BBMP election: ಸದ್ದಿಲ್ಲದೆ ಬಿಬಿಎಂಪಿ ಚುನಾವಣೆಗೆ ಸಿದ್ಧವಾಗುತ್ತಿದೆ ಸರ್ಕಾರ!
ಬೆಂಗಳೂರು, ಮೇ. 27: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನಕ್ಕೆ ದೇಶ ಸಿದ್ಧವಾಗುತ್ತಿದೆ. ಏಳು ಹಂತಗಳಲ್ಲಿ ನಡೆದ ಚುನಾವಣೆಯ ಏಳನೇ ಹಂತ ಜೂನ್ ಒಂದರಂದು ನಡೆಯಲಿದೆ. ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇದರ ಬೆನ್ನಲ್ಲೆ ರಾಜ್ಯದಲ್ಲಿ ಬಿಬಿಎಂಪಿ ಚುನಾಚಣೆಗೆ ಸದ್ದಿಲ್ಲದೆ ಸಿದ್ಧತೆ ನಡೆಯುತ್ತಿದೆ.
ಲೋಕಸಭೆ ಚುನಾವಣೆ ಫಲಿತಾಂಶ ಬಂದ ತಕ್ಷಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಕಾರ್ಪೊರೇಟರ್ಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿಯಾಗಿರುವವರು ಆಯಾ ವಾರ್ಡ್ಗಳಲ್ಲಿ ತಮ್ಮ ಬೆಂಬಲಿಗರನ್ನು ತಳ ಮಟ್ಟದಲ್ಲಿ ಕೆಲಸ ಮಾಡುವಂತೆ, ಚುನಾವಣೆಗೆ ಸಿದ್ಧತೆ ನಡೆಸುವಂತೆ ತಿಳಿಸಿದ್ದಾರೆ.

ಚುನಾವಣೆ ನಡೆಸಲು ಸಿದ್ಧ ಎಂದಿದ್ದ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ಫಲಿತಾಂಶದ ನಂತರ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪರಿಷತ್ತಿಗೆ ಚುನಾವಣೆ ನಡೆಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಇತ್ತೀಚೆಗೆ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲೇರಲು ಚುನಾವಣಾ ಆಯೋಗದ ವರದಿಯ ಯೋಜನೆ ಮತ್ತು ಜನವರಿ ವರೆಗೆ ಇರುವ ಡಿಲಿಮಿನೇಷನ್ ಗಡುವು ಕುರಿತು ಮಾತನಾಡಿದ್ದ ಅವರು, ಅಡ್ವೊಕೇಟ್ ಜನರಲ್ ಜೊತೆಗೆ ಮತ್ತು ಸರ್ಕಾರವು ಅವರ ಅಭಿಪ್ರಾಯದ ಪ್ರಕಾರ ಕಾರ್ಯನಿರ್ವಹಿಸುತ್ತದೆ. ಡಿಲಿಮಿಟೇಶನ್ ಪ್ರಕ್ರಿಯೆ ಬಳಿಕ ಮೀಸಲಾತಿ ನೀಡಬೇಕಿತ್ತು ಎಂದಿದ್ದಾರೆ.
ಇನ್ನು, ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಮಾತನಾಡಿ, ಬಿಬಿಎಂಪಿ ಚುನಾವಣೆ ವಿಳಂಬ ಮಾಡುತ್ತಿರುವ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ನಾವು ಈಗಾಗಲೇ ನ್ಯಾಯಾಲಯದ ಮೊರೆ ಹೋಗಿದ್ದೆವು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಉತ್ತಮ ನಾಗರಿಕ ಆಡಳಿತಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

ಕಾಂಗ್ರೆಸ್ ಮುಖಂಡ ಅಭಿಲಾಷ್ ರೆಡ್ಡಿ, ಅವರ ಪತ್ನಿ ಶಿಪ್ಲಾ ಅಭಿಲಾಷ್ ರೆಡ್ಡಿ ಹೊಸ ತಿಪ್ಪಸಂದ್ರ ವಾರ್ಡ್ ಅನ್ನು ಪ್ರತಿನಿಧಿಸುತ್ತಿದ್ದು, ಎಲ್ಲರು ಮತದಾರರ ಬಳಿಗೆ ತಲುಪಿ ಅವರ ಸಮಸ್ಯೆಗಳು ಮತ್ತು ಅವರ ಆದ್ಯತೆಗಳನ್ನು ಪಟ್ಟಿ ಮಾಡಲು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
'ಬಿಜೆಪಿ ಅಧಿಕಾರಾವಧಿಯಲ್ಲಿ ಅವೈಜ್ಞಾನಿಕವಾಗಿ ವಾರ್ಡ್ಗಳ ವಿಂಗಡಣೆ ನಡೆದಿದ್ದು, ಗ್ರಾಮವನ್ನು ವಿಭಜಿಸಲಾಗಿತ್ತು. ಆದರೆ ಕಾಂಗ್ರೆಸ್ ಹಳೆಯ ವಾರ್ಡ್ಗಳ ವಿಂಗಡಣೆಯನ್ನು ತಳ್ಳಿಹಾಕಿತು. ಹಿಂದಿನ ಗಡಿಗಳನ್ನು ಮತ್ತೆ ಸ್ಥಾಪಿಸಿದೆ. ಈ ನಿರ್ಧಾರದಿಂದ ನಮಗೆ ಸಂತೋಷವಾಗಿದೆ. ನಾವು ಈಗಲೇ ಬಿಬಿಎಂಪಿ ಚುನಾವಣೆ ಎದುರಿಸಲು ಸಿದ್ಧ' ಎಂದು ಅಭಿಲಾಷ್ ರೆಡ್ಡಿ ಹೇಳಿದ್ದಾರೆ.
ನಗರ ಹೊರವಲಯದ ವಸಂತಪುರ ವಾರ್ಡ್ ಪ್ರತಿನಿಧಿಸಿದ್ದ ಶೋಭಾಗೌಡ ಮಾತನಾಡಿ, 2020ರ ಸೆಪ್ಟೆಂಬರ್ನಿಂದ ಬಿಬಿಎಂಪಿಯಲ್ಲಿ ಕಾರ್ಪೊರೇಟರ್ಗಳೇ ಇಲ್ಲ. ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಅವರ ನೆರವಿನೊಂದಿಗೆ ಮೂಲಭೂತ ನಾಗರಿಕ ಅಗತ್ಯಗಳನ್ನು ಪರಿಹರಿಸಲಾಗುತ್ತಿದೆ. ಎಂಜಿನಿಯರ್ಗಳು ಯಾವಾಗಲೂ ಸಿಗದ ಕಾರಣ ಜನರು ಇನ್ನೂ ನಾಯಕರ ಬಳಿಗೆ ಬರುತ್ತಾರೆ ಎಂದಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಉಲ್ಲೇಖಿಸಿದೆ.
ಆದರೆ, ಬಸವನಗುಡಿ ವಾರ್ಡ್ನ ಮಾಜಿ ಮೇಯರ್, ಬಿಜೆಪಿ ಮುಖಂಡ ಕಟ್ಟೆ ಸತ್ಯನಾರಾಯಣ ಮತ್ತು ಬಿಬಿಎಂಪಿ ಮಾಜಿ ನಗರ ಯೋಜನಾ ಅಧ್ಯಕ್ಷ ಎ.ಎಚ್.ಬಸವರಾಜು, ''ಸರಕಾರವು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದಾಗಿ ಹೇಳುತ್ತದೆ, ಆದರೆ ಜೂನ್ 4 ರಂದು ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಅದು ಇನ್ನು ಮುಂದಕ್ಕೆ ಹೋಗುತ್ತದೆ" ಎಂದಿದ್ದಾರೆ.
-
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications