BBMP fire accident: ಗಂಭೀರವಾಗಿ ಗಾಯಗೊಂಡಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಚಿಕಿತ್ಸೆ ಫಲಿಸದೇ ವಿಧಿವಶ
ಬೆಂಗಳೂರು, ಆಗಸ್ಟ್, 29: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಗುಣ ನಿತಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಇ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಿಬಿಎಂಪಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ನಡೆದ ಅಗ್ನಿ ಅವಘಡ ಮುಖ್ಯ ಇಂಜಿನಿಯರ್ ಶಿವಕುಮಾರ್ ಪ್ರಾಣ ಕಸಿದು ಕೊಂಡಿದೆ. ಒಂದು ಕಡೆ ಇನ್ನೋರ್ವ ಗಾಯಾಳು ಜ್ಯೋತಿಯ ಬದುಕನ್ನೇ ಕತ್ತಲು ಮಾಡಿದೆ. ಹೀಗೆ ಅವಘಡದ ಬೆಂಕಿಯಲ್ಲಿ ಬೆಂದಾಕೆಯ ಬದುಕಿನಲ್ಲಿ ಹೊಸ ಬೆಳಕು ಮೂಡಿಸಲು ಬಿಬಿಎಂಪಿ ಮುಂದಾಗಿತ್ತು. ಆದರೆ ಈಗ ಆಕೆಯ ಬದುಕು ಸೆಟಲ್ ಮಾಡುವ ಮಧ್ಯೆ ಮುಖ್ಯ ಇಂಜಿನಿಯರ್ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ.
ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಆಗಸ್ಟ್ 11ರಂದು ನಡೆದ ಅವಘಡದಲ್ಲಿ, ಲ್ಯಾಬ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಜ್ಯೋತಿ ಗಂಭೀರ ಗಾಯಗೊಂಡಿದ್ದರು. ಜ್ಯೋತಿಯ ಮುಖ ಹಾಗೂ ಎದೆ ಭಾಗಗಳಿಗೆ ಸುಟ್ಟಗಾಯವಾಗಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ಬಿಬಿಎಂಪಿ ಕ್ಯಾಲಿಟಿ ಕಂಟ್ರೋಲ್ ರೂಂಗೆ ಬೆಂಕಿ ಬಿದ್ದ ಪ್ರಕರಣದಲ್ಲಿ ಗಾಯಗೊಂಡಿದ ಮುಖ್ಯ ಎಂಜಿನಿಯರ್ ಶಿವಕುಮಾರ್ ಸಾವನ್ನಪ್ಪಿದ್ದಾರೆ. ಮುಖ್ಯ ಇಂಜಿನಿಯರ್ ಶಿವಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು, ವಿಕ್ಟೋರಿಯಾದಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆರೋಗ್ಯ ಸುಧಾರಿಸದ ಹಿನ್ನೆಲೆ ಕೃತಕ ಉಸಿರಾಟದ ಜೊತೆಗೆ ಶಿವಕುಮಾರ್ ಅನ್ನು ಹೆಚ್ಚಿನ ಚಿಕಿತ್ಸೆಗೆ ಶಿಫ್ಟ್ ಮಾಲಾಗಿತ್ತು.
ಬೆಂಕಿ ಅವಘಡದಲ್ಲಿ ಶಿವಕುಮಾರ್ಗೆ 25 ಪರ್ಸೆಂಟ್ ಸುಟ್ಟ ಗಾಯವಾಗಿತ್ತು, ಇಂದು ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ 45 ವರ್ಷ ವಯಸ್ಸಿನ ಶಿವಕುಮಾರ್ ಸಾವನ್ನಪ್ಪಿದ್ದಾರೆ. ಅದಕ್ಕೂ ಮುಂಚೆ ಇಂದು ಆಸ್ಪತ್ರೆಗೆ ಬೇಟಿ ನೀಡಿ ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಗ್ಯ ವಿಚಾರಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಶಿವಕುಮಾರ್ ಸಾವನ್ನಪ್ಪಿದ್ದಾರೆ.
ಇನ್ನೂ ಮೃತ ಶಿವಕುಮಾರ್ ಮೂಲತಹ ನಂಜನಗೂಡಿನವರಾಗಿದ್ದಾರೆ. ಶಿವಕುಮಾರ್ಗೆ ಚಿಕ್ಕ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ತಂದೆ ಬರುವ ದಾರಿ ಕಾದು ಆ ಮಕ್ಕಳು ಕುಳಿತಿದ್ದರು. ಆದರೆ ಅಗ್ನಿ ಅವಘಡದಲ್ಲಿ ಆದ ಈ ಅವಾಂತರ ಮಕ್ಕಳಿಗೆ ತಂದೆಯ ಪ್ರೀತಿ ಕಿತ್ತು ಕೊಳ್ಳುವಲ್ಲಿ ಕಾರಣ ಆಗಿದೆ. ಶಿವಕುಮಾರ್ ಪಾಲಿಕೆಯಲ್ಲಿ ಕಳೆದ 16 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಆದತರೆ ಈ ಬಿಬಿಎಂಪಿ ಅಗ್ನಿ ಅವಘಡದಲ್ಲಿ ಉಸಿರಾಟ ನಿಲ್ಲಿಸಿದ್ದಾರೆ.
ಬಿಬಿಎಂಪಿ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಎಂಜಿನಿಯರ್ಗಳು ರಾಸಾಯನಿಕ ಬಳಸಿ ಡಾಂಬರು ಮಿಶ್ರಣದ ಬಿಟುಮಿನ್ನ ಗುಣಮಟ್ಟ ಪರಿಶೀಲಿಸಬೇಕಿತ್ತು. ಆದರೆ, ನೌಕರ ಓರ್ವ ಬೆಂಜಿನ್ ಎಂಬ ರಾಸಾಯನಿಕ ಬಳಸಿ ಬಸವನಗುಡಿ ರಸ್ತೆಗೆ ಹಾಕಿದ್ದ. ಡಾಂಬರು ಮಿಶ್ರಣದ ಬಿಟುಮಿನ್ನ ಗುಣಮಟ್ಟ ಪರಿಶೀಲಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ.
ಇದರಿಂದ ಎಂದಿನಂತೆ ಕೆಲಸ ಮಾಡಿಕೊಂಡು ನಾರ್ಮಲ್ ಆಗಿ ಇರಬೇಕಿದ್ದ ಗಾಯಾಳುಗಳು ಆಸ್ಪತ್ರೆಗೆ ದಾಖಲು ಆಗಿ ಚಿಕಿತ್ಸೆ ಪಡೆಯುವ ಪರಿಸ್ಥಿತಿ ಬಂದಿದೆ. ಕೆಲವರ ಬದುಕು ದಿಕ್ಕಾ ಪಾಲಾಗಿದೆ. ಮುಖ್ಯ ಇಂಜಿನಿಯರ್ ಪ್ರಾಣ ಪಕ್ಷಿ ಹಾರಿ ಹೋಗಿ ಕುಟುಂಬದ ರೋದನೆ ಹೇಳತೀರದಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications