Get Updates
Get notified of breaking news, exclusive insights, and must-see stories!

ಬೊಮ್ಮನಹಳ್ಳಿ ಕ್ಷೇತ್ರದ ಮತಗಟ್ಟೆಗಳಿಗೆ ಮೂಲಸೌಕರ್ಯ ಒದಗಿಸಿ: ಬಿಬಿಎಂಪಿ

ಬೆಂಗಳೂರು, ಜನವರಿ 18: ಚುನಾವಣೆ ಸಮೀಪಿಸುತ್ತಿದೆ, ಮತಗಟ್ಟೆಗಳಿಗೆ ಅಗತ್ಯವಾಗಿ ಬೇಕಿರುವ ಕನಿಷ್ಟ ಮೂಲಭೂತ ಸೌಲಭ್ಯಗಳನ್ನು ಒಸಗಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕರ್ನಾಟಕದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ಹತ್ತಿರವಾಗುತ್ತಿದೆ. ಈ ಸಂಬಂಧ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ಪೈಕಿ ಮಂಗಳವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರು ಮತ್ತು ಅಧಿಕಾರಿಗಳು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ತುಷಾರ್ ಗಿರಿನಾಥ್ ಅವರು, ಬೊಮ್ಮನಹಳ್ಳಿ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್, ಪೀಟೊಪಕರಣಗಳು, ಭದ್ರತಾ ಕೊಠಡಿ, ಸಹಾಯ ಕೇಂದ್ರ, ಶೌಚಾಯಲ, ರ‍್ಯಾಂಪ್ ಸೌಲಭ್ಯ ಕಲ್ಪಿಸಬೇಕು. ಇದೆಲ್ಲ ಸಮರ್ಪಕವಾಗಿ ಮಾಡಿ ನಂತರ ವರದಿ ನೀಡುವಂತೆ ಅವರು ತಿಳಿಸಿದರು.

BBMP instruct provide infrastructure for polling booths of Bommanahalli Constituency Bengaluru

ಲಾರೆನ್ಸ್ ಸ್ಕೂಲ್, ಅಗರ ಕರ್ನಾಟಕ ಪಬ್ಲಿಕ್ ಶಾಲೆ, ಸೋಮಸುಂದರ ಪಾಳ್ಯ ಸರ್ಕಾರಿ ಶಾಲೆ, ಹೊಂಗಸಂದ್ರ ವಿದ್ಯಾಜ್ಯೋತಿ ಶಾಲೆಯಲ್ಲಿ ಮತಗಟ್ಟೆಗಳ ನಿರ್ಮಾಣ ಸ್ಥಳ ಳಗಳಿಗೆ ಭೇಟಿ ನೀಡಿ ತುಷಾರ್ ಗಿರಿನಾಥ್ ಪರಿಶೀಲಿಸಿದರು. ಎಲ್ಲಾ ಮತಗಟ್ಟೆಗಳಲ್ಲೂ ಕನಿಷ್ಟ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿ ಇರಬೇಕು. ಇಲ್ಲವಾದಲ್ಲಿ ಬೇರೆಡೆ ಮತಗಟ್ಟೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಅವರು ತಾಕೀತು ಮಾಡಿದರು.

ಬೀದಿ ವ್ಯಾಪಾರಿಗಳಿಗೆ ವಾರ್ಡ್ ರಸ್ತೆಗಳಲ್ಲಿ ವ್ಯಾಪಾರ ಅವಕಾಶ

ಎಚ್‌ಎಸ್ಆರ್ ಬಡಾವಣೆಯ ಬಿಡಿಎ ಕಾಫ್ಲೆಕ್ಸ್ ಬಳಿ ಪಾದಚಾರಿ ಮಾರ್ಗವನ್ನು ಬೀದಿ ಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಆಯುಕ್ತರು ಪ್ರಮುಖ ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡದೇ ಆ ಎಲ್ಲ ಬೀದಿ ಬದಿ ವ್ಯಾಪಾರಿಗಳಿಗೆ ವಾರ್ಡ್ ರಸ್ತೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದರು.

ಬಿಡಿಎ ಕಾಫ್ಲೆಕ್ಸ್ ಬಳಿ 6ನೇ ಹಂತದಲ್ಲಿ ಹೊಸದಾಗಿ ಹಾಕಿದ್ದ ಡಾಂಬರೀಕರಣ ಪರಿಶೀಲಿಸಿದ ಅವರು, ನ್ಯೂನ್ಯತೆಗಳನ್ನು ಸರಿಪಡಿಸುವಂತೆ ತಿಳಿಸಿದರು. ಡಾಂಬರಿನ ರಸ್ತೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಶೋಲ್ಡರ್ ಡ್ರೈನ್ ನಿರ್ಮಿಸಬೇಕು. ಸರ್ವೀಸ್ ರಸ್ತೆಗಳ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ನಾಮಫಲಕ ಹಾಗೂ ರ‍್ಯಾಂಪ್ ತೆರವಿಗೆ ಕ್ರಮ ವಹಿಸಬೇಕು.

BBMP instruct provide infrastructure for polling booths of Bommanahalli Constituency Bengaluru

ಕೆ-200 ರಾಜಕಾಲುವೆಗೆ ಆರ್.ಸಿ.ಸಿ ವಾಲ್ ಕಾಮಗಾರಿಯನ್ನು ಮುಂದಿನ ವಾರವೇ ಪ್ರಾರಂಭಿಸಿ, ಎಚ್‌ಎಸ್‌ಆರ್ ಬಡಾವಣೆ ಮುಖ್ಯ ರಸ್ತೆಯಲ್ಲಿನ ಅಟಲ್ ಬಿಹಾರಿ ವಾಜಪೇಯಿ ಆಟದ ಮೈದಾನದಲ್ಲಿನ ಬಾಕಿ ಕಾಮಗಾರಿ ಪೂರ್ಣಗೊಳಿಸಿ ಹಾಗೂ ಗುಣಮಟ್ಟ ಕಾಯ್ದುಕೊಳ್ಳಿ ಎಂದು ಹೇಳಿದರು.

ಬೇಗೂರು ಕೆರೆ ಕಾಮಗಾರಿ ಪರಿಶೀಲನೆ:

ಬೇಗೂರು ಕೆರೆಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಪರಿಶೀಲಿಸಿ ಮಳೆಗಾಲ ಪ್ರಾರಂಭವಾಗುವುದಕ್ಕೂ ಮುನ್ನ ಕಾಮಗಾರಿ ಪೂರ್ಣಗೊಳಿಸಬೇಕು. ಬೇಗೂರು ಕೆರೆಯ ಬಳಿ ರಸ್ತೆ ನಿರ್ಮಾಣದ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಇಂಟರ್ ಲಾಕಿಂಗ್ ಫೇವರ್ಸ್ ಗಳನ್ನು ಸರಿಪಡಿಸಲು ಸೂಚಿಸಿದರು.

ಪರಿಶೀಲನೆಯ ವೇಳೆ ವಲಯ ಆಯುಕ್ತ ಡಾ. ಹರೀಶ್ ಕುಮಾರ್, ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ವಲಯ ಜಂಟಿ ಆಯುಕ್ತ ಕೃಷ್ಣಮೂರ್ತಿ, ಅಪರ ಜಿಲ್ಲಾ ಚುನಾವಣಾ ಅಧಿಕಾರಿಯಾದ ಡಾ. ಜಗದೀಶ್ ನಾಯ್ಕ್(ದಕ್ಷಿಣ), ವಲಯ ಮುಖ್ಯ ಅಭಿಯಂತರರಾದ ಶಶಿಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+