2 ಉದ್ಯಾನದಲ್ಲಿ ಸೌರ ವಿದ್ಯುತ್ ಉತ್ಪಾದನೆ ಆರಂಭಿಸಿದ ಬಿಬಿಎಂಪಿ
ಬೆಂಗಳೂರು, ನವೆಂಬರ್ 19 : ಇದೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರದ ಎರಡು ಉದ್ಯಾನವನಗಳಲ್ಲಿ ಸೋಲಾರ್ ಫಲಕವನ್ನು ಅಳವಡಿಸಿದೆ. ಇದರಿಂದಾಗಿ ಬೆಸ್ಕಾಂಗೆ ಪಾವತಿ ಮಾಡುವ ಸಾವಿರಾರು ರೂ. ವಿದ್ಯುತ್ ಬಿಲ್ ಉಳಿತಾಯವಾಗಲಿದೆ.
ಸೋಮವಾರ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮತ್ತು ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್.ಅಶೋಕ್ ಅವರು ಜಯನಗರ 3ನೇ ಬಡಾವಣೆಯ ಯಡಿಯೂರು ವಾರ್ಡ್ನ 'ಸಂಜೀವಿನಿ ವನ', 'ಧನ್ವಂತರಿ ವನ' ದಲ್ಲಿಸೌರ ಫಲಕಗಳನ್ನು ಉದ್ಘಾಟಿಸಿದರು.
ಇದೇ ಮೊದಲ ಬಾರಿಗೆ ಬೃತಹ್ ಬೆಂಗಳೂರು ಮಹಾನಗರ ಪಾಲಿಕೆ ಯಡಿಯೂರು ವಾರ್ಡ್ (167) ವ್ಯಾಪ್ತಿಯ ಜಯನಗರ 3ನೇ ಬಡಾವಣೆಯ 4ನೇ ಮತ್ತು 5ನೇ ಮುಖ್ಯರಸ್ತೆ ನಡುವೆ ಇರುವ ಎರಡು ಉದ್ಯಾನದಲ್ಲಿ ಸೌರ ವಿದ್ಯುತ್ ಘಟಕವನ್ನು ಪಾಲಿಕೆಯ ಅನುದಾನದಲ್ಲಿ ಸ್ಥಾಪನೆ ಮಾಡಿದೆ.
ಈಗಾಗಲೇ ಯಡಿಯೂರು ವಾರ್ಡ್ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಹಸಿ ತ್ಯಾಜ್ಯವನ್ನು ಬಳಸಿಕೊಂಡು 'ಯಡಿಯೂರು ಜೈವಿಕ ಅನಿಲ ಘಟಕ'ದಲ್ಲಿ ದಿನನಿತ್ಯ 50 ಕಿಲೋವಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.

15 ಲಕ್ಷ ರೂ. ವೆಚ್ಚ
ಸುಮಾರು 15 ಲಕ್ಷ ರೂ.ಗಳ ವೆಚ್ಚದಲ್ಲಿ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸಲಾಗಿದೆ. ಇದರಿದ ಪ್ರತಿ ದಿನ 15 ಕಿಗಾವಾಟ್ ವಿದ್ಯುತ್ ಉತ್ಪಾದಿಸಲಾಗುತ್ತದೆ. ಇವುಗಳಿಂದ ಸಂಜೀವಿನಿ ವನ, ಧನ್ವಂತರಿ ವನದ ಮುಕ್ಕಾಲು ಕಿಲೋಮೀಟರ್ ಉದ್ದದ ವಾಯುವಿಹಾರ ಮಾರ್ಗ ಮತ್ತು ಮಹಾಕಾಯ ವ್ಯಾಯಾಮ ಕೇಂದ್ರಗಳ ಎಲ್ಲ ವಿದ್ಯುತ್ ದೀಪಗಳನ್ನು ಬೆಳಗಿಸಬಹುದಾಗಿದೆ. ಈ ಮೂಲಕ BESCOM ಸಂಸ್ಥೆಗೆ ಈ ಉದ್ಯಾನಗಳಿಂದ ಪ್ರತಿ ತಿಂಗಳು ಪಾಲಿಕೆ ಪಾವತಿಸುತ್ತಿರುವ 43 ಸಾವಿರ ರೂ. ಹಣ ಉಳಿತಾಯವಾಗಲಿದೆ.

ಹೆಚ್ಚಿನ ವಿದ್ಯುತ್ ಉತ್ಪಾದನೆ
ಮುಂದಿನ ಮೂರು ತಿಂಗಳಿನಲ್ಲಿ ಈ ಘಟಕವನ್ನು ವಿಸ್ತರಣೆ ಮಾಡಿ, 25 ಕಿಗಾವಾಟ್ ಸೌರ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳು ಅನುಷ್ಠಾನಗೊಂಡ ನಂತರ ಬೆಸ್ಕಾಂಗೆ ಪಾಲಿಕೆ ಪಾವತಿಸುವ ಸುಮಾರು 3 ಲಕ್ಷ ರೂ. ಉಳಿತಾಯವಾಗಲಿದೆ.

ಕಸದಿಂದ ವಿದ್ಯುತ್ ಉತ್ಪಾದನೆ
ಯಡಿಯೂರು ವಾರ್ಡ್ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಹಸಿ ತ್ಯಾಜ್ಯವನ್ನು ಬಳಸಿ ಯಡಿಯೂರು ಜೈವಿಕ ಅನಿಲ ಘಟಕದಲ್ಲಿ ನಿತ್ಯ 50 ಕಿಗಾವಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಇದರಿಂದ ಯಡಿಯೂರು ವಾರ್ಡ್ ವ್ಯಾಪ್ತಿಯಲ್ಲಿರುವ 7 ಉದ್ಯಾನವನ, 3 ಕಿಲೋಮೀಟರ್ ಉದ್ದದ ಮಾದರಿ ಪಾದಚಾರಿ ಮಾರ್ಗಗಳಲ್ಲಿ ಇರುವ ವಿದ್ಯುತ್ ದೀಪಗಳನ್ನು ಮತ್ತು ಅಲಂಕಾರಿಕ ದೀಪಗಳನ್ನು ಬೆಳಗಿಸಲಾಗುತ್ತಿದ್ದು,1,75,000 ಗಳಷ್ಟು ವಿದ್ಯುತ್ ಶುಲ್ಕವನ್ನು ಉಳಿತಾಯ ಮಾಡಲಾಗುತ್ತಿದೆ.

ಯಡಿಯೂರು ವಾರ್ಡ್
ನವೆಂಬರ್ ಅಂತ್ಯದೊಳಗೆ ಯಡಿಯೂರು ಜೈವಿಕ ಅನಿಲ ಘಟಕದಲ್ಲಿ ನಿತ್ಯ 250 ಕಿಗಾವಾಟ್ ವಿದ್ಯುತ್ ಉತ್ಪಾದಿಸಲಾಗುತ್ತದೆ. ಶೀಘ್ರದಲ್ಲಿಯೇ ಯಡಿಯೂರು ವಾರ್ಡ್ ಅನ್ನು ಬೆಸ್ಕಾಂ ವಿದ್ಯುತ್ ಮುಕ್ತ ವಾರ್ಡ್ ಆಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications