ಬಿಬಿಎಂಪಿ ಚುನಾವಣೆ, ಕಾಂಗ್ರೆಸ್ ಪ್ರಣಾಳಿಕೆಯ ಭರವಸೆಗಳು
ಬೆಂಗಳೂರು, ಆಗಸ್ಟ್ 11 : ಬೆಂಗಳೂರಿನಿಂದ 60 ಕಿ.ಮೀ.ತನಕ ಜೋಡಿ ರೈಲು ಮಾರ್ಗ, ಬಿಬಿಎಂಪಿ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಬೆಳಗಿನ ಉಪಹಾರ ವಿತರಣೆ, ಮನೆ ತೆರಿಗೆ ಶೇ 24 ರಿಂದ 5ಕ್ಕೆ ಇಳಿಕೆ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೊಂದು ಡಯಾಲಿಸಿಸ್ ಕೇಂದ್ರ ಮುಂತಾದ ಭರವಸೆಗಳನ್ನು ಒಳಗೊಂಡ ಬಿಬಿಎಂಪಿ ಚುನಾವಣೆ 2015ರ ಕಾಂಗ್ರೆಸ್ ಪ್ರಣಳಿಕೆ ಬಿಡುಗಡೆಗೊಂಡಿದೆ.
ಪ್ರಣಾಳಿಕೆಗಳು: ಬಿಜೆಪಿ | ವಾಟಾಳ್ ಪಕ್ಷ | ಜೆಡಿಎಸ್ | ಲೋಕಸತ್ತಾ
ಸೋಮವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಖಾಸಗಿ ಹೋಟೆಲ್ನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಕನ್ನಡ, ತೆಲುಗು, ತಮಿಳು, ಇಂಗ್ಲಿಷ್, ಉರ್ದು ಭಾಷೆಗಳಲ್ಲಿ ಮುದ್ರಣಗೊಂಡಿರುವ 19 ಪುಟಗಳ ಐದು ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಲಾಯಿತು. [ಬಿಬಿಎಂಪಿ : ಮತದಾರರ ಪಟ್ಟಿಯಲ್ಲಿ ಹೆಸರಿದ್ಯಾ? ಪರೀಕ್ಷಿಸಿ]

ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಪರಮೇಶ್ವರ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸಲಾಗುತ್ತದೆ ಎಂದರು. ಪ್ರಣಾಳಿಕೆ ಸಮಿತಿ ಸಂಚಾಲಕ ಪ್ರೊ ಇ.ರಾಧಾಕೃಷ್ಣ, ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ರೋಷನ್ ಬೇಗ್, ದಿನೇಶ್ ಗುಂಡೂರಾವ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಪ್ರಣಾಳಿಕೆಯಲ್ಲಿನ ಪ್ರಮುಖ ಅಂಶಗಳು
* ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು ಮೋನೋ ರೈಲು ಸ್ಥಾಪನೆ
* ಬೆಂಗಳೂರು ಜೊತೆಗೆ ಕೋಲಾರ, ತುಮಕೂರು, ರಾಮನಗರ, ಕನಕಪುರ ನಗರಗಳ ಅಭಿವೃದ್ಧಿ
* ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಕಾನೂನು ತಿದ್ದುಪಡಿ
* ಮೆಟ್ರೋ ರೀಚ್-2 ಯೋಜನೆಯನ್ನು ಬಿಡದಿ, ಹೊಸಕೋಟೆ, ದೇವನಹಳ್ಳಿ, ನೆಲಮಂಗಲ, ಸೋಮನಹಳ್ಳಿಗೆ ವಿಸ್ತರಣೆ
* ಕೊಳಚೆ ಪ್ರದೇಶಗಳಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ
* ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಬೆಳಗಿನ ಉಪಹಾರ ವಿತರಣೆ
* ನಗರದ 4 ಕಡೆ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
* ರವೀಂದ್ರ ಕಲಾಕ್ಷೇತ್ರ ಮಾದರಿಯಲ್ಲಿ 5 ಕಡೆ ಕಲಾಭವನ ನಿರ್ಮಾಣ
* ಪಾಲಿಕೆ ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲಿ ಕಂಪ್ಯೂಟರ್ ತರಬೇತಿ ಕೇಂದ್ರ ಸ್ಥಾಪನೆ
* ಎಲ್ಲಾ ಬಡ ಕುಟುಂಬಗಳಿಗೆ ಉಚಿತವಾಗಿ ರೋಗ ನಿರೋಧಕ ಚುಚ್ಚುಮದ್ದು ನೀಡುವುದು
* ಉದ್ಯೋಗಸ್ಥ ಮಹಿಳೆಯರಿಗಾಗಿ ಪ್ರತಿ ವಾರ್ಡ್ನಲ್ಲಿ ಹಾಸ್ಟೆಲ್ ನಿರ್ಮಾಣ
* ಪ್ರತಿ ವಾರ್ಡ್ನಲ್ಲಿ ಆಟದ ಮೈದಾನ ನಿರ್ಮಾಣ
* ನಗರಕ್ಕೆ ಹೊಂದಿಕೊಂಡಿರುವ ಹೆದ್ದಾರಿಗಳಲ್ಲಿ ತುರ್ತು ವೈದ್ಯರ ನೆರವು ನೀಡುವ ಆಸ್ಪತ್ರೆ ನಿರ್ಮಾಣ
* ನಗರದ ನಾಲ್ಕು ವಲಯಗಳಲ್ಲಿ ದೊಡ್ಡ ಸಸ್ಯೋದ್ಯಾನ ಸ್ಥಾಪನೆ
* ನಗರದಿಂದ 60 ಕಿ.ಮೀ. ದೂರದವರೆಗೆ ಎಲ್ಲಾ ವಿಭಾಗಗಳಿಗೆ ರೈಲ್ವೆ ಜೋಡಿ ಮಾರ್ಗ ನಿರ್ಮಾಣ
* ಕಸದಲ್ಲಿರುವ ಪ್ಲಾಸ್ಟಿಕ್ ಅನ್ನು ನಗರದ ರಸ್ತೆ ನಿರ್ಮಾಣಕ್ಕೆ ಬಳಕೆ ಮಾಡುವುದು
* ಇಡೀ ನಗರಕ್ಕೆ ಸಂಪರ್ಕ ಕಲ್ಪಿಸಲು ಪೂರ್ವ-ಪಶ್ಚಿಮ, ಉತ್ತರ-ದಕ್ಷಿಣ ಮಾರ್ಗದಲ್ಲಿ ಎಲಿವೇಟೆಡ್ ಫ್ಲೈ ಓವರ್ ನಿರ್ಮಾಣ
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications