ಬಿಬಿಎಂಪಿ ಚುನಾವಣೆ: ಪ್ರಕರಣ ಮತ್ತೆ ಹೈಕೋರ್ಟ್ಗೆ ವಾಪಸ್
ಬೆಂಗಳೂರು, ಆ.26: ತೀವ್ರ ಕುತೂಹಲ ಕೆರಳಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆ ಪ್ರಕರಣ ಮತ್ತೆ ಸುಪ್ರೀಂಕೋರ್ಟ್ನಿಂದ ಹೈಕೋರ್ಟ್ಗೆ ಬಂದಿದೆ.
ಶುಕ್ರವಾರ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್ ಅಂತಿಮ ಆದೇಶ ನೀಡುತ್ತದೆಂದು ಭಾವಿಸಲಾಗಿತ್ತು. ಅದರೆ ಸುಪ್ರೀಂಕೋರ್ಟ್, ಚುನಾವಣೆಯ ಕುರಿತು ನಿರ್ಧರಿಸುವ ಜವಾಬ್ದಾರಿ ಹೈಕೋರ್ಟ್ಗೆ ನೀಡಿದೆ.
ಚುನಾವಣೆ ಕುರಿತಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿ ಶುಕ್ರವಾರ(ಆಗಸ್ಟ್ 26) ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಸ್.ಅಬ್ದುಲ್ ನಜೀರ್ ಮತ್ತು .ಜೆ.ಕೆ.ಮಹೇಶ್ವರಿ ಅವರಿದ್ದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತು. ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ, ಮಧ್ಯಂತರ ಆದೇಶ ಅಥವಾ ನಿರ್ದೇಶನಗಳನ್ನು ನೀಡಲು ಹೈಕೋರ್ಟ್ಗೆ ಸ್ವಾತಂತ್ರ್ಯ ನೀಡಬೇಕೆಂದು ಕೋರಿದರು.
ಅರ್ಜಿದಾರರ ಪರ ವಾದಿಸಿದ ಹಿರಿಯ ನ್ಯಾಯವಾದಿ, ಸೀಮಿತ ವಿಷಯಕ್ಕೆ ಹೈಕೋರ್ಟ್ ಮುಂದಿರುವ ಅರ್ಜಿಗಳ ವಿಚಾರಣೆಗೆ ಸ್ಪಷ್ಟನೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿದ್ದು, ಅವುಗಳನ್ನು ಪರಿಗಣಿಸಬೇಕು. ಹೈಕೋರ್ಟ್ ವಿಚಾರಣೆ ಮುಂದುವರಿಸಿ ಆದೇಶ ನೀಡಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ ಹಾಲಿ ಇರುವ ವಾರ್ಡ್ ಪುನರ್ ವಿಂಗಡಣೆಯಿಂದ ಆಡಳಿತಾರೂಢ ಬಿಜೆಪಿಗೆ ಅನುಕೂಲವಾಗುತ್ತದೆ, ಇದು ಕಾನೂನು ಬಾಹಿರ, ಸಂವಿಧಾನದ ಉಲ್ಲಂಘನೆ ಎಂದರು.

ಪ್ರತಿವಾದಿಗಳ ಪರ ವಕೀಲರು, ರಾಜ್ಯ ಚುನಾವಣಾ ಆಯೋಗಕ್ಕೆ ಕನಿಷ್ಠ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಸೂಚನೆ ನೀಡಬೇಕು ಮತ್ತು ವಾರ್ಡ್ ಪುನರ್ ವಿಂಗಡಣೆ ಅರ್ಜಿಗಳ ಬಾಕಿ ಹಿನ್ನೆಲೆಯಲ್ಲಿಚುನಾವಣೆಯನ್ನು ಮುಂದೂಡುವುದು ಸರಿಯಲ್ಲಎಂದರು.
ಕೊನೆಗೆ ನ್ಯಾಯಪೀಠ ''ಕಾನೂನು ಪ್ರಕಾರ ಹೈಕೋರ್ಟ್ ತನ್ನ ಮುಂದಿರುವ ಅರ್ಜಿಗಳನ್ನು ಸೂಕ್ತ ರೀತಿಯಲ್ಲಿ ಪರಿಗಣಿಸಿ ಜೇಷ್ಠತೆ ಆಧರಿಸಿ ತೀರ್ಪು ನೀಡಬಹುದು'' ಎಂದು ಹೇಳಿತು.
ಹಾಗಾಗಿ ಹೈಕೋರ್ಟ್ನಲ್ಲಿ ಆ.29ರಂದು ವಾರ್ಡ್ ಪುನರ್ ವಿಂಗಡಣೆ ಪ್ರಶ್ನಿಸಿರುವ ಅರ್ಜಿಗಳು ಮತ್ತು ಸೆ.1ರಂದು ವಾರ್ಡ್ವಾರು ಮೀಸಲು ಪ್ರಶ್ನಿಸಿರುವ ಅರ್ಜಿಗಳು ವಿಚಾರಣೆಗೆ ಬರಲಿದ್ದು, ಅದು ಅರ್ಜಿದಾರರ, ಸರಕಾರ ಮತ್ತು ಚುನಾವಣಾ ಆಯೋಗ- ಮೂವರ ವಾದ-ಪ್ರತಿವಾದ ಆಲಿಸಿ ಜೇಷ್ಠತೆಯ ಮೇಲೆ ತೀರ್ಪು ನೀಡಬೇಕಿದೆ.
ವಾರ್ಡ್ ವಾರು ಮೀಸಲಾತಿಗೂ ತಕರಾರು: ಈ ಮಧ್ಯೆ, ಬಿಬಿಎಂಪಿ ವಾರ್ಡ್ ಮೀಸಲಾತಿ ಪ್ರಶ್ನಿಸಿ ಸಲ್ಲಿಸಿ ಈಜಿಪುರದ ಕೆ. ಮಹದೇವ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ಸರ್ಕಾರ, ಬಿಬಿಎಂಪಿ, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.
ಅರ್ಜಿದಾರರ ಪರ ವಕೀಲರು, ನಿಯಮಬಾಹಿರವಾಗಿ ಮೀಸಲಾತಿ ನಿಗದಿಪಡಿಸಿದ್ದಾರೆಂದು ಆರೋಪಿಸಿ, ಮೀಸಲಾತಿ ಪಟ್ಟಿ ರದ್ದು ಮಾಡಬೇಕೆಂದು ಕೋರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ನೋಟಿಸ್ ಜಾರಿ ನಂತರ ಮುಂದಿನ ವಿಚಾರಣೆಯನ್ನು ಸೆ.1ಕ್ಕೆ ಮುಂದೂಡಿತು.

ಸುಪ್ರೀಂನಿಂದಲೇ ಸ್ಪಷ್ಟನೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್ಗಳ ಪುನರ್ವಿಂಗಡಣೆ ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಬಹುದೇ ಹಾಗೂ ಈ ಸಂಬಂಧ ಏನಾದರೂ ಮಧ್ಯಂತರ ಆದೇಶಗಳನ್ನು ಹೊರಡಿಸಬಹುದೇ ಎಂಬ ಹೈಕೋರ್ಟ್ ಸುಪ್ರೀಂಕೋರ್ಟ್ನಿಂದ ಸ್ಪಷ್ಟನೆ ಬಯಸಿದೆ.
ಈ ವಿಚಾರವಾಗಿ ಸುಪ್ರೀಂಕೋರ್ಟ್ನಿಂದ ಸ್ಪಷ್ಟನೆ ತರುವಂತೆ ಅರ್ಜಿದಾರರಿಗೆ ಹೈಕೋರ್ಟ್ ಸೂಚಿಸಿದೆ. ಆಗಸ್ಟ್ 26ಕ್ಕೆ ಸುಪ್ರೀಂಕೋರ್ಟ್ನಲ್ಲಿ ಈ ಅರ್ಜಿ ವಿಚಾರಣೆಗೆ ನಿಗದಿಯಾಗಿರುವುದರಿಂದ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಆ.29ಕ್ಕೆ ಮುಂದೂಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ-2020ರಂತೆ ಬಿಬಿಎಂಪಿ ವಾರ್ಡ್ಗಳ ಪುನರ್ ವಿಂಗಡಣೆ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ವಕೀಲ ಎಸ್. ಇಸ್ಮಾಯಿಲ್ ಜಬಿವುಲ್ಲಾ, ಶಾಂತಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಾಜಿ ಕಾಪೋರೇಟರ್ಗಳಾದ ಬಿ.ಎನ್. ಮಂಜುನಾಥ್ ರೆಡ್ಡಿ, ಎನ್. ನಾಗರಾಜ್ ಹಾಗೂ ಇತರರು ಸೇರಿ ಸಲ್ಲಿಸಿರುವ ಒಟ್ಟು ಆರು ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಕಳೆದ ವಾರ ವಿಚಾರಣೆ ನಡೆಸಿತ್ತು.
ಸ್ಪಷ್ಟನೆ ಅಗತ್ಯವಿದೆ: ಚುನಾವಣಾ ಆಯೋಗ ಹಾಗೂ ಅರ್ಜಿದಾರರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿಗಳ ವಿಚಾರಣೆ ಮುಂದುವರಿಸಿ ಯಾವುದೇ ಆದೇಶ ಹೊರಡಿಸಬೇಕಿದ್ದರೆ ಸುಪ್ರೀಂಕೋರ್ಟ್ನ ಸ್ಪಷ್ಟನೆಯ ಅಗತ್ಯವಿದೆ. ಅದಲ್ಲದೆ ಅರ್ಜಿಗಳನ್ನು ಆಲಿಸಲು ಸುರೇಶ್ ಮಹಾಜನ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಕೈ ಕಟ್ಟಿ ಹಾಕಿದಂತಾಗಿದೆ. ಆದ್ದರಿಂದ ಆ.26ರಂದು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಬರಲಿಕ್ಕಿದ್ದು, ಅರ್ಜಿದಾರರು ಸ್ಪಷ್ಟನೆ ಪಡೆದುಕೊಂಡು ಬಂದರೆ ವಿಚಾರಣೆ ಮುಂದುವರಿಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟು ವಿಚಾರಣೆಯನ್ನು ಮುಂದೂಡಿತು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications