ಸಾಲು-ಸಾಲು ಹಬ್ಬಗಳು; ಆಚರಣೆಗೆ ಬಿಬಿಎಂಪಿ ಮಾರ್ಗಸೂಚಿ
ಬೆಂಗಳೂರು, ಜುಲೈ 28: ಶ್ರಾವಣ ಮಾಸ ಆರಂಭವಾಗಿದ್ದು ಸಾಲು-ಸಾಲು ಹಬ್ಬಗಳು ಎದುರಿಗೆ ಬಂದಿದೆ. ಬೆಂಗಳೂರು ನಗರದ ಜನರು ಖರೀದಿ ಮತ್ತು ಹಬ್ಬಗಳ ಆಚರಣೆಯಲ್ಲಿ ಬ್ಯುಸಿಯಾಗಲಿದ್ದಾರೆ. ಹಬ್ಬಗಳ ಆಚರಣೆಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.
Recommended Video
ಕೊರೊನಾ ವೈರಸ್ ಸೋಂಕಿನ ಭೀತಿಯಲ್ಲಿಯೇ ಬೆಂಗಳೂರು ನಗರದಲ್ಲಿ ಹಬ್ಬವನ್ನು ಆಚರಣೆ ಮಾಡಬೇಕಿದೆ. ನಗರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 46,923ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇದುವರೆಗೂ 917 ಜನರು ಮೃತಪಟ್ಟಿದ್ದಾರೆ.
ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಹಬ್ಬಗಳ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಮನೆಯಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಣೆ ಮಾಡಿ. ಮನೆಗೆ ಯಾರೂ ಭೇಟಿ ನೀಡದಂತೆ ನೋಡಿಕೊಳ್ಳಿ, ದೇವಾಲಯ ಮುಂತಾದ ಪ್ರಾರ್ಥನಾ ಮಂದಿರಕ್ಕೆ ಹೋಗುವುದುನ್ನು ಆದಷ್ಟು ಕಡಿಮೆ ಮಾಡಿ ಎಂದು ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಜನರು ಎಚ್ಚರ ವಹಿಸಬೇಕು. ಹಬ್ಬಗಳಿಗೆ ಖರೀದಿ, ಹಬ್ಬಗಳ ಆಚರಣೆ ಸಂದರ್ಭದಲ್ಲಿ ಬಿಬಿಎಂಪಿ ನೀಡುವ ಸೂಚನೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಾರ್ಥನಾ ಮಂದಿರಗಳಿಗೆ ಭೇಟಿ ಬೇಡ
ದೇವಾಲಯ, ಚರ್ಚ್, ಮಸೀದಿ ಮುಂತಾದ ಪ್ರಾರ್ಥನಾ ಮಂದಿರಗಳಿಗೆ ಭೇಟಿ ನೀಡಬೇಡಿ. ಅವುಗಳು ಬಾಗಿಲು ತೆರೆದಿವೆ ಎಂದು ಘೋಷಣೆ ಮಾಡಿದರೂ ಹಬ್ಬದ ದಿನಗಳ ಸಂದರ್ಭದಲ್ಲಿ ಹೋಗುವುದನ್ನು ಆದಷ್ಟು ಕಡಿಮೆ ಮಾಡಿ ಎಂದು ಬಿಬಿಎಂಪಿ ಆಯುಕ್ತರು ಮನವಿ ಮಾಡಿದ್ದಾರೆ.

ಮನೆಗಳಿಗೆ ಭೇಟಿ ಬೇಡ
ಹಬ್ಬಗಳನ್ನು ಮನೆಯಲ್ಲಿಯೇ ಸರಳವಾಗಿ ಆಚರಣೆ ಮಾಡಿ. ಸ್ನೇಹಿತರು, ಸಂಬಂಧಿಕರು, ಅಕ್ಕ-ಪಕ್ಕದ ಮನೆಗಳಿಗೆ ಹೋಗಬೇಡಿ. ನಿಮ್ಮ ಮನೆಗು ಅತಿಥಿಗಳು ಬರದಂತೆ ನೋಡಿಕೊಳ್ಳಿ. ಎಲ್ಲರ ಸುರಕ್ಷತೆ ದೃಷ್ಟಿಯಿಂದ ಇದು ಅನಿವಾರ್ಯವಾಗಿದೆ ಎಂದು ಬಿಬಿಎಂಪಿ ಆಯುಕ್ತರು ಹೇಳಿದ್ದಾರೆ.

ಗಣೇಶಮೂರ್ತಿ ತರಬೇಡಿ
ಗೌರಿ-ಗಣೇಶ ಹಬ್ಬಕ್ಕೆ ಮೂರ್ತಿಗಳನ್ನು ಹೊರಗಡೆಯಿಂದ ತರಬೇಡಿ. ಸಾರ್ವಜನಿಕವಾಗಿ ನಡೆಯುವ ವಿಸರ್ಜನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಡಿ. ಹೊರಗಿನಿಂದ ತರುವ ಮೂರ್ತಿಗಳು ಇಂತಹ ಪರಿಸ್ಥಿತಿಯಲ್ಲಿ ಹೆಚ್ಚು ಅಪಾಯಕಾರಿ ಎಂದು ಬಿಬಿಎಂಪಿ ಹೇಳಿದೆ.

ಸಾಮೂಹಿಕ ಪ್ರಾರ್ಥನೆ ಬೇಡ
ಬಕ್ರೀದ್, ಕೃಷ್ಣಾಷ್ಟಮಿ ಹಬ್ಬಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳನ್ನು ಮಾಡಬೇಡಿ. ಹೆಚ್ಚು ಜನರು ಸೇರುವುದರಿಂದ ಪ್ರಾರ್ಥನಾ ಮಂದಿರಗಳಿಗೆ ಭೇಟಿ ನೀಡಬೇಡಿ ಎಂದು ಸಲಹೆ ನೀಡಲಾಗಿದೆ. ರಕ್ಷಾಬಂಧನದ ದಿನ ಅಣ್ಣ ಅಥವ ತಂಗಿಯ ಮನೆಗೆ ಭೇಟಿ ನೀಡುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications