ಬಿಬಿಎಂಪಿಯಲ್ಲಿ ಎಎಪಿ ಗೆಲ್ಲಿಸಿ. ವರ್ಷಕ್ಕೆ 3 ಲಕ್ಷ ಹಣ ಉಳಿಸಿ
ಬೆಂಗಳೂರು, ನ. 5: ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ, ದೆಹಲಿ ಮಾದರಿಯಲ್ಲಿ ಉಚಿತ ವಿದ್ಯುತ್, ನೀರು, ಅಂತರರಾಷ್ಟ್ರೀಯ ಮಟ್ಟದ ಸರ್ಕಾರಿ ಶಾಲೆ, ಉತ್ತಮ ಆರೋಗ್ಯ ವ್ಯವಸ್ಥೆ ಹೀಗೆ ಜನಸಾಮಾನ್ಯನಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಈ ಮೂಲಕ ಪ್ರತಿ ಕುಟುಂಬದ 3 ಲಕ್ಷದಷ್ಟು ಹಣ ಉಳಿಸುತ್ತೇವೆ ಎಂದು ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಭರವಸೆ ನೀಡಿದರು.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮುಖಂಡರ, ಕಾರ್ಯಕರ್ತರ, ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಬೆರಳೆಣಿಕೆಯಷ್ಟು ಜನ ಬೆಂಬಲಿಗರು ಇದ್ದಂತಹ ಬೆಂಗಳೂರು ನಗರದಲ್ಲಿ ಈಗ ಲಕ್ಷಾಂತರ ಜನ ಬೆಂಬಲಿಗರು ಆಮ್ ಆದ್ಮಿ ಪಕ್ಷದ ಜತೆ ಇದ್ದಾರೆ. ಬರುವ ಬಿಬಿಎಂಪಿ ಚುನಾವಣೆ ಹೊತ್ತಿಗೆ ಆಮ್ ಆದ್ಮಿ ಪಕ್ಷವನ್ನು ಮತ್ತಷ್ಟು ಬಲ ಪಡಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ಮಾತನಾಡಿ, ಪ್ರತಿ ಭಾರಿ ಕರ್ನಾಟಕಕ್ಕೆ ಭೇಟಿ ನೀಡಿದಾಗಲೂ ರೋಚಕ ಅನುಭವಗಳು ಆಗುತ್ತಿವೆ. ಪ್ರತಿ ಭಾರಿ ಬಂದಾಗಲೂ ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷ ಗೆದ್ದೆ ಗೆಲ್ಲುತ್ತದೆ ಎನ್ನುವ ಭರವಸೆ ಹಿಮ್ಮಡಿಯಾಗುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

ಬಿಬಿಎಂಪಿಯಲ್ಲಿ ಪಕ್ಷವನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಮಹಿಳೆಯರು ತೆಗೆದುಕೊಳ್ಳಬೇಕು. ಏಕೆಂದರೆ ಆಮ್ ಆದ್ಮಿ ಪಕ್ಷ ಗೆದ್ದರೆ ಮೊದಲು ಉಪಯೋಗವಾಗುವುದು ಮಹಿಳೆಯರಿಗೆ ಎಂದು ಹೇಳಿದರು. ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ, ಉಪಾಧ್ಯಕ್ಷ ಸುರೇಶ್ ರಾಥೋಡ್, ದಾಸರಹಳ್ಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಎಂ.ವೆಂಕಟೇ ಗೌಡ, ಮುಖಂಡರಾದ ಮಾಯಾ ಪ್ರದೀಪ್, ಹರೀಶ್ ಇದ್ದರು.
Recommended Video
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ












Click it and Unblock the Notifications