ವರ್ತೂರು ಕೋಡಿ ಸೇತುವೆ ನಿರ್ಮಾಣ ಕಾರ್ಯ ಇನ್ನೂ 2 ತಿಂಗಳು ಮುಂದಕ್ಕೆ
ಬೆಂಗಳೂರು, ಏ.4: ವರ್ತೂರು ಕೋಡಿ ಬ್ರಿಡ್ಜ್ ಮರು ನಿರ್ಮಾಣ ಯೋಜನೆಯನ್ನು ಫೆಬ್ರವರಿಯಲ್ಲೇ ಪೂರ್ಣಗೊಳಿಸುತ್ತೇವೆ ಎಂದು ಬಿಬಿಎಂಪಿ ಭರವಸೆ ನೀಡಿತ್ತು. ಆದರೆ ಚುನಾವಣೆ ಮುಗಿದ ಬಳಿಕ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಬೂಬು ಹೇಳುತ್ತಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬಿಬಿಎಂಪಿ ಅಧಿಕಾರಿಗಳು ಚುನಾವಣಾ ಕೆಲಸದಲ್ಲಿ ಬ್ಯುಜಿಯಾಗಿರುವ ಕಾರಣ ಕಾಮಗಾರಿ ಕಡೆಗೆ ಹೆಚ್ಚು ಒತ್ತು ನೀಡಲು ಸಾಧ್ಯವಾಗುತ್ತಿಲ್ಲ. ಕಾಮಗಾರಿ ನಿಧಾನದಿಂದಾಗಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸರ್ಜಾಪುರ ರಸ್ತೆ,ಗುಂಜೂರ್, ವೈಟ್ ಫೀಲ್ಡ್ ಮಾರ್ಗದಲ್ಲಿ ವಿಪರೀತ ಸಂಚಾರ ದಟ್ಟಣೆ ಏರ್ಪಟ್ಟಿದೆ.
ಚುನಾವಣೆ ಇರುವ ಕಾರಣ ಜೂನ್ ವರೆಗೂ ಬಿಬಿಎಂಪಿ ಅಧಿಕಾರಿಗಳು ಅತ್ತ ಕಡೆ ಹೆಜ್ಜೆ ಹಾಕುವುದಿಲ್ಲ ಹಾಗಾಗಿ ಒಂದು ಭಾಗದ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ಐದು ತಿಂಗಳು ಹಿಡಿಯಬಹುದು ಎಂದು ಅಂದಾಜಿಸಲಾಗಿದೆ.

ಮತ್ತೊಂದು ಭಾಗ ಏಪ್ರಿಲ್ 2020ಕ್ಕೆ ಪೂರ್ಣಗೊಳ್ಳಲಿದೆ. ವರ್ತೂರು ಕೆರೆಯ ಬಳಿ ಸೇತುವೆ ನಿರ್ಮಾಣ ಸೂಕ್ಷ್ಮದ ಕೆಲಸ ಇಲ್ಲವಾದಲ್ಲಿ ಕೊಲ್ಕತ್ತ ಬ್ರಿಡ್ಜ್ ಮಾದರಿಯಲ್ಲಿ ಬಿದ್ದು ಹೋಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಕಾಮಗಾರಿ ನಿಧಾನವಾಗಿ ಮುಗಿಸುತ್ತಿದ್ದೇವೆ ಎನ್ನುವುದು ಅಧಿಕಾರಿಗಳ ಉತ್ತರವಾಗಿದೆ.
ರಾಜ್ಯದ ಸಂಸದರಲ್ಲಿ ಯಾರ ವಿರುದ್ಧ ಎಷ್ಟು ಕ್ರಿಮಿನಲ್ ಪ್ರಕರಣಗಳಿವೆ?
87 ಮೀಟರ್ ಅಂತರದಲ್ಲಿ ಎರಡು ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ಒಟ್ಟು 30 ಕೋಟಿ ವೆಚ್ಚವಾಗಲಿದೆ. ಕಾಮಗಾರಿಯನ್ನು 2018ರಲ್ಲಿಯೇ ಆರಂಭಿಸಲಾಗಿದೆ. ಈ ಯೋಜನೆಯು ಜಾಗದ ತೊಂದರೆಯಿಂದಾಗಿ ಸಾಕಷ್ಟು ವಿಳಂಬವಾಗಿತ್ತು. ಆಸ್ತಿ ಮಾಲೀಕರು ಜಾಗವನ್ನು ಕೊಡಲು ಹಿಂದೇಟು ಹಾಕಿದ್ದರು.
-
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Ragi Ambli: ಬೇಸಿಗೆಯ ಬಿಸಿಲಿಗೆ ತಂಪೆರೆಯುವ 'ರಾಗಿ ಅಂಬಲಿ'; ಮನೆಯಲ್ಲೇ ಮಾಡುವ ಸುಲಭ ವಿಧಾನ ಇಲ್ಲಿದೆ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು












Click it and Unblock the Notifications