198 ವಾರ್ಡ್ ಗಳಿಗೆ ಬಿಬಿಎಂಪಿ ಚುನಾವಣೆ ಆರು ವಾರದಲ್ಲಿ ಪ್ರಕಟಿಸಿ : ಹೈಕೋರ್ಟ್ ತೀರ್ಪು
ಬೆಂಗಳೂರು, ಡಿಸೆಂಬರ್ 04: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಎದುರಾಗಿದ್ದ ಅಡ್ಡಿ ಆತಂಕಗಳು ಇಂದು ನಿವಾರಣೆಯಾಗಿವೆ. ಎರಡೂವರೆ ತಿಂಗಳ ಕಾಲ ಮಿತಿಯೊಳಗೆ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮುಗಿಸುವಂತೆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಒಳಗೊಂಡ ವಿಭಾಗೀಯ ಪೀಠ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಗ್ರಾಮ ಪಂಚಾಯಿತಿ ಚುನಾವಣೆ ಬೆನ್ನಲ್ಲೇ ಇದೀಗ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.
ಬೆಂಗಳೂರು ಮಹಾನಗರ ಪಾಲಿಕೆ ಚುಣಾವಣೆ ಕಾಲಮಿತಿಯಲ್ಲಿ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರ ಅವಧಿ ಮುಗಿದಿದೆ. ಕ್ಷೇತ್ರಗಳ ಪುನರ್ ವಿಂಗಡಣೆ ನೆಪ ಹೇಳಿಕೊಂಡು ಸರ್ಕಾರ ಚುನಾವಣೆ ಮುಂದೂಡುವ ತಂತ್ರ ಮಾಡುತ್ತಿದೆ. ಇದು ಪ್ರಜಾ ಪ್ರತಿನಿಧಿ ಹಾಗೂ ಸಂವಿಧಾನ ಬಾಹಿರ. ಸಂವಿಧಾನದ ನಿಯಮದಂತೆ ಚುನಾವಣೆಗೆ ಅನುವು ಮಾಡಿಕೊಡಬೇಕು ಎಂದು ಬಿಬಿಎಂಪಿ ಮಾಜಿ ಸದಸ್ಯ ಶಿವರಾಜ್ ತನ್ನ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು. ಇದೇ ವಿಚಾರವಾಗಿ ರಾಜ್ಯ ಚುನಾವಣಾ ಆಯೋಗ ಕೂಡ ಅರ್ಜಿ ಸಲ್ಲಿಸಿತ್ತು. ಒಟ್ಟಾರೆ ಬಿಬಿಎಂಪಿ ಚುನಾವಣೆ ವಿಚಾರವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳನ್ನು ನ್ಯಾಯಾಲಯ ಇತ್ಯರ್ಥ ಪಡಿಸಿ.
ಅರ್ಜಿಯ ವಿಚಾರೆ ನಡೆಸಿದ್ದ ನ್ಯಾಯಾಧೀಶರು, ಚುನಾವಣಾ ಆಯೋಗ ಮತ್ತು ಸರ್ಕಾರಕ್ಕೆ ಅಭಿಪ್ರಾಯ ಮಂಡಿಸಲು ಸುಚಿಸಿತ್ತು. ನವೆಂಬರ್ 25 ರಂದು ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ್ದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಬಿಬಿಎಂಪಿ ಮೊದಲಿಗಿಂತಲೂ ಹೆಚ್ಚು ಬೆಳೆದಿದೆ. ಜನ ಸಂಖ್ಯೆಗೆ ಅನುಗುಣವಾಗಿ 250 ವಾರ್ಡ್ ಗಳನ್ನು ಹೆಚ್ಚಿಸಬೇಕಿದೆ. ಹೊಸದಾಗಿ ವಾರ್ಡ್ ವಿಂಗಡಣೆ ಮಾಡಿ ಶೀಘ್ರದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವುದಾಗಿ ವಾದ ಮಂಡಿಸಿದ್ದರು.

ಇದೇ ಅವಧಿಯಲ್ಲಿ ರಾಜ್ಯ ಚುನಾವಣಾ ಆಯೋಗ ಕೂಡ ತನ್ನ ಅಭಿಪ್ರಾಯವನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಬಿಬಿಎಂಪಿ ಚುನಾವಣೆ ನಡೆಸಲು ಆಯೋಗ ಎಲ್ಲ ತಯಾರಿ ನಡೆಸಿದೆ. ಪರಿಷ್ಕೃತ ಮತದಾರರ ಪಟ್ಟಿ ಕೂಡ ಸಿದ್ಧವಾಗಿದೆ. ಚುನಾವಣೆ ಮುಂದೂಡುವುದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವುಂಟಾಗಲಿದೆ. ನಿಗಧಿತ ಅವಧಿಯಂತೆ ಚುನಾವಣೆ ನಡೆಸುವುದು ಸೂಕ್ತ, ಇದಕ್ಕೆ ಆಯೋಗ ಸಿದ್ಧವಿದೆ ಎಂದು ಹೇಳಿತ್ತು. ವಾದ ಮತ್ತು ಪ್ರತಿವಾದ ಆಲಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ತೀರ್ಪನ್ನು ಕಾಯ್ದಿರಿಸಿತ್ತು.

Recommended Video
ಇಂದು ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ್ ಒಕಾ ಮತ್ತು ನ್ಯಾ ವಿಶ್ವನಾಥ್ ಶೆಟ್ಟಿ ಒಳಗೊಂಡಿದ್ದ ಪೀಠ, ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮುಂದಿನ ಒಂದು ತಿಂಗಳಲ್ಲಿ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಬೇಕು. ಮೀಸಲಾತಿ ಪಟ್ಟಿ ಬಿಡಗುಡೆ ಮಾಡಿದ ಆರು ವಾರದ ಒಳಗೆ 198 . ವಾರ್ಡ್ ಗಳಿಗೆ ಬಿಬಿಎಂಪಿ ಚುನಾವಣೆ ನಡೆಯನ್ನು ನಡೆಸಬೇಕು ಎಂದು ತೀರ್ಪು ಪ್ರಕಟಿಸಿತು. ನ್ಯಾಯಾಲಯದ ಈ ತೀರ್ಪುನಿಂದ ಪಾಲಿಕೆ ಚುನಾವಣೆ ವಾರ್ಡ್ ಪುನರ್ ವಿಂಗಡಣೆ ಹೆಸರಿನಲ್ಲಿ ಮುಂದೂಡುವ ತಂತ್ರ ವಿಫಲವಾಗಿದೆ. . 198 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications