ತ್ವರಿತಗತಿಯಲ್ಲಿ ರಸ್ತೆಗುಂಡಿ ರಿಪೇರಿಯಾಗ್ತಿದೆ, ಸಹಕರಿಸಿ: ಪರಮೇಶ್ವರ್
Recommended Video
ಬೆಂಗಳೂರು, ಜೂನ್ 25: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದೆನಿಸಿರುವ ರಸ್ತೆಗುಂಡಿಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಬಿಬಿಎಂಪಿ ತ್ವರಿತಗತಿಯಲ್ಲಿ ರಿಪೇರಿಯಾಗುತ್ತಿದೆ, ಸಹಕರಿಸಿ ಎಂದು ಉಪ ಮುಖ್ಯಮಂತ್ರಿ, ನಗರಾಭಿವೃದ್ಧಿ ಸಚಿವ ಜಿ ಪರಮೇಶ್ವರ ಅವರು ಹೇಳಿದ್ದಾರೆ.
ರಸ್ತೆಗುಂಡಿ ರಿಪೇರಿ ಗುರಿತಂತೆ ಟ್ವೀಟ್ ಮಾಡಿ, 7537 ರಸ್ತೆಗುಂಡಿಗಳ ಪೈಕಿ 4944ಗುಂಡಿಗಳನ್ನು ಮುಚ್ಚಲಾಗಿದೆ ಎಂದಿದ್ದಾರೆ.
ಬಿಬಿಎಂಪಿಯ 20 ಇಲಾಖೆಗಳಿಗೆ ಸಂಬಂಧಿಸಿದ ದೂರುಗಳನ್ನು ಮೊಬೈಲ್ ಮೂಲಕವೇ ನೀಡಬಹುದಾಗಿದೆ.ದೂರಿಗೆ ಸಂಬಂಧಪಟ್ಟಂತೆ ತೆಗೆದುಕೊಂಡ ಕ್ರಮಗಳ ವಿವರ ನಿಮ್ಮ ಮೊಬೈಲ್ಗೆ ಸಂದೇಶ ರೂಪದಲ್ಲಿ ಬರುತ್ತದೆ.
ರಸ್ತೆ ಗುಂಡಿ ಕಂಡರೆ ಆನ್ಲೈನ್ ನಲ್ಲಿ ಬಿಬಿಎಂಪಿಗೆ ದೂರು ನೀಡಿ
ಅಪ್ಲಿಕೇಶನ್ ಮೂಲಕ ಬರುವ ದೂರುಗಳನ್ನು ನಿರ್ವಹಣೆ ಮಾಡಲು 24 ಗಂಟೆಗಳ ಕಾಲವೂ ಕಾರ್ಯನಿರ್ವಹಣೆ ಮಾಡುವ ಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದೆ.
ಬಿಬಿಎಂಪಿಯು ಶೀಘ್ರವಾಗಿ ರಸ್ತೆಗಳನ್ನು ದುರಸ್ತಿಗೊಳಿಸುತ್ತಿದೆ. ನಿಮ್ಮ ಬೆಂಬಲವೇ ನಮಗೆ ಪ್ರೋತ್ಸಾಹ! pic.twitter.com/Oln0UE8jRy
— Dr. G Parameshwara (@DrParameshwara) June 24, 2018
080-22660000 ಸಹಾಯವಾಣಿಗೆ ಕರೆ ಮಾಡಿ ಅಥವಾ 9480685700ಗೆ ವಾಟ್ಸಪ್ ಮೂಲಕ ರಸ್ತೆಗುಂಡಿ ಸಮಸ್ಯೆ ಬಗ್ಗೆ ಸಾರ್ವಜನಿಕರು ದೂರು ನೀಡಬಹುದಾಗಿದೆ. ಇದಲ್ಲದೆ ಆನ್ ಲೈನ್ ಮೂಲಕ ದೂರು ನೀಡಿ, ದೂರಿನ ಪ್ರಗತಿ ಬಗ್ಗೆ ಟ್ರ್ಯಾಕ್ ಮಾಡಬಹುದಾಗಿದೆ.