'ಮರು ಮತದಾನ ಇಲ್ಲ, ಮತದಾನ ಪ್ರಮಾಣ ತೃಪ್ತಿ ತಂದಿಲ್ಲ'
ಬೆಂಗಳೂರು, ಆಗಸ್ಟ್ 23: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗಾಗಿ ಶನಿವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಕೆಲ ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಒಟ್ಟಾರೆಯಾಗಿ ಪ್ರಕ್ರಿಯೆ ಯಶಸ್ವಿಯಾಗಿದೆ. ಯಾವುದೇ ಮತಗಟ್ಟೆಯಲ್ಲೂ ಮರು ಮತದಾನ ನಡೆಸುವುದಿಲ್ಲ, ಆಗಸ್ಟ್ 25ರಂದು ನಿಗದಿಯಂತೆ ಮತಎಣಿಕೆ ನಡೆಸಲಾಗುವುದು ಎಂದು ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಅವರು ಹೇಳಿದರು.
ಬಿಬಿಎಂಪಿ ಚುನಾವಣೆಯಲ್ಲಿ ಒಟ್ಟಾರೆ ಶೇ.49.31ರಷ್ಟು ಮತದಾನವಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಶೇ.5.27ರಷ್ಟು ಹೆಚ್ಚಳವಾಗಿದೆ. ಚುನಾವಣೆ ನಡೆದ 197 ವಾರ್ಡ್ಗಳಲ್ಲಿ 73,28,578 ಮತದಾರರ ಪೈಕಿ 36,13,831 ಮತದಾರರು ಈ ಬಾರಿ ಮತ ಚಲಾಯಿಸಿದ್ದಾರೆ ಎಂದು ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ತಿಳಿಸಿದರು. [ವಿಜಯವಾಣಿ- ಈಟಿವಿ ಸಮೀಕ್ಷೆ: ಕಾಂಗ್ರೆಸ್ ಸೆಂಚುರಿ, ಬಿಜೆಪಿಗೆ ವರಿ!]
ಜತೆಗೆ ಸ್ವಯಂ ಸೇವಾ ಸಂಸ್ಥೆಗಳು ಚುನಾವಣಾ ಆಯೋಗ, ಬಿಬಿಎಂಪಿ, ಶಾಲಾ-ಕಾಲೇಜುಗಳ ಮೂಲಕ ಮತದಾನದ ಬಗ್ಗೆ ಸಾಕಷ್ಟು ಅರಿವು ಮೂಡಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮತದಾನವಾಗದಿರುವುದರ ಬಗ್ಗೆ ಬೇಸರವಾಗಿದೆ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಬಿಬಿಎಂಪಿ ಆಯುಕ್ತ ಕುಮಾರ್ ನಾಯರ್ ಮಾತನಾಡಿ, ಮತದಾನದ ಪ್ರಮಾಣ ಹೆಚ್ಚಳವಾಗಿರುವುದು ಸಂತಸದ ವಿಷಯ. ಮುಂದಿನ ದಿನಗಳಲ್ಲಿ ಇದರ ಪ್ರಮಾಣ ಇನ್ನೂ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದರು.
ಸುದ್ದಿಗೋಷ್ಠಿ ಮುಖ್ಯಾಂಶಗಳು ಇಲ್ಲಿವೆ:
* ವಾರ್ಡ್ ನಂ.85 ಮಹದೇವಪುರ ವಿಧಾನಸಭಾ ಕ್ಷೇತ್ರದ ದೊಡ್ಡನೆಕ್ಕುಂದಿಯಲ್ಲಿ ಅತಿ ಕಡಿಮೆ ಅಂದರೆ ಶೇ.37.23ರಷ್ಟು ಮತದಾನವಾಗಿದೆ. [ಮತದಾನ ಪ್ರಮಾಣ ಇಳಿಕೆ ಕಾರಣ ಬಿಚ್ಚಿಟ್ಟ ಎಚ್ಡಿಕೆ]
* ಸ್ವಯಂ ಸೇವಾ ಸಂಸ್ಥೆಗಳು ಚುನಾವಣಾ ಆಯೋಗ, ಬಿಬಿಎಂಪಿ, ಶಾಲಾ-ಕಾಲೇಜುಗಳ ಮೂಲಕ ಮತದಾನದ ಬಗ್ಗೆ ಸಾಕಷ್ಟು ಅರಿವು ಮೂಡಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮತದಾನವಾಗಿಲ್ಲ.
* ಎಲ್ಲಾ ವಾರ್ಡ್ ಗಳಲ್ಲೂ ಶಾಂತಿಯುತವಾಗಿ ಮತದಾನ ನಡೆದಿದ್ದು, ಎಲ್ಲಿಯೂ ಕೂಡ ಮರುಮತದಾನದ ಅಗತ್ಯ ಕಂಡುಬಂದಿಲ್ಲ
* ಆ.25 (ಮಂಗಳವಾರ) ರಂದು ಬೆಳಗ್ಗೆ 8 ಗಂಟೆಯಿಂದ ನಿಗದಿಯಂತೆ ಮತ ಎಣಿಕೆ ನಡೆಯಲಿದೆ.
* ವಿಧಾನಸಭಾ ಕ್ಷೇತ್ರವಾರು 27 ಮತ ಎಣಿಕೆ ಕೇಂದ್ರಗಳನ್ನು ತೆರೆಯಲಾಗಿದೆ.
* ಕೆ.ಆರ್.ಪುರ ವಿಧಾನಸಭೆ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 19 ಸುತ್ತು ಮತ ಎಣಿಕೆ ನಡೆಯಲಿದೆ
* ಮತ ಎಣಿಕೆಗೆ 3,180 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಒಬ್ಬ ಚುನಾವಣಾಧಿಕಾರಿಗೆ 1 ಆರ್ಒ ಟೇಬಲ್ ಸೇರಿದಂತೆ 14 ಟೇಬಲ್ಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.
* ಮತ ಎಣಿಕೆ ಕಾರ್ಯದಲ್ಲಿ 304 ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದ್ದು, ಮತ ಎಣಿಕೆ ಕೇಂದ್ರದ ಒಂದು ಕಿಮೀ ವ್ಯಾಪ್ತಿಯ ಹೊರಗೂ ಪಾನಮುಕ್ತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ.
* ಆಗಸ್ಟ್ 25ರಂದು ಬೆಳಗ್ಗೆ 6ರಿಂದ 8ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
(ಒನ್ ಇಂಡಿಯಾ ಸುದ್ದಿ)
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications