ಕಾಂಗ್ರೆಸ್ ಸರ್ಕಾರದ ಬಹು ಭಾಷೆ ಪ್ರಣಾಳಿಕೆಗೆ ಪ್ರತಿಕ್ರಿಯೆ
ಬಿಬಿಎಂಪಿ ಚುನಾವಣೆಯನ್ನು ಮುಂದಕ್ಕೆ ಹಾಕುವ ಸರಕಾರದ ಎಲ್ಲಾ ಪ್ರಯತ್ನಗಳನ್ನೂ ನ್ಯಾಯಾಲಯಗಳು ತಳ್ಳಿಹಾಕಿದ ಪರಿಣಾಮವಾಗಿ ಈ ತಿಂಗಳಾಂತ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ. ಪಕ್ಷಗಳ ರಾಜಕೀಯ ಚಟುವಟಿಕೆಯೂ ಹೆಚ್ಚಾಗಿದೆ.
ನಿನ್ನೆ ಕಾಂಗ್ರೆಸ್ ಪಕ್ಷವು ಬಿಬಿಎಂಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಬಿಬಿಎಂಪಿಯನ್ನು ಮೂರಾಗಿ ಐದಾಗಿ ವಿಭಜಿಸಲು ವಿಪರೀತವಾಗಿ ಪ್ರಯತ್ನಪಟ್ಟು ಸದ್ಯಕ್ಕೆ ವಿಫಲವಾಗಿರುವ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಕನ್ನಡ, ಇಂಗ್ಲೀಷ್, ಉರ್ದು, ತಮಿಳು, ತೆಲುಗು ಭಾಷೆಗಳಲ್ಲಿ ಪ್ರಕಟಮಾಡಿ ವೋಟುಗಳಿಗೋಸ್ಕರ ಬೆಂಗಳೂರಿನಲ್ಲಿ ಕನ್ನಡವನ್ನು ಇಲ್ಲವಾಗಿಸುವುದಕ್ಕೂ ತಾನು ಹೇಸುವುದಿಲ್ಲ ಎಂದು ತೋರಿಸಿಕೊಟ್ಟಿದೆ. [ಬಿಬಿಎಂಪಿ ಚುನಾವಣೆ : ಸಮಗ್ರ ಸುದ್ದಿಗಳಿಗೆ ಕ್ಲಿಕ್ಕಿಸಿ]
ಸಾಮಾನ್ಯವಾಗಿ ಪ್ರಣಾಳಿಕೆಯನ್ನು ಕನ್ನಡದಲ್ಲಿ ಮತ್ತು ನಮಗೆ ಬೇಕೋ ಬೇಡವೋ ಅನಿವಾರ್ಯವಾಗಿಬಿಟ್ಟಿರುವ ಇಂಗ್ಲೀಷಿನಲ್ಲಿ ಬಿಡುಗಡೆಗೊಳಿಸಲಾಗುತ್ತದೆ. ಸಿಲಿಕಾನ್ ವ್ಯಾಲಿ ಎಂದು ಹೆಸರು ಗಳಿಸಿಕೊಂಡ ಕರ್ನಾಟಕದಲ್ಲಿ ಅನ್ಯಭಾಷಿಕರ ಸಂಖೈ ಹೆಚ್ಚುತ್ತಲೇ ಇರುವುದು ಸತ್ಯ. [ಕಾಂಗ್ರೆಸ್ ಪ್ರಣಾಳಿಕೆಯ ಭರವಸೆಗಳು]
ಜೊತೆಗೆ ಬೆಂಗಳೂರು ತಮಿಳುನಾಡು ಮತ್ತು ಆಂಧ್ರ ಗಡಿಗಳಿಗೆ ಹೊಂದಿಕೊಂಡಂತೆಯೇ ಇರುವುದರಿಂದ ಸಹಜವಾಗಿ ಅನೇಕ ಪ್ರದೇಶಗಳಲ್ಲಿ ತೆಲುಗು ಮತ್ತು ತಮಿಳು ಭಾಷಿಕರು ನೆಲೆಸಿದ್ದಾರೆ.

ಅನ್ಯ ರಾಜ್ಯಗಳಿಂದ ಬಂದವರು ಕನ್ನಡ ಕಲಿಯುವಂತೆ ಪ್ರೇರೇಪಿಸಬೇಕಾದ ಕರ್ನಾಟಕ ಸರಕಾರ ಅವರ ವೋಟುಗಳನ್ನು ಪಡೆಯಲೋಸುಗ ಅವರ ಭಾಷೆಯಲ್ಲಿಯೇ ಪ್ರಣಾಳಿಕೆ ಬಿಡುಗಡೆ ಮಾಡುವಂತಹ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿರುವುದು ಸರಿಯೇ? [ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ? ಪರೀಕ್ಷಿಸಿ]
ಆಂಧ್ರದ ಒವೈಸಿ, ಚಂದ್ರಬಾಬು ನಾಯ್ಡು ತಮಿಳುನಾಡಿನ ಜಯಲಲಿತಾ ತಮ್ಮ ತಮ್ಮ ಪಕ್ಷವನ್ನು ಬಿಬಿಎಂಪಿ ಚುನಾವಣೆಗೆ ಅಣಿಗೊಳಿಸುತ್ತಿದೆಯಂತೆ ಎಂಬ ಸುದ್ದಿಗಳು ಕಾಂಗ್ರೆಸ್ಸಿನ ಈ ನಿರ್ಧಾರಕ್ಕೆ ಕಾರಣವಾಯಿತಾ? ಕನ್ನಡಿಗರ ರಾಷ್ಟ್ರೀಯ ಪಕ್ಷಗಳ ಮೇಲಿನ ಪ್ರೇಮದಿಂದ ಹಿಂದಿ ಹೇರಿಕೆಯೆಂಬುದು ನಿರಂತರವಾಗಿಬಿಟ್ಟಿದೆ.[ಬಿಬಿಎಂಪಿ ಚುನಾವಣಾ ವೇಳಾಪಟ್ಟಿ]
ಈಗ ಬೆಂಗಳೂರಿನಲ್ಲಿ ಅನ್ಯಭಾಷಾ ಪ್ರಣಾಳಿಕೆಯನ್ನು ಕಣ್ಣು ಕಣ್ಣು ಬಿಟ್ಟು ನೋಡುವ ಸರದಿ ಬೆಂಗಳೂರಿಗರದು. ಬಿಬಿಎಂಪಿ ವಿಭಜನೆಯಾಗುವ ಮುನ್ನವೇ ಭಾಷಾ ವಿರೋಧಿಯಾಗಿ ವರ್ತಿಸುತ್ತಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಪ್ಪಿತಪ್ಪಿ 'ಆಡಳಿತದ' ಹೆಸರಿನಲ್ಲಿ ಬಿಬಿಎಂಪಿಯನ್ನು ವಿಭಜನಗೊಳಿಸಿಬಿಟ್ಟರೆ ಯಾವ ರೀತಿ ವರ್ತಿಸಬಹುದು? [40 ವಾರ್ಡ್ ಗಳ ಪೂರ್ವ ತಯಾರಿ ವರದಿ]
ತೆಲುಗು ಭಾಷಿಕರು ಹೆಚ್ಚಿರುವ ಪ್ರದೇಶದಲ್ಲಿ ಕೇವಲ ತೆಲುಗು ಪ್ರಣಾಳಿಕೆ, ತಮಿಳರು ಹೆಚ್ಚಿರುವ ಕಡೆ ತಮಿಳು ಪ್ರಣಾಳಿಕೆ, ಉರ್ದು ಭಾಷಿಕರಿರುವ ಕಡೆ (ಇಲ್ಲಿರುವ ಮುಸ್ಲಿಮರು ಮಾತನಾಡುವುದು ಉರ್ದುವಾ?) ಉರ್ದು ಪ್ರಣಾಳಿಕೆಯನ್ನಷ್ಟೇ ಪ್ರಕಟಿಸಿ ಕನ್ನಡವನ್ನೇ ಮೂಲೆಗುಂಪು ಮಾಡಿಬಿಡುವ ದಿನಗಳು ದೂರವಿಲ್ಲ.
@BLRrocKS @shamsundar_sk @kashyapnandan_ @KPCCKarnataka @OneindiaKannada Yup. We Malayalees make 17 % of Bangalore ;)
— Tinu Cherian Abraham (@tinucherian) August 10, 2015 ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಮರಾಠಿ ಪಕ್ಷಗಳು ನಗರಸಭೆಗಳಲ್ಲಿ ನಿರ್ಣಯ ತೆಗೆದುಕೊಂಡಂತೆ ಮುಂದೊಂದು ದಿನ ಬೆಂಗಳೂರಿನ ಈ ಭಾಗವನ್ನು ಆಂಧ್ರಕ್ಕೆ ತಮಿಳುನಾಡಿಗೆ ಸೇರಿಸಿಬಿಡಿ ಎಂಬ ನಿರ್ಣಯಗಳೂ ಕೇಳಿ ಬರಬಹುದು.
ಒಟ್ಟಿನಲ್ಲಿ ಕನ್ನಡ, ಕರ್ನಾಟಕ ಎಂದು ಎದೆತಟ್ಟಿ ಹೇಳುತ್ತಾ ದೇಶವನ್ನೇ ಎದುರುಹಾಕಿಕೊಳ್ಳುವ ಪಕ್ಷವೊಂದು ಕರ್ನಾಟಕದಲ್ಲಿ ಇಲ್ಲದ ಫಲಗಳನ್ನು ನಾವೀಗ ನೋಡುತ್ತಿದ್ದೇವೆ.
ದೇಶ ಮೊದಲು ಎಂಬ 'ವಿಶಾಲ ಮನೋಭಾವವನ್ನು' ತೊರೆದು ರಾಜ್ಯ ಮೊದಲು ಭಾಷೆ ಮೊದಲು ಎಂಬ 'ಸಂಕುಚಿತ ಮನೋಭಾವವನ್ನು' ಬೆಳೆಸಿಕೊಳ್ಳದಿದ್ದರೆ ಈ ರಾಜಕಾರಣಿಗಳ ಸೋಗಲಾಡಿತನದಿಂದ ಕನ್ನಡಕ್ಕೆ ಚೇತರಿಸಿಕೊಳ್ಳಲಾಗದ ಪೆಟ್ಟು ಬೀಳುತ್ತದೆ.
ಸೂಚನೆ: ಈ ಸುದ್ದಿ ಹಿಂಗ್ಯಾಕೆ.ಕಾಂ ನಲ್ಲಿ ಪೂರ್ವಪ್ರಕಟಿತ ಲೇಖನವಾಗಿದೆ. ಇಲ್ಲಿರುವ ಅಭಿಪ್ರಾಯಗಳ ಹಕ್ಕು ಬಾಧ್ಯತೆ ಲೇಖಕರಿಗೆ ಸಲ್ಲುತ್ತದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications