ಥಣಿಸಂದ್ರದ ಅಪಾರ್ಟ್ಮೆಂಟ್ಗೆ ನೀಡಿದ್ದ ಭೂಸ್ವಾಧೀನಾನುಭವ ಪತ್ರ ಬಿಬಿಎಂಪಿ ಹಿಂಪಡೆದಿದೆ
ಬೆಂಗಳೂರು, ಜನವರಿ 22: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಥಣಿಸಂದ್ರದ ಅಪಾರ್ಟ್ಮೆಂಟ್ಗೆ ನೀಡಿದ್ದ ಸ್ವಾಧೀನಾನುಭವ ಪತ್ರ (OC) ಅನ್ನು ಭಾನುವಾರ ಹಿಂಪಡೆದಿದೆ. ಈ ಮೂಲಕ ಶೋಭಾ ಲಿಮಿಟೆಡ್ನ ಈ ವಸತಿ ಸಮುಚ್ಚಯದ ನಿವಾಸಿಗಳಿಗೆ ಶಾಕ್ ನೀಡಿದೆ.
ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಈ ವಸತಿ ಸಮುಚ್ಚಯ (Apartment) ವನ್ನು ಶೋಭಾ ಕಂಪನಿ ಅಭಿವೃದ್ಧಿಪಡಿಸಿ ಮಾರಾಟ ಮಾಡಿತ್ತು. ಇಲ್ಲಿ ನೆಲೆಸುತ್ತಿದ್ದ ಸಾಕಷ್ಟು ಕುಟುಂಬಗಳಿಗೆ ಇದೀಗ ಆತಂಕ ಎದುರಾಗಿದೆ. ಅಪಾರ್ಟ್ಮೆಂಟ್ ಬಿಲ್ಡರ್ ಅಗ್ನಿಶಾಮಕ ಇಲಾಖೆಗೆ ನಕಲಿ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ಸಲ್ಲಿಸಿದೆ ಎಂದು ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯ್ಲಲಿ ಬಿಬಿಎಂಪಿ ಭೂಸ್ವಾಧೀನಾನುಭವ ಪತ್ರ ಹಿಂಪಡೆದಿದೆ ಎಂದು ಟೌನ್ ಪ್ಲಾನಿಂಗ್ (ಉತ್ತರ) ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಸದ್ಯ ಬಿಲ್ಡರ್ಗಳು ಸಲ್ಲಿಸಿರುವ ಪ್ರಮಾಣಪತ್ರಗಳು ಅಸಲಿ, ಇಲ್ಲವೋ ನಕಲಿ ಎಂಬುದನ್ನು ನಿರ್ಧರಿಸಲು ಬಿಬಿಎಂಪಿಯು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗೆ (ಕೆಎಸ್ಎಫ್ಇಎಸ್) ಪತ್ರ ಬರೆದು ಕೋರಿದೆ.
ಬಿಬಿಎಂಪಿಯಿಂದ ಅನುಮತಿ ಪಡೆಯುವಾಗ ಮಾಲೀಕರು ಯಾವುದೇ ತಪ್ಪು ಮಾಹಿತಿ, ನಕಲಿ ದಾಖಲೆಗಳನ್ನು ಸಲ್ಲಿಸಿದ್ದೇ ಆದಲ್ಲಿ ಭೂಸ್ವಾಧೀನಾನುಭವ ಪ್ರಮಾಣಪತ್ರ (OC) ರದ್ದುಗೊಳಿಸಲು ಅವಕಾಶ ಇದೆ ಎಂದು ಅಧಿಕಾರಿಗಳು ಹೇಳಿದರು.
2016 ಮತ್ತು 2018 ರಲ್ಲಿ ಅವರು ಸಮುಚ್ಚಯಕ್ಕೆ ಸಂಬಂಧಿಸದಿಂತೆ ಸಲ್ಲಿಸಿದ ನಿರಾಕ್ಷೇಪಣಾ ಪತ್ರ ಮತ್ತು ದಾಖಲೆಗಳ ಆಧಾರದ ಮೇಲೆ ಬಿಬಿಎಂಪಿ ವಸತಿ ಸಮುಚ್ಚಯಕ್ಕೆ ಭೂಸ್ವಾಧೀನಾನುಭವ ಪತ್ರ ನೀಡಿತ್ತು. ಆದರೆ ದಾಖಲೆಗಳು ನಕಲಿ ಎಂಬ ಕಾರಣಕ್ಕೆ ಬಿಬಿಎಂಪಿ ನೋಟಿಸ್ ನೀಡಿದೆ.

ಬಿಬಿಎಂಪಿಯ ಈ ನಿರ್ಧಾರಗಳು, ಕೇಳಿ ಬಂದ ಆರೋಪಗಳ ಮೇರೆಗೆ ಸ್ವಂತ ಮನೆ ಹೊಂದಬೇಕು ಎಂಬ ನೂರಾರು ಮಂದಿಯ ಕನಸು ನುಚ್ಚು ನೂರಾಗಿದೆ. ಈ ಮಧ್ಯೆ ಶೋಭಾ ಕಂಪನಿ ಪ್ರತಿನಿಧಿಗಳು ನಿವಾಸಿಗಳಲ್ಲಿ ಧೈರ್ಯ ತುಂಬಿದ್ದಾರೆ. ಯಾರೂ ಭಯ ಪಡುವ ಅಗತ್ಯವಿಲ್ಲ. ಬಿಬಿಎಂಪಿ ನೀಡಿರುವ ನೋಟಿಸ್ ಯಾರ ಮೇಲೂ ಪ್ರಭಾವ ಬೀರುವುದಿಲ್ಲ. ನಾವು ಎಲ್ಲ ನಿಯಮಗಳನ್ನು ಅನುಸರಿಸಿದ್ದು, ಈ ಬಗ್ಗೆ ಪರಿಹಾರ ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಪ್ರಸ್ತುತ ಅಧಿವೇಶನದಲ್ಲೇ KAOMA 2025 ತಕ್ಷಣ ಜಾರಿಗೊಳಿಸಿ, ತಾರತಮ್ಯದ ತ್ಯಾಜ್ಯ ಶುಲ್ಕ ರದ್ದುಪಡಿಸಿ: BAF ಆಗ್ರಹ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ











Click it and Unblock the Notifications