BBMP Election: ಬಿಜೆಪಿ ವಿರುದ್ಧ ಎಎಪಿಯಿಂದ ಸಹಿ ಸಂಗ್ರಹ ಅಭಿಯಾನ, ರಾಜ್ಯಪಾಲ ಭೇಟಿ
ಬೆಂಗಳೂರು, ಡಿಸೆಂಬರ್ 02: ಬಿಬಿಎಂಪಿ ಚುನಾವಣೆ ಮುಂದೂಡಲು ರಾಜ್ಯ ಬಿಜೆಪಿ ಸರ್ಕಾರ ಕುತಂತ್ರ ಮಾರ್ಗದಡಿ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸಿದೆ ಎಂದು ಆಮ್ ಆದ್ಮಿ ಪಕ್ಷ ದೂರಿದೆ. ಇದರ ವಿರುದ್ಧ ಎಎಪಿ ಬೆಂಗಳೂರಿನಾದ್ಯಂತ 'ಬಿಬಿಎಂಪಿ ಚುನಾವಣೆ ನಡೆಸಿ-ಬೆಂಗಳೂರು ಉಳಿಸಿ' ಅಭಿಯಾನ ಹಮ್ಮಿಕೊಂಡಿದೆ.
ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ಡಿಸೆಂಬರ್ 3ರಿಂದ 5ರ ತನಕ ಬೆಂಗಳೂರಿನಾದ್ಯಂತ ಮೂರು ದಿನಗಳ ಬೃಹತ್ ಸಹಿ ಸಂಗ್ರಹ ಅಭಿಯಾನ ನಡೆಸಲಿದ್ದೇವೆ. ಒಟ್ಟು ಸುಮಾರು ಐದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದೇವೆ. ಡಿಸೆಂಬರ್ 6ರ ಮಂಗಳವಾರದಂದು ಎಎಪಿ ಮುಖಂಡರು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಬೆಂಗಳೂರಿನಾದ್ಯಂತ ಸಂಗ್ರಹಿಸಿದ ಸಹಿಗಳನ್ನು ರಾಜ್ಯಪಾಲರಿಗೆ ನೀಡಿ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ಶೀಘ್ರ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಆಗ್ರಹಿಸಲಿದ್ದೇವೆ ಎಂದು ಹೇಳಿದರು.
2020ರಲ್ಲೇ ನಡೆಯಬೇಕಿದ್ದ ಬಿಬಿಎಂಪಿ ಚುನಾವಣೆಯನ್ನು ರಾಜ್ಯ ಬಿಜೆಪಿ ಸರ್ಕಾರ ಕುಂಟು ನೆಪಗಳನ್ನು ಮುಂದಿಟ್ಟುಕೊಂಡು ಮುಂದೂಡುತ್ತಲೇ ಬಂದಿದೆ. ಇದರಿಂದ ಬೆಂಗಳೂರಿನ ಅಭಿವೃದ್ಧಿ ಕುಂಠಿತಗೊಳ್ಳುವುದರ ಜೊತೆಗೆ ನ್ಯಾಯಾಲಯದ ಅಮೂಲ್ಯ ಸಮಯ ವ್ಯರ್ಥವಾಗಿದೆ. ಚುನಾವಣೆ ನಡೆಯುವುದಕ್ಕೆ ಪದೇ ಪದೆ ಅಡ್ಡಗಾಲು ಹಾಕುವ ಮೂಲಕ ಬಿಜೆಪಿ ಸರ್ಕಾರವು ಪ್ರಜಾಪ್ರಭುತ್ವ ವ್ಯವಸ್ಥೆಗೆ ದ್ರೋಹ ಎಸಗಿದೆ ಎಂದು ಅವರು ಆರೋಪಿಸಿದರು.

ಪ್ರತಿಪಕ್ಷಗಳು ಬಿಜೆಪಿ ಜೊತೆ ಶಾಮೀಲು: ಎಎಪಿ
ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯಲ್ಲಿನ ದುರಾಡಳಿತದಿಂದಾಗಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲುವುದು ಶತಸಿದ್ಧ ಎಂದು ಬಿಜೆಪಿಗೆ ಮನವರಿಕೆ ಆಗಿರುವುದರಿಂದ ಬಿಜೆಪಿಯು ಚುನಾವಣೆ ಮುಂದೂಡುವ ಕುತಂತ್ರ ಅನುಸರಿಸುತ್ತಿದೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಕೂಡ ಈ ವಿಷಯದಲ್ಲಿ ಮೌನ ವಹಿಸಿವೆ. ಇದನ್ನು ಗಮನಿಸಿದರೆ, ಅವು ಬಿಜೆಪಿಯೊಂದಿಗೆ ಶಾಮೀಲಾಗಿರುವುದು ಸ್ಪಷ್ಟವಾಗುತ್ತದೆ ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.
ಮೇಯರ್ ಹಾಗೂ ಕಾರ್ಪೊರೇಟರ್ಗಳು ಇಲ್ಲದ ಕಾರಣ ಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕಾಮಗಾರಿಗಳು ಸಮರ್ಪಕವಾಗಿ ನಡೆದಿಲ್ಲ. 2022-23ನೇ ವಾರ್ಡ್ ಮಟ್ಟದ 2,543 ಕಾಮಗಾರಿಗಳನ್ನು ಗುರುತಿಸಲಾಗಿದೆ. ಅದಕ್ಕಾಗಿ 867 ಕೋಟಿ ರೂ. ಬಿಡುಗಡೆಯಾಗಿದೆ. ಆದರೆ ಎಂಟು ತಿಂಗಳಾದರೂ ಈ ಪೈಕಿ ಕೇವಲ 76 ಕಾಮಗಾರಿಗಳು ಆರಂಭಗೊಂಡಿವೆ.

ಬಿಬಿಎಂಪಿ ಅಧಿಕಾರಿಗಳು ನಾಮಕಾವಸ್ಥೆಗೆ ವಾರ್ಡ್ ಮಟ್ಟದ ಸಭೆಗಳನ್ನು ನಡೆಸುತ್ತಿದ್ದರೂ ಪ್ರಶ್ನಿಸುವವರು ಯಾರು ಇಲ್ಲದಾಗಿದೆ. ಕಸದ ಸಮಸ್ಯೆ, ರಸ್ತೆ ಗುಂಡಿಗಳು, ಅವ್ಯವಸ್ಥಿತ ಒಳಚರಂಡಿ, ಕೆಟ್ಟು ಹೋಗಿರುವ ವಿದ್ಯುತ್ ದೀಪ, ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳು ಬೆಂಗಳೂರಿನಲ್ಲಿ ತಾಂಡವವಾಡುತ್ತಿವೆ. ಇದರಿಂದಾಗಿ ನಾಗರಿಕರು ಬೆಂಗಳೂರನ್ನು ತೊರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications