Bengaluru: ವಿವಿಧೆಡೆಯ ಇಂದಿರಾ ಕ್ಯಾಂಟಿನ್ ದುರಸ್ಥಿಗೆ ಬಿಬಿಎಂಪಿ ಸೂಚನೆ, ಎಲ್ಲಿ ಏನು ಹಾಳಾಗಿದೆ ತಿಳಿಯಿರಿ?
ಬೆಂಗಳೂರು, ಜುಲೈ 12: ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ 'ಇಂದಿರಾ ಕ್ಯಾಂಟೀನ್' ಪುನರ್ ಆರಂಭಕ್ಕೆ, ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಈಗಾಗಲೇ 100 ರೂ. ಹಣ ಹಂಚಿಕೆ ಮಾಡಿದ್ದಾರೆ. ಇದರ ಬೆನಲ್ಲೆ ದುರಸ್ಥಿ ಎದರು ನೋಡುತ್ತಿದ್ದ ವಿವಿಧೆಡೆಯ ಇಂದಿರಾ ಕ್ಯಾಂಟೀನ್ಗಳನ್ನು ಸರಿಪಡಿಸಲು ಬಿಬಿಎಂಪಿ ಮುಂದಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು, ಬುಧವಾರ ಬೆಂಗಳೂರಿನ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎರಡು ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಅವರು, ಈ ವಲಯದಲ್ಲಿ ಇಂದಿರಾ ಕ್ಯಾಂಟೀನ್ಗಳ ದುರಸ್ಥಿ ಕಾರ್ಯಗಳನ್ನು ಕೂಡಲೇ ಕೈಗೆತ್ತಿಕೊಂಡು ಸರಿಪಡಿಸಲು ಅವರು ಸೂಚಿಸಿದರು.

ವಿವಿಧ ಇಂದಿರಾ ಕ್ಯಾಂಟೀನ್ ಗಳಲ್ಲಿನ ನಿರ್ವಹಣೆ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಈ ವೇಳೆ ಇಂದಿರಾ ಕ್ಯಾಂಟೀನ್ ನಲ್ಲಿ ದುರಸ್ಥಿಯಲ್ಲಿರುವ ವಿದ್ಯುತ್ ಲೈಟ್ ಸರಿಪಡಿಸಬೇಕು, ಕೈ ತೊಳೆಯುವ ನೀರಿನ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಬಳಕೆಗೆ ಅನುಕೂಲ ಮಾಡಿಕೊಂಡುವಂತೆ ಅವರು ತಿಳಿಸಿದರು.
ಶೌಚಾಲಯವನ್ನು ಸಾರ್ವಜನಿಕರ ಉಪಯೋಗಕ್ಕಾಗಿ ತೆರೆಯಬೇಕು. ಅದಕ್ಕೆ ಅಗತ್ಯ ನೀರಿನ ವ್ಯವಸ್ಥೆ ಮಾಡುವಂತೆ ಕ್ಯಾಂಟೀನ್ ನಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.

ಆಹಾರದ ಮೆನು ಶೀಘ್ರವೇ ಬದಲಾವಣೆ
ಇಂದಿರಾ ಕ್ಯಾಂಟೀನ್ ತಪಾಸಣೆಯ ವೇಳೆ ಸಾರ್ವಜನಿಕರ ಬಳಿ ತಿಂಡಿಯ ಗುಣಮಟ್ಟ ವಿಚಾರಿಸಿದಾಗ ಪ್ರತಿನಿತ್ಯ ಅಕ್ಕಿಯಿಂದ ಮಾಡಿದಂತಹ ಆಹಾರ ಮಾತ್ರ ಲಭ್ಯವಾಗಲಿದೆ. ಅದನ್ನು ಬದಲಿಸಲು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಇಂದಿರಾ ಕ್ಯಾಂಟೀನ್ ಗಳಲ್ಲಿ ನೀಡುವ ಆಹಾರದ ಮೆನು ಶೀಘ್ರವೇ ಬದಲಾಗಲಿದೆ. ದಿನನಿತ್ಯ ಬೇರೆ-ಬೇರೆ ತಿಂಡಿ-ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಇಂದಿರಾ ಕ್ಯಾಂಟೀನ್ ಗಳಿಗೆ ನಿಯೋಜಿಸಿರುವ ಮಾರ್ಷಲ್ಗಳನ್ನು ಬರೀ ಇಂದಿರಾ ಕ್ಯಾಂಟೀನ್ ನೋಡಿಕೊಳ್ಳುವುದು ಮಾತ್ರವಲ್ಲದೇ ಬೇರೆ-ಬೇರೆ ಜವಾಬ್ದಾರಿಗಳನ್ನು ಸಹ ನೀಡಬೇಕೆಂದು ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಯಿತು. ಜೊತೆಗೆ ಇಂದಿರಾ ಕ್ಯಾಂಟೀನ್/ಆಹಾರದ ಗುಣಮಟ್ಟ/ಹೆಚ್ಚು ಹಣ ಪಡೆಯುವ ವಿಚಾರವಾಗಿ ದೂರುಗಳಿದ್ದಲ್ಲಿ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ದೂರುಗಳನ್ನು ನೀಡಬಹುದು ಎಂದು ಹೇಳಿದರು.
ಸಣ್ಣ ಪುಟ್ಟು ದರುಸ್ಥಿ ಇದ್ದರೂ ಸರಿಪಡಿಸಿ
ಇದೇ ವೇಳೆ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ನಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ನಿಡಿ ಪರಿಶೀಲನೆ ನಡೆಸಲಾಯಿತು. ಅಲ್ಲಿನ ಇಂದಿರಾ ಕ್ಯಾಂಟೀನ್ ನ ನಾಮ ಫಲಕ ಹಾಳಾಗಿದ್ದು, ಅದನ್ನು ಕೂಡಲೇ ಬದಲಿಸಬೇಕು. ಇಂದಿರಾ ಕ್ಯಾಂಟೀನ್ ಗೆ ಅಳವಡಿಸಿರುವ ಮೆಟ್ಟಿಲುಗಳು ಹಾಳಾಗಿದ್ದು, ದುರಸ್ಥಿಗೊಳಿಸಲು, ಇನ್ನಿತರ ಸಣ್ಣ-ಪುಟ್ಟ ದುರಸ್ಥಿಗಳಿದ್ದರೆ ಅವುಗಳನ್ನು ಕೂಡಲೇ ಸಿರಪಡಿಸುವ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ತಿಳಿಸಿದರು.
ಇಂದಿರಾ ಕ್ಯಾಂಟೀನ್ ಪರಿಶೀಲನೆ ವೇಳೆ ವಲಯ ಜಂಟಿ ಆಯುಕ್ತರಾದ ಪಲ್ಲವಿ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರಾದ ಸುಗುಣಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ












Click it and Unblock the Notifications