ಬಿಬಿಎಂಪಿ ಕಾರ್ಪೋರೇಟರ್ ಕೈಗೆ ಐಪ್ಯಾಡ್!

ಬಿಬಿಎಂಪಿಯ ಎಲ್ಲಾ 198 ವಾರ್ಡ್ ಸದಸ್ಯರು ಹಾಗೂ ನಾಮಕರಣ ಸದಸ್ಯರು ಸೇರಿದಂತೆ ಒಟ್ಟು 218 ಮಂದಿಗೆ ಆಪಲ್ ಐಪ್ಯಾಡ್ 4 ನೀಡಲು ನಿರ್ಧರಿಸಿರುವ ಪಾಲಿಕೆ, ಐಪ್ಯಾಡ್ ಪೂರೈಕೆ ಮಾಡಲು ಸೆ.20ರಂದು ಟೆಂಡರ್ ಕರೆದಿದೆ.
ಸದ್ಯ ಗುತ್ತಿಗೆದಾರರಿಗೆ ಹಣ ನೀಡಲು, ಕಸದ ಸಮಸ್ಯೆ ನಿವಾರಿಸಲು, ನೌಕರರಿಗೆ ಸಂಬಳ ನೀಡಲು ಹಣದ ಕೊರತೆ ಇದೆ ಎಂದು ಹೇಳುವ ಬಿಬಿಎಂಪಿ ಕಾರ್ಪೋರೇಟರ್ ಗಳ ಕೈಗೆ ಐಪ್ಯಾಡ್ ನೀಡಲು ಹೊರಟಿರುವ ಕ್ರಮ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಹಿಂದೆಯೂ ಇತ್ತು : ಬಿಬಿಎಂಪಿಗೆ ಎಸ್.ಕೆ.ನಟರಾಜ್ ಅವರು ಮೇಯರ್ ಆಗಿದ್ದ ಅವಧಿಯಲ್ಲೇ ಪಾಲಿಕೆ ಸದಸ್ಯರಿಗೆ ಲ್ಯಾಪ್ಟಾಪ್ ನೀಡುವ ಪ್ರಸ್ತಾವವಿತ್ತು. ಬಳಿಕ ಐಪ್ಯಾಡ್ ನೀಡಲು ನಿರ್ಧರಿಸಲಾಯಿತು. ಆಗ ಇದಕ್ಕೆ ಸಂಬಂಧಿಸಿದಂತೆ ಟೆಂಡರ್ ಸಹ ಕರೆಯಲಾಗಿತ್ತು. ಆದರೆ, ಯೋಜನೆ ಕೈಬಿಡಲಾಗಿತ್ತು.
ಸದ್ಯ ಪಾಲಿಕೆ ಸದಸ್ಯರು ಐಪ್ಯಾಡ್ ನೀಡುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಮತ್ತೆ ಈ ಕಾರ್ಯಕ್ಕೆ ಮತ್ತೆ ಚಾಲನೆ ನೀಡಲಾಗಿದೆ. ಟೆಂಡರ್ ಜತೆಗೆ ಬೇಸಿಕ್ಸ್ ಹಾಗೂ ಆಫೀಸ್ ಅಪ್ಲಿಕೇಷನ್ ಪೂರೈಕೆ ಮಾಡುವಂತೆಯೂ ಟೆಂಡರ್ ನಲ್ಲಿ ಸೂಚಿಸಲಾಗಿದೆ.
1.20 ಕೋಟಿ ರೂ. ವೆಚ್ಚ : ಬಿಬಿಎಂಪಿ ಚುನಾಯಿತ ಸದಸ್ಯರು ಹಾಗೂ ನಾಮಕರಣ ಸದಸ್ಯರಿಗೆ ಐಪ್ಯಾಡ್ ವಿತರಣೆಗೆ ಸುಮಾರು 1.20 ಕೋಟಿ ವೆಚ್ಚವಾಗುವ ಸಾಧ್ಯತೆ ಇದೆ. ಒಂದು ಐಪ್ಯಾಡ್ ಗೆ 50,000 ರೂ. ತಗಲುವ ಸಾಧ್ಯತೆ ಇದ್ದು, ಐಪ್ಯಾಡ್ ಗೆ ಅನುದಾನ ಯಾವ ಯೋಜನೆಯಲ್ಲಿ ನೀಡಲಾಗುತ್ತದೆ ಎಂದು ತಿಳಿದು ಬಂದಿಲ್ಲ.
ಸದ್ಯ ಕರ್ನಾಟಕ ಸರ್ಕಾರ ಎಲ್ಲಾ ಶಾಸಕರ ಕೈಗೆ ಐಪ್ಯಾಡ್ ನೀಡಲು ಯೋಜನೆ ಸಿದ್ದಗೊಳಿಸಿದೆ. ಇದರಿಂದ ಪ್ರೇರಿತವಾದ ಬಿಬಿಎಂಪಿ ಈ ನಿರ್ಧಾರಕ್ಕೆ ಬಂದಿರಬಹುದು. ಇದನ್ನು ಕಾರ್ಪೋರೇಟರ್ ಗಳು ಎಷ್ಟು ಪರಿಣಾಮಕಾರಿಯಾಗಿ ಉಪಯೋಗಿಸುತ್ತಾರೆ ಕಾದು ನೋಡಬೇಕು. (ಶಾಸಕರ ಕೈಗೆ ಐಪ್ಯಾಡ್ ಕೊಡುತ್ತೆ ಸಿದ್ದು ಸರ್ಕಾರ!)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications