ನೂತನ ಆಯುಕ್ತ ಮೇಘರಿಕ್ ಕಾರ್ಯ ವೈಖರಿ ಹೇಗಿರುತ್ತೆ?
ಬೆಂಗಳೂರು, ಆಗಸ್ಟ್ 1 : ಉದ್ಯಾನ ನಗರಿ ಬೆಂಗಳೂರಿಗೆ ನೂತನ ಪೊಲೀಸ್ ಆಯುಕ್ತರ ನೇಮಕವಾಗಿದೆ. ಬಿಬಿಎಂಪಿ ಚುನಾವಣೆ ಮುಂದಿಟ್ಟುಕೊಂಡು ಸರ್ಕಾರ ಎನ್.ಎಸ್.ಮೇಘರಿಕ್ ಅವರನ್ನು ಆಯುಕ್ತರನ್ನಾಗಿ ನೇಮಕ ಮಾಡಿದೆ. ಉತ್ತಮವಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
1987ನೇ ಬ್ಯಾಚ್ ಐಪಿಎಸ್ ಅಧಿಕಾರಿ ಮೇಘರಿಕ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಹೊತ್ತು ಕಳೆಯುವುದಕ್ಕಿಂತ ತಳಮಟ್ಟಕ್ಕೆ ಇಳಿದು ಕೆಲಸ ಮಾಡುತ್ತಾರೆ. ಅಧಿಕಾರ ವಹಿಸಿಕೊಂಡ ಬಳಿಕ ಮೇಘರಿಕ್ ಅವರು ಹೇಳಿದ್ದು ಇದೆ ಮಾತು, ಪೊಲೀಸರು ಸಾಮಾಜಿಕ ಜಾಲ ತಾಣದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ ಎಂದು. [ನನಗೆ ಬೆಂಗಳೂರು ಹೊಸದಲ್ಲ : ಮೇಘರಿಕ್]

ತಳಮಟ್ಟದ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ಹೆಚ್ಚು ಗಮನ ನೀಡಬೇಕು ಎಂಬುದು ಮೇಘರಿಕ್ ಅವರ ಅಭಿಪ್ರಾಯ. ಸಾಮಾಜಿಕ ಜಾಲತಾಣಗಳು ಬೇಕು ಅದರ ಜೊತೆ ತಳ ಮಟ್ಟದ ವ್ಯವಸ್ಥೆಯನ್ನು ಬಲಪಡಿಸಬೇಕು ಎಂಬುದು ಅವರ ಕಾರ್ಯವೈಖರಿ.
ನಗರ ಪೊಲೀಸ್ ಆಯುಕ್ತರಾಗಿದ್ದ ಎಂ.ಎನ್.ರೆಡ್ಡಿ ಅವರಿಗೆ ಸರ್ಕಾರ ಶುಕ್ರವಾರ ಬಡ್ತಿ ನೀಡಿದೆ. ಅಗ್ನಿಶಾಮಕ ದಳ ವಿಭಾಗದ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಜಿಪಿ)ಯಾಗಿ ಅವರು ಬಡ್ತಿ ಪಡೆದಿದ್ದು, ಅವರ ಜಾಗಕ್ಕೆ ಮೇಘರಿಕ್ ಅವರನ್ನು ನೇಮಕ ಮಾಡಲಾಗಿದೆ.
ಉತ್ತಮ ಕೆಲಸ ಮಾಡಿದ್ದಾರೆ : ಚುನಾವಣೆಗಳ ಸಂದರ್ಭದಲ್ಲಿ ಮೇಘರಿಕ್ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬಾರದಂತೆ ಅವರು ಕೆಲಸ ಮಾಡಿದ ರೀತಿಗೆ ಚುನಾವಣಾ ಆಯೋಗವೇ ಮೆಚ್ಚುಗೆ ವ್ಯಕ್ತಪಡಿಸಿದೆ.
ಎಲ್ಲರೂ ನನ್ನೊಂದಿಗೆ ಇದ್ದಾರೆ : 'ನನ್ನ ಕೈಕೆಳಗೆ ಯಾವ ಅಧಿಕಾರಿಗಳೂ ಇಲ್ಲ, ಎಲ್ಲರೂ ನನ್ನ ಜೊತೆಯೇ ಇದ್ದಾರೆ ಎಂದು ಮೇಘರಿಕ್ ಕೆಲಸ ಮಾಡುತ್ತಾರೆ. ಕಡಿಮೆ ಪ್ರಚಾರ ಹೆಚ್ಚು ಕೆಲಸ ಇದು ಮೇಘರಿಕ್ ಕಾರ್ಯವೈಖರಿ.
ಎಂ.ಎನ್.ರೆಡ್ಡಿ ಅವರು ಸಾಮಾಜಿಕ ತಾಣಗಳಲ್ಲಿ ಹಿರೋ ಆಗಿದ್ದರು. ಇಂಟರ್ನೆಟ್ ಮೂಲಕ ಬಂದ ದೂರುಗಳಿಗೆ ಮಾತ್ರ ಸ್ಪಂದಿಸುತ್ತಿದ್ದರು ಎಂಬ ಮಾತುಗಳು ಇವೆ. ನೂತನ ಆಯುಕ್ತರೇ ಹೇಳುವಂತೆ ಅವರ ಮುಂದಿರುವ ಮೊದಲು ಸವಾಲು ಬಿಬಿಎಂಪಿ ಚುನಾವಣೆಯನ್ನು ಎದುರಿಸುವುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications