Breaking:ಬಿಬಿಎಂಪಿ ಚುನಾವಣೆ: ಪದ್ಮನಾಭನಗರದಲ್ಲಿ ಗೌರಿ ಗಣೇಶ ಹಬ್ಬದ ನೆಪ ಬಾಗೀನ, ಸೀರೆ ಬಳುವಳಿ!
ಬೆಂಗಳೂರು, ಆಗಸ್ಟ್ 26: ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿದ್ದಂತೆ ಸೀರೆ ಮತ್ತು ಊಟದ ರಾಜಕೀಯ ಜೋರಾಗ ತೊಡಗಿದೆ. ಕಂದಾಯ ಸಚಿವ ಆರ್ ಅಶೋಕ್ ಪ್ರತಿನಿಧಿಸುವ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಪದ್ಮನಾಭನಗರ ವಾರ್ಡ್ನಲ್ಲಿ ಗೌರಿ ಗಣೇಶ ಹಬ್ಬದ ನೆಪದಲ್ಲಿ ಬಾಗೀನ ಕೊಟ್ಟು ಸೀರೆಯನ್ನು ಹಂಚಿ ಊಟವನ್ನು ಹಾಕಿಸಲಾಗಿದೆ.
ಬಿಬಿಎಂಪಿ ಚುನಾವಣೆಗೆ ಮುನ್ನವೇ ಅಭ್ಯರ್ಥಿಗಳು ಅಖಾಡಕ್ಕೆ ಧಮುಕಿದ್ದಾರೆ. ತಮ್ಮ ವಾರ್ಡ್ನ ಮತದಾರರನ್ನು ಒಲಿಸಿಕೊಳ್ಳುವ ದೂರದೃಷ್ಟಿಯಿಂದ ಸಮಾಜಮುಖಿ ಕೆಲಸದಂತೆ ಕಾರ್ಯದಂತೆ ಗೌರಿ ಗಣೇಶ ಹಬ್ಬಕ್ಕೆ ಸೀರಿ ಮತ್ತು ಬಾಗೀನ ಕೊಡುವ ಮೂಲಕ ಮತದಾರರನ್ನು ಒಲಿಸಿಕೊಳ್ಳವ ಯತ್ನಕ್ಕೆ ಕೈಹಾಕಿದ್ದಾರೆ.
ಬಿಬಿಎಂಪಿ ಚುನಾವಣೆಯ ರಾಜಕೀಯ
ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಆರ್. ಅಶೋಕ್ ಹೇಳಿದ ಅಭ್ಯರ್ಥಿಗೆ ಬಿಜೆಪಿಯ ಟಿಕೆಟ್ ಪಕ್ಕ ಆಗಿ ಬಿಡುತ್ತೆ. ಇದರಿಂದಾಗಿ ಆರ್ ಅಶೋಕ್ ತಮ್ಮ ಕ್ಷೇತ್ರವನ್ನು ಹಿಡಿತದಲ್ಲಿರಿಸಿಕೊಳ್ಳಲು ತಮ್ಮ ಹಿಂಬಾಲಕರಿಗೆ ಟಿಕೆಟ್ ಕೊಡಿಸುವುದು ಪಕ್ಕಾ ಆಗಿದೆ. ಪದ್ಮನಾಭನಗರ ವಾರ್ಡ್ನ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶೋಭಾ ಆಂಜಿನಪ್ಪ, ಮುಖಂಡರಾದ ಆಂಜಿನಪ್ಪ ನೇತೃತ್ವದಲ್ಲಿ ಖುದ್ದು ಆರ್ ಅಶೋಕ್ ರವರೇ ನೂರಾರು ಮಹಿಳೆಯರಿಗೆ ಸೀರೆ ಮತ್ತು ಬಾಗೀನವನ್ನು ವಿತರಿಸಿದರು.

ಇದೇ ವೇಳೆಯಲ್ಲಿ ಆರ್ ಅಶೋಕ್ ಮಹಿಳಾ ಪೌರ ಕಾರ್ಮಿಕರಿಗೆ ಬಾಗೀನವನ್ನು ವಿತರಿಸಿದರು. ಬಾಗೀನದ ಜೊತೆಗೆ ಹೆಣ್ಣು ಮಕ್ಕಳಿಗೆ ಊಟದ ವ್ಯವಸ್ಥೆಯನ್ನು ಮಾಡಿದ್ದರು. ಚುನಾವಣೆ ಕಾವು ಏರುವ ಮುನ್ನವೇ ಊಟದ ರಾಜಕೀಯವು ಶುರುವಾಗಿರುವುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ.

ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶೋಭಾ ಆಂಜಿನಪ್ಪ, ಮುಖಂಡರಾದ ಆಂಜಿನಪ್ಪ, ನಾಗರಾಜ್, ಹೆಚ್ ಸುರೇಶ್, ಮಂಡಲ ಅಧ್ಯಕ್ಷ ರವಿ, ಪ್ರಧಾನ ಕಾರ್ಯದರ್ಶಿ ವಿಜಯ್ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications