Darshan Case: ಪಟ್ಟಣಗೆರೆ ಶೆಡ್ ಮಾಲೀಕರಿಗೆ ಸಂಕಷ್ಟ: ಬಿಬಿಎಂಪಿಯಿಂದ ನೋಟಿಸ್, ಕಾರಣವೇನು?
ಬೆಂಗಳೂರು, ಜೂನ್ 20: ರಾಜ್ಯವಾಪಿ ಖಂಡನೆಗೆ ವ್ಯಕ್ತವಾದ ರೇಣುಕಾಸ್ವಾಮಿ ಕೊಲೆಗೆ ಸಂಬಂಧಿಸಿದಂತೆ ನಟ ದರ್ಶನ್ ಬಂಧನವಾಗಿ ಇಂದು ಗುರುವಾರ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಈ ಹತ್ಯೆ ನಡೆಸಿದ ಸ್ಥಳವಾದ ಆರ್ಆರ್ನಗರದ ಪಟ್ಟಣಗೆರೆ ಶೆಡ್ ಮಾಲೀಕರೀಗೆ ಇದೀಗ ಸಂಕಷ್ಟ ಎದುರಾಗಿದೆ.
ಸದ್ಯ ದರ್ಶನ್ ಅನ್ನು ಶುಕ್ರವಾರ ಮೂರನೇ ಭಾರಿಗೆ ಪೊಲೀಸ್ ಕಸ್ಟಡಿಗೆ ಪಡೆಯುವ ಕಾರ್ಯ ನಡೆದಿದೆ. ಹತ್ತು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಇಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಕೊಲೆ ಆರೋಪಿ ದರ್ಶನ್ ಸೇರಿ ಕೆಲವರನ್ನು ಮತ್ತೆ ಎರಡು ದಿನ ಕಸ್ಟಡಿಗೆ ಪಡೆಯಲಾಗಿದೆ.

ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟಿಸ್
ಈ ದರ್ಶನ್ ಮತ್ತವನ ಗ್ಯಾಂಗ್ ಕೈಯಿಂದ ರೇಣುಕಾಸ್ವಾಮಿಯು ಆರ್ಆರ್ ನಗರದ ಪಟ್ಟಣೆಗೆರೆಯ ಶೆಡ್ನಲ್ಲಿ ಹಲ್ಲೆಗೊಳಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಶೆಡ್ ಮಾಲೀಕರು ಆಸ್ತಿ ತೆರಿಗೆಯನ್ನು ಬಿಬಿಎಂಪಿಗೆ ಪಾವತಿಸದ ಕಾರಣ ಬಿಬಿಎಂಪಿ ಶೆಡ್ ಮಾಲೀಕ ಕೆ.ಜಯಣ್ಣಗೆ ನೋಟಿಸ್ ನೀಡಿದೆ.
ಕಂತು ಪಾವತಿಸದ ವಾಹನಗಳನ್ನು ತಂದು ನಿಲ್ಲಿಸುವ ಶೆಡ್ ಇದಾಗಿತ್ತು. ಈ ಶೇಡ್ ಜಯಣ್ಣ ಎಂಬುವವರಿಗೆ ಸೇರಿದ್ದು, ಅವರ 2008 ರಿಂದ ಶೇಡ್ ಸ್ವತ್ತಿಗೆ ಆಸ್ತಿ ತೆರಿಗೆ ಪಾವತಿಸಿಲ್ಲ. ಹೀಗಾಗಿ ರಾಜರಾಜೇಶ್ವರಿ ನಗರ ವಲಯದ ಸಹಾಯಕ ಕಂದಾಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಎರಡು ವಾರಗಳಲ್ಲಿ ದಾಖಲೆ ನೀಡಲು ಸೂಚನೆ
ಮುಂದಿನ 15 ದಿನಗಳ ಒಳಗಾಗಿ ಸ್ವತ್ತಿನ ದಾಖಲೆಗಳನ್ನು ಒದಗಿಸುವಂತೆ ಖಡಕ್ ಸೂಚನೆ ನೀಡಲಾಗಿದೆ. ದರ್ಶನ್ ಪ್ರಕರಣದಿಂದ ಈ ಸ್ವತ್ತಿನ ಮಾಲೀಕರಿಗೂ ಸಂಕಷ್ಟ ಎದುರಾಗಿದೆ. ಆಸ್ತಿ, ಬಾಡಿಗೆ, ವಿಸ್ತೀರ್ಣ, ಕೊನೆ ಬಾರಿಗೆ ತೆರಿಗೆ ಕಟ್ಟಿದ್ದರೆ ಅದರ ರಶೀದಿ ಸೇರಿದಂತೆ ಹಲವು ದಾಖಲೆಗಳನ್ನು ಬಿಬಿಎಂಪಿ ಕೇಳಿದೆ.
ನಾನು ಈ ಶೆಡ್ ಅನ್ನು ನನ್ನ ಸಹೋದರಿಯ ಮಗ ಕಿಶೋರ್ಗೆ ಬಾಡಿಗೆ ನೀಡಿದ್ದೆ. ಇಲ್ಲಿ ಇಂತಹ ಘಟನೆಗಳು ನಡೆದಿರುವುದು ನನಗೆ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿದ ಬಳಿಕವೇ ಗೊತ್ತಾಗಿದೆ. ಪೊಲೀಸರು ಕರೆದರೆ ನಾನು ವಿಚಾರಣೆಗೆ ಹಾಜರಗುತ್ತೇನೆ ಎಂದು ಹತ್ಯೆ ಕೃತ್ಯ ಬಳಿಕ ಜಯಣ್ಣ ಮಾತನಾಡಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications