ಬೆಂಗಳೂರು: ಕೆ-100 ಮಾರ್ಗದ ಒತ್ತುವರಿ ತೆರವಿಗೆ ಬಿಬಿಎಂಪಿ ಸೂಚನೆ
ಬೆಂಗಳೂರು, ಡಿಸೆಂಬರ್ 15: ಬೆಂಗಳೂರು ನಾಗರೀಕರ ಜಲ ಮಾರ್ಗ ಯೋಜನೆ (ಕೆ-100)ಯ ಮಾರ್ಗಕ್ಕೆ ಹೊಂದಿಕೊಂಡ ಪ್ರದೇಶದಲ್ಲಿ ಆಗಿರುವ ಒತ್ತುವರಿಯನ್ನು ತೆರವುಗೊಳಿಸುವಂತೆ ಬಿಬಿಎಂಪಿ ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ಗುರುವಾರ ಸೂಚಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎನ್ಆರ್ ರಸ್ತೆ (ಕೆ.ಆರ್.ಮಾರುಕಟ್ಟೆ) ಯಿಂದ ಬೆಳ್ಳಂದೂರು ಕೆರೆಯವರೆಗೆ "ಬೆಂಗಳೂರು ನಾಗರೀಕರ ಜಲ ಮಾರ್ಗ ಯೋಜನೆ (ಕೆ-100) ಕಾಮಗಾರಿಯು ಪ್ರಗತಿಯಲ್ಲಿದೆ. ಈ ಯೋಜನೆಯಲ್ಲಿ ಬೆಂಗಳೂರು, ನಗರದ ಕೋರಮಂಗಲ ಕಣಿವೆಯ ಎನ್ಆರ್ ರಸ್ತೆಯಿಂದ ಬೆಳ್ಳಂದೂರು ಕೆರೆಯವರೆಗಿನ ಕಾಲುವೆಯನ್ನು ಅಭಿವೃದ್ಧಿಪಡಿಸಿ, ತ್ಯಾಜ್ಯ ನೀರಿನಿಂದ ಮುಕ್ತಗೊಳಿಸಲಾಗುವುದು. ಕಾಲುವೆಯಲ್ಲಿ ಸದಾಕಾಲ, ಶುದ್ಧೀಕರಿಸಿದ ನೀರು ಹರಿಯುವಂತೆ ಮಾಡಿ ಮಳೆ ನೀರುಗಾಲುವೆಯ ಸೌಂದರ್ಯೀಕರಣ ಕಾಮಗಾರಿಯನ್ನು ಕೈಗೊಳ್ಳುವುದು ಯೋಜನೆಯ ಉದ್ದೇಶವಾಗಿದೆ ಎಂದರು.
ಈ ಯೋಜನೆಯ ಎಸ್ಆರ್ ರಸ್ತೆಯಿಂದ ಬೆಳ್ಳಂದೂರು ಕೆರೆಯವರೆಗಿನ ಕಾಲುವೆಯಲ್ಲಿ ಪಾದಾಚಾರಿಗಳ ಅನುಕೂಲಕ್ಕಾಗಿ ಪಾದಾಚಾರಿ ಮಾರ್ಗ ಮತ್ತು ಬಿಡ್ಗಳನ್ನು ನಿರ್ಮಾಣ ಮಾಡಲಾಗಿದೆ. ಈ ಮಾರ್ಗಕ್ಕೆ ಹೊಂದಿಕೊಂಡಿರುವ ಕೆಲವು ಮಳಿಗೆಗಳು ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಹಾಕಿ ಜಾಗ ಒತ್ತುವರಿ ಮಾಡಿಕೊಂಡಿವೆ. ತ್ಯಾಜ್ಯ ವಸ್ತುಗಳನ್ನು ರಾಜಕಾಲುವೆಯಲ್ಲಿ ಮತ್ತು ಪಾದಾಚಾರಿ ಮಾರ್ಗದಲ್ಲಿ ಹಾಕುತ್ತಿರುವುದು ಕಂಡು ಬಂದಿದೆ.. ಇದರಿಂದಾಗಿ ಅಭಿವೃದ್ಧಿಪಡಿಸಲಾದ ಕೆಲ ಭಾಗಗಳಿಗೆ ಹಾನಿಯಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಆದ್ದರಿಂದ, ಈ ರೀತಿ ಪಾದಾಚಾರಿಗಳ ಮಾರ್ಗಕ್ಕೆ ಆಡಚಣೆಯಾಗುವ ರೀತಿಯಲ್ಲಿ ಹಾಕಿರುವ ಸಾಮಗ್ರಿಗಳನ್ನು ಸಂಬಂಧಪಟ್ಟ ಮಳಿಗೆಗಳ ಮಾಲೀಕರುಗಳು ಕೂಡಲೇ ತೆರವುಗೊಳಿಸಲುಬೇಕು. ಜೊತೆಗೆ ಇನ್ನು ಮುಂದೇ ಯಾವುದೇ ಸಾಮಗ್ರಿಗಳನ್ನು ಮತ್ತು ತ್ಯಾಜ್ಯ ವಸ್ತುಗಳನ್ನು ಪಾದಾಚಾರಿ ಮಾರ್ಗದಲ್ಲಿ ಹಾಕದಂತೆ ಬಿಬಿಎಂಪಿ ತಾಕೀತು ಮಾಡಿದೆ.
ಅಭಿವೃದ್ಧಿಪಡಿಸಲಾದ ಕಾಲುವೆಯ ಭಾಗಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಸಂಬಂಧಪಟ್ಟ ಮಳಿಗೆಯವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪ್ರಧಾನ ಅಭಿಯಂತರ ಪ್ರಹ್ಲಾದ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications