ಬೆಂಗಳೂರು: ಕೆ-100 ಮಾರ್ಗದ ಒತ್ತುವರಿ ತೆರವಿಗೆ ಬಿಬಿಎಂಪಿ ಸೂಚನೆ
ಬೆಂಗಳೂರು, ಡಿಸೆಂಬರ್ 15: ಬೆಂಗಳೂರು ನಾಗರೀಕರ ಜಲ ಮಾರ್ಗ ಯೋಜನೆ (ಕೆ-100)ಯ ಮಾರ್ಗಕ್ಕೆ ಹೊಂದಿಕೊಂಡ ಪ್ರದೇಶದಲ್ಲಿ ಆಗಿರುವ ಒತ್ತುವರಿಯನ್ನು ತೆರವುಗೊಳಿಸುವಂತೆ ಬಿಬಿಎಂಪಿ ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ಗುರುವಾರ ಸೂಚಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎನ್ಆರ್ ರಸ್ತೆ (ಕೆ.ಆರ್.ಮಾರುಕಟ್ಟೆ) ಯಿಂದ ಬೆಳ್ಳಂದೂರು ಕೆರೆಯವರೆಗೆ "ಬೆಂಗಳೂರು ನಾಗರೀಕರ ಜಲ ಮಾರ್ಗ ಯೋಜನೆ (ಕೆ-100) ಕಾಮಗಾರಿಯು ಪ್ರಗತಿಯಲ್ಲಿದೆ. ಈ ಯೋಜನೆಯಲ್ಲಿ ಬೆಂಗಳೂರು, ನಗರದ ಕೋರಮಂಗಲ ಕಣಿವೆಯ ಎನ್ಆರ್ ರಸ್ತೆಯಿಂದ ಬೆಳ್ಳಂದೂರು ಕೆರೆಯವರೆಗಿನ ಕಾಲುವೆಯನ್ನು ಅಭಿವೃದ್ಧಿಪಡಿಸಿ, ತ್ಯಾಜ್ಯ ನೀರಿನಿಂದ ಮುಕ್ತಗೊಳಿಸಲಾಗುವುದು. ಕಾಲುವೆಯಲ್ಲಿ ಸದಾಕಾಲ, ಶುದ್ಧೀಕರಿಸಿದ ನೀರು ಹರಿಯುವಂತೆ ಮಾಡಿ ಮಳೆ ನೀರುಗಾಲುವೆಯ ಸೌಂದರ್ಯೀಕರಣ ಕಾಮಗಾರಿಯನ್ನು ಕೈಗೊಳ್ಳುವುದು ಯೋಜನೆಯ ಉದ್ದೇಶವಾಗಿದೆ ಎಂದರು.
ಈ ಯೋಜನೆಯ ಎಸ್ಆರ್ ರಸ್ತೆಯಿಂದ ಬೆಳ್ಳಂದೂರು ಕೆರೆಯವರೆಗಿನ ಕಾಲುವೆಯಲ್ಲಿ ಪಾದಾಚಾರಿಗಳ ಅನುಕೂಲಕ್ಕಾಗಿ ಪಾದಾಚಾರಿ ಮಾರ್ಗ ಮತ್ತು ಬಿಡ್ಗಳನ್ನು ನಿರ್ಮಾಣ ಮಾಡಲಾಗಿದೆ. ಈ ಮಾರ್ಗಕ್ಕೆ ಹೊಂದಿಕೊಂಡಿರುವ ಕೆಲವು ಮಳಿಗೆಗಳು ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಹಾಕಿ ಜಾಗ ಒತ್ತುವರಿ ಮಾಡಿಕೊಂಡಿವೆ. ತ್ಯಾಜ್ಯ ವಸ್ತುಗಳನ್ನು ರಾಜಕಾಲುವೆಯಲ್ಲಿ ಮತ್ತು ಪಾದಾಚಾರಿ ಮಾರ್ಗದಲ್ಲಿ ಹಾಕುತ್ತಿರುವುದು ಕಂಡು ಬಂದಿದೆ.. ಇದರಿಂದಾಗಿ ಅಭಿವೃದ್ಧಿಪಡಿಸಲಾದ ಕೆಲ ಭಾಗಗಳಿಗೆ ಹಾನಿಯಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಆದ್ದರಿಂದ, ಈ ರೀತಿ ಪಾದಾಚಾರಿಗಳ ಮಾರ್ಗಕ್ಕೆ ಆಡಚಣೆಯಾಗುವ ರೀತಿಯಲ್ಲಿ ಹಾಕಿರುವ ಸಾಮಗ್ರಿಗಳನ್ನು ಸಂಬಂಧಪಟ್ಟ ಮಳಿಗೆಗಳ ಮಾಲೀಕರುಗಳು ಕೂಡಲೇ ತೆರವುಗೊಳಿಸಲುಬೇಕು. ಜೊತೆಗೆ ಇನ್ನು ಮುಂದೇ ಯಾವುದೇ ಸಾಮಗ್ರಿಗಳನ್ನು ಮತ್ತು ತ್ಯಾಜ್ಯ ವಸ್ತುಗಳನ್ನು ಪಾದಾಚಾರಿ ಮಾರ್ಗದಲ್ಲಿ ಹಾಕದಂತೆ ಬಿಬಿಎಂಪಿ ತಾಕೀತು ಮಾಡಿದೆ.
ಅಭಿವೃದ್ಧಿಪಡಿಸಲಾದ ಕಾಲುವೆಯ ಭಾಗಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಸಂಬಂಧಪಟ್ಟ ಮಳಿಗೆಯವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪ್ರಧಾನ ಅಭಿಯಂತರ ಪ್ರಹ್ಲಾದ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
-
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications