ವಿಜಯವಾಣಿ- ಈಟಿವಿ ಸಮೀಕ್ಷೆ: ಕಾಂಗ್ರೆಸ್ ಸೆಂಚುರಿ, ಬಿಜೆಪಿಗೆ ವರಿ!
ಬೆಂಗಳೂರು, ಆಗಸ್ಟ್ 23: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಮತದಾನ ಕಡಿಮೆಯಾಗಿರುವುದರಿಂದ ಯಾವ ಪಕ್ಷಕ್ಕೆ ಲಾಭ? ಯಾವ ಪಕ್ಷಕ್ಕೆ ನಷ್ಟ? ಚುನಾವಣೋತ್ತರ ಸಮೀಕ್ಷೆ ಏನು ಹೇಳುತ್ತದೆ ಎಂಬ ಲೆಕ್ಕಾಚಾರ ಆರಂಭಗೊಂಡಿದೆ.
ಆಡಳಿತಾರೂಢ ಕಾಂಗ್ರೆಸ್ ಪಕ್ಷ ಈ ಬಾರಿ ಬಿಬಿಎಂಪಿ ಚುನಾವಣೆಯಲ್ಲೂ ಮೇಲುಗೈ ಸಾಧಿಸಲಿದೆ ಎಂದು ವಿಜಯವಾಣಿ ಹಾಗೂ ಈಟಿವಿ ಕನ್ನಡ ಚುನಾವಣಾ ಪೂರ್ವ ಸಮೀಕ್ಷೆ ಹಾಗೂ ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ.[ವಿಜಯವಾಣಿ-ಈಟಿವಿ ಚುನಾವಣಾ ಪೂರ್ವ ಸಮೀಕ್ಷೆ]
ಮತದಾರರ ನಿರುತ್ಸಾಹದ ನಡುವೆ ವಿವಿಧ ಮಾಧ್ಯಮಗಳ ಸಮೀಕ್ಷೆ ವರದಿಗಳು ಬರುತ್ತಿವೆ, ಮತದಾನ ಪ್ರಮಾಣ ಕಡಿಮೆಯಾಗಿದ್ದಕ್ಕೆ ವಿವಿಧ ಪಕ್ಷಗಳು ಚುನಾವಣಾ ಆಯೋಗಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ತಲೆಕೆಡಿಸಿಕೊಂಡಿದೆ. ಮತಯಂತ್ರದಲ್ಲಿ ಭದ್ರವಾಗಿರುವ ಜನಾದೇಶ ತಿಳಿಯಲು ಆಗಸ್ಟ್ .25ರ ತನಕ ಕಾಯಬೇಕು. [ಸುದ್ದಿವಾಹಿನಿಗಳ ಸಮೀಕ್ಷೆಗಳ ಸಂಗ್ರಹ]
ಬಿಬಿಎಂಪಿಯ ಒಟ್ಟು 198 ವಾರ್ಡ್ಗಳ ಪೈಕಿ 197 ಸ್ಥಾನಗಳಿಗೆ ಚುನಾವಣೆ ನಡೆಸಲಾಯಿತು.. ಹೊಂಗಸಂದ್ರ ವಾರ್ಡ್ನಲ್ಲಿ ಬಿಜೆಪಿ ಅಭ್ಯರ್ಥಿ ಭಾರತಿ ರಾಮಚಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ 197, ಕಾಂಗ್ರೆಸ್ನ 197, ಜೆಡಿಎಸ್ನ 187, 399 ಪಕ್ಷೇತರರು ಸೇರಿ ಒಟ್ಟು 1,121 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕಾಂಗ್ರೆಸ್ ಸೆಂಚುರಿ, ಬಿಜೆಪಿಗೆ ವರಿ!
ವಿಜಯವಾಣಿ- ಈಟಿವಿ ಸಮೀಕ್ಷೆ ಪ್ರಕಾರ ಕಾಂಗ್ರೆಸ್ಗೆ 101 ಸ್ಥಾನಗಳ ನಿರೀಕ್ಷೆಯಿದ್ದು, ಬಿಜೆಪಿ ಬಲ 75 ಸ್ಥಾನಗಳಿಗೆ ಕುಸಿಯುವ ಸಾಧ್ಯತೆಯಿದೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡಿದ್ದ ಜೆಡಿಎಸ್ ಬಲ 20 ಸ್ಥಾನಗಳಿಗೆ ವೃದ್ಧಿಸಲಿದೆ. 3 ಪಕ್ಷಗಳ ತ್ರಿಕೋನ ಸ್ಪರ್ಧೆಯಲ್ಲಿ ಇತರೆ ಅಭ್ಯರ್ಥಿಗಳ ಗೆಲುವು 2ಕ್ಕೆ ಸೀಮಿತವಾಗಲಿದೆ.

ಕಾಂಗ್ರೆಸ್ ಫಲಿತಾಂಶ ನಿರೀಕ್ಷಿತವಾಗಿದೆ
ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲದಿರುವುದು, ಹಲವು ಭಾಗ್ಯ ಯೋಜನೆಗಳ ನೇರ ಫಲಾನುಭವಿಗಳು ಹಾಗೂ ಅಹಿಂದ ವರ್ಗ ಕೈ ಹಿಡಿದಿದ್ದು, ಅಲ್ಪಸಂಖ್ಯಾತ ಮತಗಳು, ಸಿದ್ದರಾಮಯ್ಯ ಅವರ ಆಡಳಿತದ ಮೇಲೆ ಇನ್ನೂ ಜನತೆ ಭರವಸೆ ಇಟ್ಟುಕೊಂಡಿದ್ದಾರೆ. ಹೀಗಾಗಿ ಆಡಳಿತ ಪಕ್ಷದ ಪರ ಹೆಚ್ಚಿನ ಪ್ರಮಾಣದಲ್ಲಿ ಮತಗಳು ಬಂದಿವೆ.

ಕಮಲದಲ್ಲಿ ಮೂಡಿದ ಒಡಕು ಮತ ವಿಭಜನೆ
ನಗರ ಪ್ರದೇಶದ ಮತದಾರರನ್ನು ಸೆಳೆಯಲು ಆರ್ ಅಶೋಕ್ ಅವರು ಮಾಡಿದ ತಂತ್ರಗಳು ಕೊನೆ ಕ್ಷಣದಲ್ಲಿ ಮುಳುವಾಯಿತು. ನಾಯಕತ್ವದಲ್ಲಿ ಭಿನ್ನಮತ, ವ್ಯಾಪಕ ಭ್ರಷ್ಟಾಚಾರದ ಆರೋಪ, ಮತ ಸೆಳೆಯುವ ಸ್ಥಳೀಯ ನಾಯಕತ್ವದ ಕೊರತೆ, ನಾಯಕರ ಮಧ್ಯೆ ಸಮನ್ವಯದ ಕೊರತೆ , ಲಿಂಗಾಯಿತ ಮತ್ತು ಒಕ್ಕಲಿಗ ನಾಯಕತ್ವದ ತಿಕ್ಕಾಟ, ಯಡಿಯೂರಪ್ಪ ಅವರ ಗೈರು, ತಂತ್ರಜ್ಞಾನಕ್ಕೆ ಮೊರೆ ಘಾಕಿದ್ದು ಎಲ್ಲವೂ ಕೈಕೊಟ್ಟಿತು.

ಗೊತ್ತು ಗುರಿ ಇಲ್ಲದ ಜೆಡಿಎಸ್ ಕಿಂಗ್ ಮೇಕರ್
ಗೊತ್ತು ಗುರಿ ಇಲ್ಲದ ಪ್ರಚಾರದ ಭರಾಟೆಯಲ್ಲಿ ಕಳೆದು ಹೊದ ಜೆಡಿಎಸ್ ಪಕ್ಷ ಕಿಂಗ್ ಮೇಕರ್ ಆಗುವ ಕನಸು ಕಾಣುತ್ತಿದೆ. ಅದರೆ, 20ಕ್ಕಿಂತ ಕಡಿಮೆ ಸ್ಥಾನ ಪಡೆಯುವ ಆತಂಕ ಇರುವುದರಿಂದ ಜೆಡಿಎಸ್ ತನ್ನ ಅಸ್ತಿತ್ವದ ಬಗ್ಗೆ ಪ್ರಶ್ನಿಸಿಕೊಳ್ಳಬೇಕಿದೆ. ಕಾಂಗ್ರೆಸ್ ನಿಂದ ಅಹಿಂದ, ಅಲ್ಪಸಂಖ್ಯಾತರ ಮತಗಳನ್ನು ಕಿತ್ತುಕೊಂಡರೂ ಬಿಜೆಪಿ ಭಿನ್ನಮತದ ಲಾಭ ಪಡೆಯಲು ಜೆಡಿಎಸ್ ಗೆ ಸಾಧ್ಯವಾಗಿಲ್ಲ. ಇಲ್ಲದಿದ್ದರೆ ಒಕ್ಕಲಿಗರ ಓಟೆಲ್ಲ ಜೆಡಿಎಸ್ ಪಾಲಾಗುತ್ತಿತ್ತು.

ಅಧಿಕಾರ ಹಿಡಿಯಲು 130 ಸದಸ್ಯ ಬಲ ಬೇಕು
198 ವಾರ್ಡ್ಗಳ ಜತೆಗೆ, 61 ಶಾಸಕರು, ಮೇಲ್ಮನೆ ಸದಸ್ಯರು, ಸಂಸದರು ಸೇರಿ ಒಟ್ಟು 259 ಸದಸ್ಯ ಬಲದ ಪಾಲಿಕೆಯಲ್ಲಿ ಯಾರೇ ಅಧಿಕಾರ ಹಿಡಿಯಲು 130 ಸದಸ್ಯ ಬಲ ಬೇಕೇಬೇಕು. ಅದಕ್ಕಾಗಿ ಕಾಂಗ್ರೆಸ್ 104 ಸ್ಥಾನ ಗೆಲ್ಲುವುದು ಅನಿವಾರ್ಯವಾಗಿದೆ. 28 ಶಾಸಕರು, ಸಂಸದರ ಬಲ ಹೊಂದಿರುವ ಬಿಜೆಪಿಗೆ 102 ಸ್ಥಾನ ಗೆಲ್ಲಬೇಕು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications