BBMP Election: ಬಿಬಿಎಂಪಿ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್, ಇಲ್ಲಿದೆ ಮಾಹಿತಿ
ಸಿಲಿಕಾನ್ ಸಿಟಿ ಬೆಂಗಳೂರಿನ ವಾರ್ಡ್ಗಳಿಗೆ ಹಲವು ವರ್ಷಗಳಿಂದ ಕಾರ್ಪೊರೇಟರ್ಗಳೇ (ಪಾಲಿಕೆ ಸದಸ್ಯರು) ಇಲ್ಲ. ಬಿಬಿಎಂಪಿ ಚುನಾವಣೆ ನಡೆಯದ ಕಾರಣ ಬೆಂಗಳೂರಿನ ವಾರ್ಡ್ಗಳೆಲ್ಲ ಬಡವಾಗಿದ್ದವು. ಈಗ ಬಿಬಿಎಂಪಿ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಈ ಬಗ್ಗೆ ಕಾಂಗ್ರೆಸ್ ಸಚಿವ ರಾಮಲಿಂಗಾರೆಡ್ಡಿ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಯಾವ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ ಎಂಬುದನ್ನೂ ಅವರು ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿ ಚುನಾವಣೆ ಬಗ್ಗೆ ಮಾತನಾಡಿರುವ ರಾಮಲಿಂಗಾ ರೆಡ್ಡಿ ಅವರು, ಈಗ ಗ್ರೇಟರ್ ಬೆಂಗಳೂರಿನಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿವೆ. ಬೆಂಗಳೂರಿನಲ್ಲೇ ಎರಡು ಅಥವಾ ಮೂರು ಪಾಲಿಕೆಗಳು ವಿಂಗಡಣೆ ಆಗಲಿದೆ. ಪ್ರತಿ ಪಾಲಿಕೆಯ ವಾರ್ಡ್ಗಳ ಸಂಖ್ಯೆ ಕೂಡ ಈಗಿನಂತೆ ಇರುವುದಿಲ್ಲ. ಏಕೆಂದರೆ ಈಗ ಬೆಳೆದು ನಿಂತಿರುವ ಬೆಂಗಳೂರನ್ನು ಒಬ್ಬ ಮೇಯರ್ ನಿಭಾಯಿಸಲು ಸಾಧ್ಯವೇ ಇಲ್ಲ. ಹೀಗಾಗಿ ಗ್ರೇಟರ್ ಬೆಂಗಳೂರು ನಮಗೆ ಅನಿವಾರ್ಯ ಎಂದಿದ್ದಾರೆ.

ಗ್ರೇಟರ್ ಬೆಂಗಳೂರಿಗೆ ಕಾಂಗ್ರೆಸ್ ಶಾಸಕರಾದ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿರುವ ಸಮಿತಿ ಈಗಾಗಲೇ ವರದಿ ನೀಡಿದೆ. ಅದರ ಆಧಾರದ ಮೇಲೆ ವಿಧಾನಮಂಡಲದಲ್ಲಿ ಈ ಮಸೂದೆಯನ್ನು ಮಂಡಿಸುತ್ತೇವೆ. ಅದು ಅಲ್ಲಿ ಅಂಗೀಕಾರಗೊಂಡ ನಂತರ ರಾಜ್ಯಪಾಲರು ಅನುಮೋದನೆ ನೀಡುತ್ತಾರೆ. ಇದರ ಆಧಾರದ ಮೇಲೆಯೇ ಬಿಬಿಎಂಪಿ ಚುನಾವಣೆ ನಡೆಯಲಿದೆ. ನೂರಕ್ಕೆ ನೂರರಷ್ಟು ಮೇ ತಿಂಗಳಿನಲ್ಲೇ ಬಿಬಿಎಂಪಿಗೆ ಚುನಾವಣೆ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯವರಿಗೆ ಬೆಂಗಳೂರಿನ ಅಭಿವೃದ್ಧಿಯೇ ಬೇಕಾಗಿಲ್ಲ. ಅವರಿಗೆ ಬೇಕಿರುವುದು ವೋಟ್ ಮಾತ್ರ. ಈ ಕಾರಣದಿಂದಲೇ ಅವರು ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಿರೋಧಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯೇ ಆಗಿಲ್ಲ. ಅವರು ಇಡೀ ನಗರವನ್ನ ಹಾಳು ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಬಿಜೆಪಿ ನಾಯಕರು ಸುಳ್ಳು ಹೇಳುತ್ತಿದ್ದಾರೆ. ಅವರ ಅವಧಿಯಲ್ಲಿ ಬಿಬಿಎಂಪಿಗೆ ಎಂಟು ಸಾವಿರ ಕೋಟಿ ರೂಪಾಯಿ ಅನುದಾನ ಕೊಟ್ಟೇ ಇರಲಿಲ್ಲ. ನಮ್ಮ ಕಾಂಗ್ರೆಸ್ ಸರ್ಕಾರವಿದ್ದಾಗ ಸಮ್ಮಿಶ್ರ ಸರ್ಕಾರದಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿ ಏಳು ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಿದ್ದರು. ನಮ್ಮ ಸರ್ಕಾರ ಹೋದ ಮೇಲೆ ಬಿಜೆಪಿಯುವರು ನಾವು ಕೊಟ್ಟಿದ್ದ ಹಣವನ್ನೇ ಹಂಚಿಕೆ ಮಾಡಿಕೊಂಡಿದ್ದರು. ನಾವು ಅಧಿಕಾರದಲ್ಲಿದ್ದಾಗ ಬಿಜೆಪಿ ಶಾಸಕರಿಗೆ ಕಡಿಮೆ ಅನುದಾನ ಕೊಟ್ಟಿಲ್ಲ. ಬಿಜೆಪಿಯವರು ಬಂದ್ಮೇಲೆ ಕಾಂಗ್ರೆಸ್ ಶಾಸಕರಿಗೆ ಅನುದಾನ ಕಡಿಮೆ ಮಾಡಿದರು ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯವರು ಸಾಲ ಉಳಿಸಿ ಹೋಗಿದ್ದರಿಂದ ನಮಗೆ ಭಾರಿ ಸಮಸ್ಯೆಯಾಗಿದೆ. ಇದರಿಂದ ಈಗ ಹಣ ಕೊಡಲು ಆಗುತ್ತಿಲ್ಲ. ಗಾರ್ಡನ್ ಸಿಟಿಯಾಗಿದ್ದ ಬೆಂಗಳೂರನ್ನ ಗಾರ್ಬೇಜ್ ಸಿಟಿ ಮಾಡಿದ್ದೇ ಬಿಜೆಪಿ. ಅವರು ಅಧಿಕಾರದಲ್ಲಿದ್ದಾಗ ಅಡಮಾನ ಇಟ್ಟಿದ್ದ ಹಲವು ಕಟ್ಟಡಗಳನ್ನು ನಾವು ಬಿಡಿಸಿದ್ದೇವೆ. ಆದರೆ ಅವರು ಪ್ರತಿ ವರ್ಷ 8 ಸಾವಿರ ಕೋಟಿ ಕೊಟ್ಟಿದ್ದೇವೆ ಎಂದು ಸುಳ್ಳು ಹೇಳ್ತಿದ್ದಾರೆ. ಅವರ ಕೈಯಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಆಗಲಿಲ್ಲ. ಈ ಬಗ್ಗೆ ಕೋರ್ಟ್ ಕೂಡ ಚಾಟಿ ಬೀಸುವ ಸ್ಥಿತಿಗೆ ತಂದಿದ್ದು ಬಿಜೆಪಿಯವರು ಎಂದು ಗುಡುಗಿದ್ದಾರೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications