ಕಾಂಗ್ರೆಸ್ ಸರ್ಕಾರದ ಬಹು ಭಾಷೆ ಪ್ರಣಾಳಿಕೆಗೆ ಪ್ರತಿಕ್ರಿಯೆ
ಬಿಬಿಎಂಪಿ ಚುನಾವಣೆಯನ್ನು ಮುಂದಕ್ಕೆ ಹಾಕುವ ಸರಕಾರದ ಎಲ್ಲಾ ಪ್ರಯತ್ನಗಳನ್ನೂ ನ್ಯಾಯಾಲಯಗಳು ತಳ್ಳಿಹಾಕಿದ ಪರಿಣಾಮವಾಗಿ ಈ ತಿಂಗಳಾಂತ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ. ಪಕ್ಷಗಳ ರಾಜಕೀಯ ಚಟುವಟಿಕೆಯೂ ಹೆಚ್ಚಾಗಿದೆ.
ನಿನ್ನೆ ಕಾಂಗ್ರೆಸ್ ಪಕ್ಷವು ಬಿಬಿಎಂಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಬಿಬಿಎಂಪಿಯನ್ನು ಮೂರಾಗಿ ಐದಾಗಿ ವಿಭಜಿಸಲು ವಿಪರೀತವಾಗಿ ಪ್ರಯತ್ನಪಟ್ಟು ಸದ್ಯಕ್ಕೆ ವಿಫಲವಾಗಿರುವ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಕನ್ನಡ, ಇಂಗ್ಲೀಷ್, ಉರ್ದು, ತಮಿಳು, ತೆಲುಗು ಭಾಷೆಗಳಲ್ಲಿ ಪ್ರಕಟಮಾಡಿ ವೋಟುಗಳಿಗೋಸ್ಕರ ಬೆಂಗಳೂರಿನಲ್ಲಿ ಕನ್ನಡವನ್ನು ಇಲ್ಲವಾಗಿಸುವುದಕ್ಕೂ ತಾನು ಹೇಸುವುದಿಲ್ಲ ಎಂದು ತೋರಿಸಿಕೊಟ್ಟಿದೆ. [ಬಿಬಿಎಂಪಿ ಚುನಾವಣೆ : ಸಮಗ್ರ ಸುದ್ದಿಗಳಿಗೆ ಕ್ಲಿಕ್ಕಿಸಿ]
ಸಾಮಾನ್ಯವಾಗಿ ಪ್ರಣಾಳಿಕೆಯನ್ನು ಕನ್ನಡದಲ್ಲಿ ಮತ್ತು ನಮಗೆ ಬೇಕೋ ಬೇಡವೋ ಅನಿವಾರ್ಯವಾಗಿಬಿಟ್ಟಿರುವ ಇಂಗ್ಲೀಷಿನಲ್ಲಿ ಬಿಡುಗಡೆಗೊಳಿಸಲಾಗುತ್ತದೆ. ಸಿಲಿಕಾನ್ ವ್ಯಾಲಿ ಎಂದು ಹೆಸರು ಗಳಿಸಿಕೊಂಡ ಕರ್ನಾಟಕದಲ್ಲಿ ಅನ್ಯಭಾಷಿಕರ ಸಂಖೈ ಹೆಚ್ಚುತ್ತಲೇ ಇರುವುದು ಸತ್ಯ. [ಕಾಂಗ್ರೆಸ್ ಪ್ರಣಾಳಿಕೆಯ ಭರವಸೆಗಳು]
ಜೊತೆಗೆ ಬೆಂಗಳೂರು ತಮಿಳುನಾಡು ಮತ್ತು ಆಂಧ್ರ ಗಡಿಗಳಿಗೆ ಹೊಂದಿಕೊಂಡಂತೆಯೇ ಇರುವುದರಿಂದ ಸಹಜವಾಗಿ ಅನೇಕ ಪ್ರದೇಶಗಳಲ್ಲಿ ತೆಲುಗು ಮತ್ತು ತಮಿಳು ಭಾಷಿಕರು ನೆಲೆಸಿದ್ದಾರೆ.

ಅನ್ಯ ರಾಜ್ಯಗಳಿಂದ ಬಂದವರು ಕನ್ನಡ ಕಲಿಯುವಂತೆ ಪ್ರೇರೇಪಿಸಬೇಕಾದ ಕರ್ನಾಟಕ ಸರಕಾರ ಅವರ ವೋಟುಗಳನ್ನು ಪಡೆಯಲೋಸುಗ ಅವರ ಭಾಷೆಯಲ್ಲಿಯೇ ಪ್ರಣಾಳಿಕೆ ಬಿಡುಗಡೆ ಮಾಡುವಂತಹ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿರುವುದು ಸರಿಯೇ? [ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ? ಪರೀಕ್ಷಿಸಿ]
ಆಂಧ್ರದ ಒವೈಸಿ, ಚಂದ್ರಬಾಬು ನಾಯ್ಡು ತಮಿಳುನಾಡಿನ ಜಯಲಲಿತಾ ತಮ್ಮ ತಮ್ಮ ಪಕ್ಷವನ್ನು ಬಿಬಿಎಂಪಿ ಚುನಾವಣೆಗೆ ಅಣಿಗೊಳಿಸುತ್ತಿದೆಯಂತೆ ಎಂಬ ಸುದ್ದಿಗಳು ಕಾಂಗ್ರೆಸ್ಸಿನ ಈ ನಿರ್ಧಾರಕ್ಕೆ ಕಾರಣವಾಯಿತಾ? ಕನ್ನಡಿಗರ ರಾಷ್ಟ್ರೀಯ ಪಕ್ಷಗಳ ಮೇಲಿನ ಪ್ರೇಮದಿಂದ ಹಿಂದಿ ಹೇರಿಕೆಯೆಂಬುದು ನಿರಂತರವಾಗಿಬಿಟ್ಟಿದೆ.[ಬಿಬಿಎಂಪಿ ಚುನಾವಣಾ ವೇಳಾಪಟ್ಟಿ]
ಈಗ ಬೆಂಗಳೂರಿನಲ್ಲಿ ಅನ್ಯಭಾಷಾ ಪ್ರಣಾಳಿಕೆಯನ್ನು ಕಣ್ಣು ಕಣ್ಣು ಬಿಟ್ಟು ನೋಡುವ ಸರದಿ ಬೆಂಗಳೂರಿಗರದು. ಬಿಬಿಎಂಪಿ ವಿಭಜನೆಯಾಗುವ ಮುನ್ನವೇ ಭಾಷಾ ವಿರೋಧಿಯಾಗಿ ವರ್ತಿಸುತ್ತಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಪ್ಪಿತಪ್ಪಿ 'ಆಡಳಿತದ' ಹೆಸರಿನಲ್ಲಿ ಬಿಬಿಎಂಪಿಯನ್ನು ವಿಭಜನಗೊಳಿಸಿಬಿಟ್ಟರೆ ಯಾವ ರೀತಿ ವರ್ತಿಸಬಹುದು? [40 ವಾರ್ಡ್ ಗಳ ಪೂರ್ವ ತಯಾರಿ ವರದಿ]
ತೆಲುಗು ಭಾಷಿಕರು ಹೆಚ್ಚಿರುವ ಪ್ರದೇಶದಲ್ಲಿ ಕೇವಲ ತೆಲುಗು ಪ್ರಣಾಳಿಕೆ, ತಮಿಳರು ಹೆಚ್ಚಿರುವ ಕಡೆ ತಮಿಳು ಪ್ರಣಾಳಿಕೆ, ಉರ್ದು ಭಾಷಿಕರಿರುವ ಕಡೆ (ಇಲ್ಲಿರುವ ಮುಸ್ಲಿಮರು ಮಾತನಾಡುವುದು ಉರ್ದುವಾ?) ಉರ್ದು ಪ್ರಣಾಳಿಕೆಯನ್ನಷ್ಟೇ ಪ್ರಕಟಿಸಿ ಕನ್ನಡವನ್ನೇ ಮೂಲೆಗುಂಪು ಮಾಡಿಬಿಡುವ ದಿನಗಳು ದೂರವಿಲ್ಲ.
@BLRrocKS @shamsundar_sk @kashyapnandan_ @KPCCKarnataka @OneindiaKannada Yup. We Malayalees make 17 % of Bangalore ;)
— Tinu Cherian Abraham (@tinucherian) August 10, 2015 ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಮರಾಠಿ ಪಕ್ಷಗಳು ನಗರಸಭೆಗಳಲ್ಲಿ ನಿರ್ಣಯ ತೆಗೆದುಕೊಂಡಂತೆ ಮುಂದೊಂದು ದಿನ ಬೆಂಗಳೂರಿನ ಈ ಭಾಗವನ್ನು ಆಂಧ್ರಕ್ಕೆ ತಮಿಳುನಾಡಿಗೆ ಸೇರಿಸಿಬಿಡಿ ಎಂಬ ನಿರ್ಣಯಗಳೂ ಕೇಳಿ ಬರಬಹುದು.
ಒಟ್ಟಿನಲ್ಲಿ ಕನ್ನಡ, ಕರ್ನಾಟಕ ಎಂದು ಎದೆತಟ್ಟಿ ಹೇಳುತ್ತಾ ದೇಶವನ್ನೇ ಎದುರುಹಾಕಿಕೊಳ್ಳುವ ಪಕ್ಷವೊಂದು ಕರ್ನಾಟಕದಲ್ಲಿ ಇಲ್ಲದ ಫಲಗಳನ್ನು ನಾವೀಗ ನೋಡುತ್ತಿದ್ದೇವೆ.
ದೇಶ ಮೊದಲು ಎಂಬ 'ವಿಶಾಲ ಮನೋಭಾವವನ್ನು' ತೊರೆದು ರಾಜ್ಯ ಮೊದಲು ಭಾಷೆ ಮೊದಲು ಎಂಬ 'ಸಂಕುಚಿತ ಮನೋಭಾವವನ್ನು' ಬೆಳೆಸಿಕೊಳ್ಳದಿದ್ದರೆ ಈ ರಾಜಕಾರಣಿಗಳ ಸೋಗಲಾಡಿತನದಿಂದ ಕನ್ನಡಕ್ಕೆ ಚೇತರಿಸಿಕೊಳ್ಳಲಾಗದ ಪೆಟ್ಟು ಬೀಳುತ್ತದೆ.
ಸೂಚನೆ: ಈ ಸುದ್ದಿ ಹಿಂಗ್ಯಾಕೆ.ಕಾಂ ನಲ್ಲಿ ಪೂರ್ವಪ್ರಕಟಿತ ಲೇಖನವಾಗಿದೆ. ಇಲ್ಲಿರುವ ಅಭಿಪ್ರಾಯಗಳ ಹಕ್ಕು ಬಾಧ್ಯತೆ ಲೇಖಕರಿಗೆ ಸಲ್ಲುತ್ತದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications