ಬಿಬಿಎಂಪಿ: ಕಲ್ಯಾಣ ಕಾರ್ಯಕ್ರಮಡಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಬೆಂಗಳೂರು, ಅಕ್ಟೋಬರ್ 18: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಕಲ್ಯಾಣ ಕಾರ್ಯಕ್ರಮಗಳಡಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ ದಿನಾಂಕ ವಿಸ್ತರಿಸುವ ಜೊತೆಗೆ ಹೊಸದಾಗಿ ಎರಡು ಯೋಜನೆಗೆ ಅರ್ಜಿ ಆಹ್ವಾನಿಸಿದೆ.
ಕಲ್ಯಾಣ ಕಾರ್ಯಕ್ರಮಗಳಡಿ ಆನ್ಲೈನ್ ಮೂಲಕ ಆಹ್ವಾನಿಸಿದ ಅರ್ಜಿ ಸಲ್ಲಿಕೆ ದಿನಾಂಕವನ್ನು ಅಕ್ಟೋಬರ್ 19 ಅನ್ನು ಬಿಬಿಎಂಪಿ ಮಂಗಳವಾರ ಅಕ್ಟೋಬರ್ 31ರವರೆಗೆ ವಿಸ್ತರಿಸಿ ಆದೇಶಿಸಿದೆ.
ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿ ಮನೆ ನಿರ್ಮಾಣ ಮಾಡಿಕೊಳ್ಳಲು 5 ಲಕ್ಷ ರೂ ಸಹಾಯಧನ ನೀಡಲಾಗುತ್ತಿದೆ. ಪದವಿ ಪೂರ್ವ, ಪದವಿ ಹಾಗೂ ಸ್ನಾತಕೊತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ನೆರವಾಗಲು ಉಚಿತ ಲ್ಯಾಪ್ಟಾಪ್ ವಿತರಣೆ, ಅಂಧರಿಗೆ ಸ್ಮಾರ್ಟ್ ಸ್ಟಿಕ್ ಹಾಗೂ ಅಂಧ ವಿದ್ಯಾರ್ಥಿಗಳಿಗೆ ಎಜುಕೇಷನಲ್ ಲ್ಯಾಪ್ಟಾಪ್ ವಿತರಣೆ ಮಾಡಲಾಗುವುದು. ಹಿರಿಯ ನಾಗರೀಕರಿಗೆ ಮಡಚುಬಹುದಾದ (ಫೋಲ್ಡಿಂಗ್) ವೀಲ್ ಚೇರ್ ನೀಡಲಾಗುತ್ತಿದೆ.

ಈ ಮೇಲಿನ ಎಲ್ಲ ಯೋಜನೆಗಳ ಪ್ರಯೋಜನೆ ಪಡೆಯಲು ಕಲ್ಯಾಣ ಕಾರ್ಯಕ್ರಮದಡಿ ಬಿಬಿಎಂಪಿ ಅರ್ಹರಿಂದ ಅರ್ಜಿ ಆಹ್ವಾನಿಸಿತ್ತು. ಅರ್ಹರು ವಿಸ್ತರಿಸಿದ ದಿನಾಂಕ ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಬಹುದಾಗಿದೆ.
ಬಿಬಿಎಂಪಿಯು ಕಲ್ಯಾಣ ಕಾರ್ಯಕ್ರಮಗಳಡಿ ಮಹಿಳಾ ಸ್ವಯಂ ಉದ್ಯೋಗಕ್ಕಾಗಿ ಸಂಚಾರಿ ಉಪಹಾರ ವಾಹನ ಖರೀದಿಸಲು ಆರ್ಥಿಕ ಸಹಾಯಧನ ಹಾಗೂ ಉದ್ಯೋಗಸ್ಥ ಮಹಿಳೆಯರಿಗೆ ದ್ವಿಚಕ್ರ ವಾಹನ ನೀಡುತ್ತಿದೆ. ಈ ಕುರಿತು ಅರ್ಹರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸುವಂತೆ ಮಂಗಳವಾರದ ಆದೇಶಿಸಿದೆ.
ಆಸ್ತಕರು ಬಿಬಿಎಂಪಿ ಅಧಿಕೃತ ವೆಬ್ಸೈಟ್ (https://welfare.bbmpgov.in/) ಭೇಟಿ ನೀಡಬೇಕು. ಇಲ್ಲವಾದರೆ ಬೆಂಗಳೂರು ಒನ್ ಕೇಂದ್ರದಲ್ಲಿ ರೂ.30 ಶುಲ್ಕ ಪಾವತಿಸಿ ಆನ್ಲೈನ್ ಮೂಖೇನ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಎಲ್ಲಾ ವಲಯದ ಜಂಟಿ ಆಯುಕ್ತರವರ ಕಛೇರಿಯಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದು ಅಲ್ಲಿಯು ಸಹ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಬಿಬಿಎಂಪಿ ಕಲ್ಯಾಣ ವಿಭಾಗದ ಸಹಾಯಕ ಆಯುಕ್ತೆ ಶೈಲಜಾ ಅವರ ಮೊ.ಸಂಖ್ಯೆ 9480685854 ಗೆ ಸಂಪರ್ಕಿಸುವಂತೆ ಬಿಬಿಎಂಪಿ ತಿಳಿಸಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications