ಬೆಂಗಳೂರು ಮಳೆ ಹಾನಿ ದೂರುಗಳಿಗೆ ತ್ವರಿತ ಸ್ಪಂದನೆಗೆ ಬಿಬಿಎಂಪಿ ಸೂಚನೆ
ಬೆಂಗಳೂರು, ಮೇ 22: ಬೆಂಗಳೂರು ನಗರದಲ್ಲಿ ಸುರಿದ ಮಳೆ ಭಾರಿ ಆವಾಂತರ ಸೃಷ್ಟಿಸಿದೆ. ಎರಡು ಸಾವುಗಳ ಸಹ ಸಂಭವಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಕೆಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಮೂರು ನಾಲ್ಕು ದಿನ ಬೆಂಗಳೂರು ನಗರ ಮಳೆ ಬರಲಿದೆ. ಇನ್ನೊಂದು ವಾರದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪಾಲಿಕೆ ಕೇಂದ್ರ ಕಚೇರಿಯ ಅನೆಕ್ಸ್-3 ಕಟ್ಟಡದ 6ನೇ ಮಹಡಿಯಲ್ಲಿರುವ ಕೊಮ್ಯಾಂಡ್ ಕಂಟ್ರೋಲ್ ಸೆಂಟರ್ (BBMP Control Room) ಸೋಮವಾರ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ನಿರ್ವಹಣೆ ಕುರಿತು ಸಿಬ್ಬಂದಿ ಬಳಿ ಮಾಹಿತಿ ಪಡೆದರು.

ಅಷ್ಟೇ ಅಲ್ಲದೇ ಮಳೆ ಹಾನಿ ಕುರಿತು ಯಾವುದೇ ದೂರುಗಳ ಮಾಹಿತಿ ಬಂದರೂ ಕೂಡಲೇ ಪರಿಶೀಲಿಸಿ ತ್ವರಿತಗತಿಯಲ್ಲಿ ಪರಿಹರಿಸಲು ಅವರು ಅಲ್ಲಿದ್ದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ತಾವೇ ಖುದ್ದು ಸಹಾಯ ತಂತ್ರಾಂಶದ ಮುಖಾಂತರ ಬಂದಿರುವ ವಲಯವಾರು ಮಳೆಹಾನಿ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಿದರು. ಈ ಪೈಕಿ ಸಹಾಯ ತಂತ್ರಾಂಶದಲ್ಲಿ ಸುಮಾರು 70 ದೂರುಗಳು ಬಂದಿದ್ದು, ಮೂರು ದಿನಗಳೊಳಗಾಗಿ ದೂರುಗಳಿಗೆ ಪರಿಹಾರ ಕಲ್ಪಿಸುವಂತೆ ಹೇಳಿದರು.
ಬಿಬಿಎಂಪಿ ಸೂಚನೆ ಉಲ್ಲಂಘಿಸಿದ್ದೇ ಆದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ವಹಿಸುವುದಾಗಿ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದರು.
ಮಳೆಗಾಲ ಹತ್ತಿರವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರು, ವಿಪತ್ತು ನಿರ್ವಹಣೆಗಾಗಿ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ತಕ್ಷಣವೇ ನೇಮಿಸಲು ಸೂಚಿಸಿದರು. ಮಳೆ ಹಾನಿ ಸಂಬಂಧ ದೂರಿನ ಮಾಹಿತಿ ಹಾಗೂ ತೆಗೆದುಕೊಂಡಿರುವ ಮಾಹಿತಿಯನ್ನು ಅಧಿಕಾರಗಳು ನಮ್ಮ ಗಮನಕ್ಕೆ ತರಬೇಕು ಎಂದರು.

ಅಂಡರ್ಪಾಸ್ಗಳ ಸರ್ವೇ ಆರಂಭ
ಭಾನುವಾರ ಸುರಿದ ಮಳೆಗೆ ಕೆ.ಆರ್.ವೃತ್ತದಲ್ಲಿ ಕಾರು ಮುಳುಗಿ ಯುವತಿ ಮೃತಪಟ್ಟರೆ, ಬ್ಯಾಟರಾಯಪುರದಲ್ಲಿ ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಈ ಸಾವಿನ ಬಳಿಕ ಎಚ್ಚೆತ್ತುಕೊಂಡ ಬಿಬಿಎಂಪಿ ನಗರದಲ್ಲಿನ 18 ಅಂಡರ್ಪಾಸ್ಗಳ ಸರ್ವೇ ಕಾರ್ಯ ಆರಂಭಿಸಿದೆ. ಯಾವುದು ಸಂಚಾರಕ್ಕೆ ಸೂಕ್ತ, ಯಾವೆಲ್ಲ ಕ್ರಮ ಕೈಗೊಳ್ಳಬಹುದು ಎಂದು ಚರ್ಚಿಸಿತ್ತುದೆ.
ನಿಯಂತ್ರಣಾ ಕೊಠಿಡಿಗೆ ಬಿಬಿಎಂಪಿ ಮುಖ್ಯ ಆಯುಕ್ತರು ಭೇಟಿ ನೀಡಿದ ವೇಳೆ ಮಾನ್ಯ ವಿಶೇಷ ಆಯುಕ್ತರು (ಮಾಹಿತಿ ತಂತ್ರಜ್ಞಾನ) ಉಜ್ವಲ್ ಕುಮಾರ್ ಗೋಷ್ ಹಾಗೂ ಬಿಬಿಎಂಪಿ ಉಪ ಆಯುಕ್ತರು ( ಅಡಳಿತ) ಮಂಜುನಾಥ ಸ್ವಾಮಿ.ಬಿ.ಎಸ್ ಇನ್ನಿತರರು ಉಪಸ್ಥಿತರಿದ್ದರು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications