2 ಉದ್ಯಾನದಲ್ಲಿ ಸೌರ ವಿದ್ಯುತ್ ಉತ್ಪಾದನೆ ಆರಂಭಿಸಿದ ಬಿಬಿಎಂಪಿ
ಬೆಂಗಳೂರು, ನವೆಂಬರ್ 19 : ಇದೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರದ ಎರಡು ಉದ್ಯಾನವನಗಳಲ್ಲಿ ಸೋಲಾರ್ ಫಲಕವನ್ನು ಅಳವಡಿಸಿದೆ. ಇದರಿಂದಾಗಿ ಬೆಸ್ಕಾಂಗೆ ಪಾವತಿ ಮಾಡುವ ಸಾವಿರಾರು ರೂ. ವಿದ್ಯುತ್ ಬಿಲ್ ಉಳಿತಾಯವಾಗಲಿದೆ.
ಸೋಮವಾರ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮತ್ತು ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್.ಅಶೋಕ್ ಅವರು ಜಯನಗರ 3ನೇ ಬಡಾವಣೆಯ ಯಡಿಯೂರು ವಾರ್ಡ್ನ 'ಸಂಜೀವಿನಿ ವನ', 'ಧನ್ವಂತರಿ ವನ' ದಲ್ಲಿಸೌರ ಫಲಕಗಳನ್ನು ಉದ್ಘಾಟಿಸಿದರು.
ಇದೇ ಮೊದಲ ಬಾರಿಗೆ ಬೃತಹ್ ಬೆಂಗಳೂರು ಮಹಾನಗರ ಪಾಲಿಕೆ ಯಡಿಯೂರು ವಾರ್ಡ್ (167) ವ್ಯಾಪ್ತಿಯ ಜಯನಗರ 3ನೇ ಬಡಾವಣೆಯ 4ನೇ ಮತ್ತು 5ನೇ ಮುಖ್ಯರಸ್ತೆ ನಡುವೆ ಇರುವ ಎರಡು ಉದ್ಯಾನದಲ್ಲಿ ಸೌರ ವಿದ್ಯುತ್ ಘಟಕವನ್ನು ಪಾಲಿಕೆಯ ಅನುದಾನದಲ್ಲಿ ಸ್ಥಾಪನೆ ಮಾಡಿದೆ.
ಈಗಾಗಲೇ ಯಡಿಯೂರು ವಾರ್ಡ್ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಹಸಿ ತ್ಯಾಜ್ಯವನ್ನು ಬಳಸಿಕೊಂಡು 'ಯಡಿಯೂರು ಜೈವಿಕ ಅನಿಲ ಘಟಕ'ದಲ್ಲಿ ದಿನನಿತ್ಯ 50 ಕಿಲೋವಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.

15 ಲಕ್ಷ ರೂ. ವೆಚ್ಚ
ಸುಮಾರು 15 ಲಕ್ಷ ರೂ.ಗಳ ವೆಚ್ಚದಲ್ಲಿ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸಲಾಗಿದೆ. ಇದರಿದ ಪ್ರತಿ ದಿನ 15 ಕಿಗಾವಾಟ್ ವಿದ್ಯುತ್ ಉತ್ಪಾದಿಸಲಾಗುತ್ತದೆ. ಇವುಗಳಿಂದ ಸಂಜೀವಿನಿ ವನ, ಧನ್ವಂತರಿ ವನದ ಮುಕ್ಕಾಲು ಕಿಲೋಮೀಟರ್ ಉದ್ದದ ವಾಯುವಿಹಾರ ಮಾರ್ಗ ಮತ್ತು ಮಹಾಕಾಯ ವ್ಯಾಯಾಮ ಕೇಂದ್ರಗಳ ಎಲ್ಲ ವಿದ್ಯುತ್ ದೀಪಗಳನ್ನು ಬೆಳಗಿಸಬಹುದಾಗಿದೆ. ಈ ಮೂಲಕ BESCOM ಸಂಸ್ಥೆಗೆ ಈ ಉದ್ಯಾನಗಳಿಂದ ಪ್ರತಿ ತಿಂಗಳು ಪಾಲಿಕೆ ಪಾವತಿಸುತ್ತಿರುವ 43 ಸಾವಿರ ರೂ. ಹಣ ಉಳಿತಾಯವಾಗಲಿದೆ.

ಹೆಚ್ಚಿನ ವಿದ್ಯುತ್ ಉತ್ಪಾದನೆ
ಮುಂದಿನ ಮೂರು ತಿಂಗಳಿನಲ್ಲಿ ಈ ಘಟಕವನ್ನು ವಿಸ್ತರಣೆ ಮಾಡಿ, 25 ಕಿಗಾವಾಟ್ ಸೌರ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳು ಅನುಷ್ಠಾನಗೊಂಡ ನಂತರ ಬೆಸ್ಕಾಂಗೆ ಪಾಲಿಕೆ ಪಾವತಿಸುವ ಸುಮಾರು 3 ಲಕ್ಷ ರೂ. ಉಳಿತಾಯವಾಗಲಿದೆ.

ಕಸದಿಂದ ವಿದ್ಯುತ್ ಉತ್ಪಾದನೆ
ಯಡಿಯೂರು ವಾರ್ಡ್ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಹಸಿ ತ್ಯಾಜ್ಯವನ್ನು ಬಳಸಿ ಯಡಿಯೂರು ಜೈವಿಕ ಅನಿಲ ಘಟಕದಲ್ಲಿ ನಿತ್ಯ 50 ಕಿಗಾವಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಇದರಿಂದ ಯಡಿಯೂರು ವಾರ್ಡ್ ವ್ಯಾಪ್ತಿಯಲ್ಲಿರುವ 7 ಉದ್ಯಾನವನ, 3 ಕಿಲೋಮೀಟರ್ ಉದ್ದದ ಮಾದರಿ ಪಾದಚಾರಿ ಮಾರ್ಗಗಳಲ್ಲಿ ಇರುವ ವಿದ್ಯುತ್ ದೀಪಗಳನ್ನು ಮತ್ತು ಅಲಂಕಾರಿಕ ದೀಪಗಳನ್ನು ಬೆಳಗಿಸಲಾಗುತ್ತಿದ್ದು,1,75,000 ಗಳಷ್ಟು ವಿದ್ಯುತ್ ಶುಲ್ಕವನ್ನು ಉಳಿತಾಯ ಮಾಡಲಾಗುತ್ತಿದೆ.

ಯಡಿಯೂರು ವಾರ್ಡ್
ನವೆಂಬರ್ ಅಂತ್ಯದೊಳಗೆ ಯಡಿಯೂರು ಜೈವಿಕ ಅನಿಲ ಘಟಕದಲ್ಲಿ ನಿತ್ಯ 250 ಕಿಗಾವಾಟ್ ವಿದ್ಯುತ್ ಉತ್ಪಾದಿಸಲಾಗುತ್ತದೆ. ಶೀಘ್ರದಲ್ಲಿಯೇ ಯಡಿಯೂರು ವಾರ್ಡ್ ಅನ್ನು ಬೆಸ್ಕಾಂ ವಿದ್ಯುತ್ ಮುಕ್ತ ವಾರ್ಡ್ ಆಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications