Fixmystreet ಆಪ್ ಆರಂಭಿಸಿದ ಬಿಬಿಎಂಪಿ, ಏನಿದರ ವಿಶೇಷತೆ?
ಬೆಂಗಳೂರು, ಜನವರಿ 10: ಬೆಂಗಳೂರು ನಗರದಲ್ಲಿನ ಗುಂಡಿಗಳಿಗೆ ಸಂಬಂಧಿಸಿದ ದೂರುಗಳನ್ನು ನೀಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ಸಲುವಾಗಿ ಬಿಬಿಎಂಪಿ ಸೋಮವಾರ 'ಫಿಕ್ಸ್ಮೈಸ್ಟ್ರೀಟ್' ಮೊಬೈಲ್ ಅಪ್ಲಿಕೇಶನ್ ಅನ್ನು ಆರಂಭ ಮಾಡಿದೆ.
ಆ್ಯಂಡ್ರಾಯ್ಡ್ ಫೋನ್ಗಳಲ್ಲಿ ಮಾತ್ರ ಲಭ್ಯವಿರುವ ಆ್ಯಪ್ನಲ್ಲಿ ನಿಮ್ಮ ಸ್ಥಳೀಯ ಗುಂಡಿಬಿದ್ದ ರಸ್ತೆಯ ಚಿತ್ರಗಳನ್ನು ಮತ್ತು ಗುಂಡಿಯ ಸ್ಥಳವನ್ನು ಹಂಚಿಕೊಳ್ಳಬಹುದಾಗಿದೆ. ಗುಂಡಿಗಳನ್ನು ಮುಚ್ಚುವ ಚಟುವಟಿಕೆಯನ್ನು ಪರಿಶೀಲಿಸಲು ಎಂಜಿನಿಯರ್ಗಳು ಈ ಅಪ್ಲಿಕೇಶನ್ ಅನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ಆಪ್ ಅನ್ನು ಪರಿಶೀಲಿಸಿ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಗುಂಡಿಗಳನ್ನು ಮುಚ್ಚುವಂತೆ ಎಂಜಿನಿಯರ್ಗಳಿಗೆ ಸೂಚನೆ ನೀಡಿದ್ದಾರೆ.

ರಸ್ತೆಗಳ ನಿರ್ವಹಣೆಗೆ ಬೆಂಗಳೂರು ನಾಗರಿಕ ಸಂಸ್ಥೆಯಾದ ಬಿಬಿಎಂಪಿ ಹೆಚ್ಚು ಹಣ ಖರ್ಚು ಮಾಡುತ್ತದೆ. ಜೋಡಿ ರಸ್ತೆಗಳ ವಾರ್ಷಿಕ ನಿರ್ವಹಣೆಯನ್ನು ಪರಿಚಯಿಸುವುದರ ಜೊತೆಗೆ ಬಿಬಿಎಂಪಿಯು ನಗರದ ಹೊರವಲಯದಲ್ಲಿ ತನ್ನದೇ ಆದ ಬ್ಯಾಚ್ ಮಿಶ್ರಣ ಘಟಕವನ್ನು ಹೊಂದಿದೆ. ಅಲ್ಲದೆ ಸ್ವಯಂಚಾಲಿತ ಗುಂಡಿಗಳನ್ನು ತುಂಬುವ ಯಂತ್ರದ ಮೂಲಕ ಪ್ರಮುಖ ರಸ್ತೆಗಳನ್ನು ಮುಚ್ಚುವ ಏಜೆನ್ಸಿಯನ್ನು ಸಹ ನೇಮಿಸಿಕೊಂಡಿದೆ.
ಜನವರಿ 1ರಿಂದಲೇ ಈ ಆಪ್ಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಲಾಗಿತ್ತು. ಆದರೆ ತಾಂತ್ರಿಕ ಸಮಸ್ಯೆಗಳನ್ನು ಪರಿಹಾರ ಮಾಡಿ ಈಗ ಮತ್ತೆ ಜನರಿಗೆ ಅವಕಾಶ ನೀಡಲಾಗಿದೆ. ಜನವರಿ 1, 2023 ರಿಂದ ನಾವು ಈ ಅಪ್ಲಿಕೇಶನ್ ಅನ್ನು ನವೀಕರಿಸುತ್ತೇವೆ. ನಂತರ ಜನರು ಫಿಕ್ಸ್ ಮೈ ಸ್ಟ್ರೀಟ್ ಅಪ್ಲಿಕೇಶನ್ನಲ್ಲಿ ತಮ್ಮ ರಸ್ತೆ ಗುಂಡಿಗಳ ಬಗ್ಗೆ ನೇರವಾಗಿ ದೂರು ನೀಡಬಹುದು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಈ ಹಿಂದೆ ತಿಳಿಸಿದ್ದರು.
ಸಾರ್ವಜನಿಕರಿಗಾಗಿ 2017 ರಲ್ಲಿ ಈ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಾಗಿತ್ತು. ಒಮ್ಮೆ ಜನರು ಅಪ್ಲಿಕೇಶನ್ನಲ್ಲಿ ಗುಂಡಿಗಳ ಬಗ್ಗೆ ದೂರನ್ನು ಕಳುಹಿಸಲು ಪ್ರಾರಂಭಿಸಿದರೆ, ಅದನ್ನು ಆ ವ್ಯಾಪ್ತಿಯ ಸಹಾಯಕ ಎಂಜಿನಿಯರ್ ಪ್ರಮಾಣೀಕರಿಸಬೇಕು. ಒಮ್ಮೆ ಪ್ರಮಾಣೀಕರಿಸಿದ ನಂತರ, ಕೆಲಸದ ಆದೇಶವು ಸ್ವಯಂಚಾಲಿತವಾಗಿ ನಡೆಯುತ್ತದೆ. ಕೆಲವು ತಾಂತ್ರಿಕ ದೋಷಗಳನ್ನು ಅಧಿಕಾರಿಗಳು ಸರಿಪಡಿಸುತ್ತಿದ್ದಾರೆ ಎಂದು ಆಯುಕ್ತರು ತಿಳಿಸಿದ್ದರು.

ಐದು ವರ್ಷಗಳ ಹಿಂದೆ ಪ್ರಾರಂಭಿಸಲಾದ ಫಿಕ್ಸ್ ಮೈ ಸ್ಟ್ರೀಟ್ ಮೊಬೈಲ್ ಅಪ್ಲೀಕೇಶನ್ ಅನ್ನು ತಾಂತ್ರಿಕ ದೋಷ ಕಾಣಿಸಿಕೊಂಡ ನಂತರ 2019 ರಲ್ಲಿ ಸ್ಥಗಿತ ಮಾಡಲಾಗಿತ್ತು. ಅಂದಿನಿಂದ, ಇದನ್ನು ಬಿಬಿಎಂಪಿ ಅಧಿಕಾರಿಗಳು ಮಾತ್ರ ಬಳಸುತ್ತಿದ್ದರು. ಈಗ ಎಲ್ಲಾ ತಂತ್ರಿಕ ಅಡಚಣೆ ಸರಿಪಡಿಸಿ ಸಾರ್ವಜನಿಕರ ಮುಂದೆ ಇಡಲಾಗಿದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
2026ರ 'ಹೊಸ ಆಧಾರ್ ಆ್ಯಪ್'ನಲ್ಲಿರುವ ಟಾಪ್ 8 ಫೀಚರ್ಸ್ ಏನು ಗೊತ್ತಾ? ಇಲ್ಲಿದೆ ಮಾಹಿತಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ









Click it and Unblock the Notifications