ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್ಸಿಗೆ ಮುಖಭಂಗ
ಬೆಂಗಳೂರು, ಆಗಸ್ಟ್ 25: ಸಮೀಕ್ಷೆಗಳ ವರದಿಗಳನ್ನು ಸುಳ್ಳು ಮಾಡಿ, ಸಿದ್ದರಾಮಯ್ಯ ಅವರ ಅಬ್ಬರಕ್ಕೆ ಬ್ರೇಕ್ ಹಾಕಿರುವ ಬಿಜೆಪಿ ಮತ್ತೊಮ್ಮೆ ಬಿಬಿಎಂಪಿ ಚುನಾವಣೆಯಲ್ಲಿ ಜಯಭೇರಿ ಬಾರಿಸಿದೆ. ನೂರು ಸ್ಥಾನ ಗಳಿಸಿರುವ ಬಿಜೆಪಿ ಬಹುಮತ ಸಾಬೀತುಪಡಿಸಲು ಬೇಕಾದ ಮ್ಯಾಜಿಕ್ ನಂಬರ್ ಗಳಿಸಲಿದೆ.
ಬಿಜೆಪಿಯ 197, ಕಾಂಗ್ರೆಸ್ನ 197, ಜೆಡಿಎಸ್ನ 187, 399 ಪಕ್ಷೇತರರು ಸೇರಿ ಒಟ್ಟು 1,121 ಅಭ್ಯರ್ಥಿಗಳು ಕಣದಲ್ಲಿದ್ದ ಚುನಾವಣೆಯ ಫಲಿತಾಂಶ ಆಗಸ್ಟ್ 25ರಂದು ಬಹಿರಂಗಗೊಂಡಿದೆ.
| ಒಟ್ಟು ಸ್ಥಾನಗಳು | ಬಿಜೆಪಿ | ಕಾಂಗ್ರೆಸ್ | ಜೆಡಿಎಸ್ | ಇತರೆ |
| 198 | 100 | 76 | 14 | 8 |
ಫಲಿತಾಂಶ: ಬೆಂಗಳೂರು ದಕ್ಷಿಣ | ಉತ್ತರ ಜಿಲ್ಲೆ | ನಗರ ಜಿಲ್ಲೆ| ಸೆಂಟ್ರಲ್ ಜಿಲ್ಲೆ
ಈ ಸಮಯ (13.15)ಕ್ಕೆ ಫಲಿತಾಂಶ: ಬಿಜೆಪಿ 100; ಕಾಂಗ್ರೆಸ್ 76; ಜೆಡಿಎಸ್ 14; ಇತರೆ 8. ಹಿಂದಿನ ಅವಧಿಯಲ್ಲಿ ಬಿಬಿಎಂಪಿಯಲ್ಲಿ ಕಾಂಗ್ರೆಸ್ 65 ಸದಸ್ಯ ಬಲ ಹೊಂದಿತ್ತು ಬಿಜೆಪಿ 111 ಸ್ಥಾನ ಗಳಿಸಿತ್ತು. ಜೆಡಿಎಸ್ 15 ಸ್ಥಾನ ಪಡೆದಿತ್ತು. [ಬಿಬಿಎಂಪಿ ಫಲಿತಾಂಶ, 100 ಸ್ಥಾನಗಳಿಸಿದ ಬಿಜೆಪಿ]
ಹೊಂಗಸಂದ್ರ ವಾರ್ಡ್ನಲ್ಲಿ ಬಿಜೆಪಿ ಅಭ್ಯರ್ಥಿ ಭಾರತಿ ರಾಮಚಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದ್ದರಿಂದ, 198 ವಾರ್ಡ್ನ ಪಾಲಿಕೆಯಲ್ಲಿ 197 ವಾರ್ಡ್ಗಳಿಗೆ ಆ.22ರ ಶನಿವಾರ ಚುನಾವಣೆ ನಡೆದಿತ್ತು. ಶೇ 49ರಷ್ಟು ಮತದಾನವಾಗಿತ್ತು.

ಸಾಮಾನ್ಯ ಬಹುಮತಕ್ಕೆ: ಅಧಿಕಾರ ಹಿಡಿಯಲು 126 ಸದಸ್ಯ ಬಲ ಬೇಕು. ಸದ್ಯದ ಪರಿಸ್ಥಿತಿಯಲ್ಲಿ 100 ಸ್ಥಾನ ಪಡೆದರೂ ಕನಸು ಕಾಣಬಹುದಾಗಿತ್ತು. ಈ 198 ವಾರ್ಡ್ಗಳ ಜತೆಗೆ, 61 ಶಾಸಕರು, ಮೇಲ್ಮನೆ ಸದಸ್ಯರು, ಸಂಸದರು ಸೇರಿ ಒಟ್ಟು 250 ಸದಸ್ಯ ಬಲದ ಪಾಲಿಕೆಯಲ್ಲಿ ಯಾರೇ ಅಧಿಕಾರ ಹಿಡಿಯಲು 126 ಸದಸ್ಯ ಬಲ ಬೇಕೇಬೇಕು. [ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ಟ್ವೀಟ್]
ಕಾಂಗ್ರೆಸ್ 104 ಸ್ಥಾನ ಗೆಲ್ಲುವುದು ಅನಿವಾರ್ಯವಾಗಿತ್ತು. 28 ಶಾಸಕರು, ಸಂಸದರ ಬಲ ಹೊಂದಿರುವ ಬಿಜೆಪಿಗೆ 103 ಸ್ಥಾನ ಗೆಲ್ಲಬೇಕು. ಪಕ್ಷೇತರರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದರೆ ಗದ್ದುಗೆ ಅವಕಾಶ ಕಾಂಗ್ರೆಸ್ಗೆ ಸಿಗುವ ನಿರೀಕ್ಷೆ ಇಟ್ಟುಕೊಂಡಿತ್ತು
ಒಂದು ವೇಳೆ ಬಿಜೆಪಿ 75ಕ್ಕಿಂತ ಕಡಿಮೆ ಬಂದರೆ ಬಿಜೆಪಿ ಬಿಬಿಎಂಪಿಯಲ್ಲಿ ಈ ಬಾರಿ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಬಿಜೆಪಿ ಜೊತೆಗೆ ಜೆಡಿಎಸ್ ಕೈ ಜೋಡಿಸಿದರೆ ಮ್ಯಾಜಿಕ್ ನಂಬರ್ ದಾಟಬಹುದು ಸಲಿದೆ ಎಂಬ ಲೆಕ್ಕಾಚಾರ ಸುಳ್ಳಾಗಿದೆ. 119 ಸ್ಥಾನ ನಿರೀಕ್ಷೆ ಹೊಂದಿದ್ದ ಜೆಡಿಎಸ್ ಭಾರಿ ಮುಖಭಂಗ ಅನುಭವಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications