ಬಿಬಿಎಂಪಿ ಅಭ್ಯರ್ಥಿಗಳಿಗೆ ಬಿಪ್ಯಾಕ್ ನಿಂದ ತರಬೇತಿ
ಬೆಂಗಳೂರು, ಆಗಸ್ಟ್. 17: ಬೆಂಗಳೂರು ಮಹಾನಗರದಲ್ಲಿ ಬಿಬಿಎಂಪಿ ಚುನಾವಣೆ ಕಾವು. ಅಭ್ಯರ್ಥಿಗಳು ಕುಡಿಯುವ ನೀರು, ಮೂಲ ಸೌಕರ್ಯ ಅಭಿವೃದ್ಧಿ, ಮಹಿಳಾ ಸುರಕ್ಷತೆ, ಪಾರದರ್ಶಕ ಆಡಳಿತ ಎಂಬ ಅನೇಕ ಅಂಶಗಳ ಆಧಾರದಲ್ಲಿಯೇ ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ.
ನಗರದ ವಿವಿಧ ವಾರ್ಡ್ ಗಳ ಒಟ್ಟು 20 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುವ ಬೆಂಗಳೂರು ಪೊಲಿಟಿಕಲ್ ಆಕ್ಷನ್ ಕಮಿಟಿ(ಬಿಪ್ಯಾಕ್) ವಿವಿಧ ಬಗೆಯ ತರಬೇತಿ ನೀಡಿದೆ. ಸ್ವಚ್ಛ ಬೆಂಗಳೂರು ನಿರ್ಮಾಣದ ಕುರಿತಾಗಿ ಸಮಗ್ರ ತಿಳಿವಳಿಕೆ ನೀಡಿದೆ. [ಬಿಬಿಎಂಪಿ ಚುನಾವಣೆಯಲ್ಲಿ ನೋಟಾ ಅವಕಾಶ ಏಕಿಲ್ಲ?]

ಪ್ರಕಾಶ್ ನಗರ(98) ವಾರ್ಡ್ ನ ಬಿಜೆಪಿಯ ದೇವಿಕಾ ರಾಜ್, ಲೋಕಸತ್ತಾ ಪಕ್ಷದ ಶಿಲ್ಪಾ ಪವಾರ್ ಮತ್ತು ಲಕ್ಷ್ಮೀ ಮೊಳಾ(ಕರಿಸಂದ್ರ ಮತ್ತು ಪಟ್ಟಾಭಿರಾಮನಗರ ವಾರ್ಡ್) ಸೇರಿದಂತೆ ಎಲ್ಲರಿಗೂ ಸ್ವಚ್ಛ ಬೆಂಗಳೂರು ಪರಿಕಲ್ಪನೆಯನ್ನು ಮನದಟ್ಟು ಮಾಡಿಕೊಡಲಾಗಿದೆ.[ಬಿಬಿಎಂಪಿ ಚುನಾವಣೆ ದಿನ ಸಾರ್ವತ್ರಿಕ ರಜಾ ಘೋಷಣೆ]
ಬಿ ಪ್ಯಾಕ್ ನ ಅಧ್ಯಕ್ಷೆ ಕಿರಣ್ ಮಜುಂದಾರ್ ಷಾ ಮಾತನಾಡಿ, ಆಡಳಿತದಲ್ಲಿ ಬದಲಾವಣೆ ತರುವುದು ನಮ್ಮ ಉದ್ದೇಶ. ಬಿಬಿಎಂಪಿಯಲ್ಲಿನ ಭ್ರಷ್ಟಾಚಾರಗಳನ್ನು ಹಂತ ಹಂತವಾಗಿ ಕಿತ್ತೆಸೆಯಬೇಕಾಗಿದೆ. ಎಲ್ಲ ಅಭ್ಯರ್ಥಿಗಳಿಗೂ ಆಡಳಿತ ಪಾರದರ್ಶಕತೆ ಬಗ್ಗೆ ವಿಶೇಷ ತರಬೇತಿ ನೀಡಿದ್ದೇವೆ ಎಂದು ತಿಳಿಸಿದರು.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೂ ಬಿ ಪ್ಯಾಕ್ ಮತದಾನ ಜಾಗೃತಿ, ಅಭ್ಯರ್ಥಿಗಳ ನಡುವೆ ಸಂವಾದ ಸೇರಿದಂತೆ ಮಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿ ಮತ್ತು ಜನರ ನಡುವೆ ಸಂವಾದ ಏರ್ಪಡಿಸಿತ್ತು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications