಮೇಯರ್ಗಳ ಪೈಕಿ ಕಟ್ಟೆ ಸತ್ಯನಾರಾಯಣ ಮತ್ತು ಶಾಂತಕುಮಾರಿ ಅವರಿಗೆ ಮಾತ್ರ ಟಿಕೆಟ್ ಸಿಕ್ಕಿದೆ. ಎಸ್.ಕೆ.ನಟರಾಜ್ ಅವರು ಪ್ರತಿನಿಧಿಸುತ್ತಿದ್ದ ಸಾರಕ್ಕಿ ವಾರ್ಡ್ ಮೀಸಲಾತಿ ಬದಲಾಗಿದ್ದು, ಅವರ ಪತ್ನಿಗೆ ಜೆ.ಪಿ.ನಗರ ವಾರ್ಡ್ನಲ್ಲಿ ಟಿಕೆಟ್ ಸಿಕ್ಕಿದೆ. ಆದರೆ, ವೆಂಕಟೇಶಮೂರ್ತಿ, ಶಾರದಮ್ಮ ಅವರಿಗೆ ಟಿಕೆಟ್ ಸಿಕ್ಕಿಲ್ಲ. [ಬಿಜೆಪಿ 2ನೇ ಪಟ್ಟಿ]
ವೆಂಕಟೇಶಮೂರ್ತಿ ಪ್ರತಿಭಟನೆ : ಶಾಸಕ ಆರ್. ಅಶೋಕ್ ಅವರು ತಮಗೆ ಟಿಕೆಟ್ ತಪ್ಪಿಸಿದ್ದಾರೆ ಎಂದು ಭಾನುವಾರ ಡಿ.ವೆಂಕಟೇಶಮೂರ್ತಿ ಅವರು ತಮ್ಮ ಬೆಂಬಲಿಗರೊಂದಿಗೆ ವಿದ್ಯಾಪೀಠ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದರು.
ಅಂದಹಾಗೆ ನಾಮಪತ್ರ ಸಲ್ಲಿಕೆ ಮಾಡಲು ಆ.10ರ ಸೋಮವಾರ ಮಧ್ಯಾಹ್ನ 3.30ರ ತನಕ ಅವಕಾಶವಿದೆ. ಆ.22ರ ಶನಿವಾರ ಮತದಾನ ನಡೆಯಲಿದ್ದು, ಆ.25ರ ಮಂಗಳವಾರ ಮತ ಎಣಿಕೆ ನಡೆಯಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications