Fixmystreet ಆಪ್ ಆರಂಭಿಸಿದ ಬಿಬಿಎಂಪಿ, ಏನಿದರ ವಿಶೇಷತೆ?
ಬೆಂಗಳೂರು, ಜನವರಿ 10: ಬೆಂಗಳೂರು ನಗರದಲ್ಲಿನ ಗುಂಡಿಗಳಿಗೆ ಸಂಬಂಧಿಸಿದ ದೂರುಗಳನ್ನು ನೀಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ಸಲುವಾಗಿ ಬಿಬಿಎಂಪಿ ಸೋಮವಾರ 'ಫಿಕ್ಸ್ಮೈಸ್ಟ್ರೀಟ್' ಮೊಬೈಲ್ ಅಪ್ಲಿಕೇಶನ್ ಅನ್ನು ಆರಂಭ ಮಾಡಿದೆ.
ಆ್ಯಂಡ್ರಾಯ್ಡ್ ಫೋನ್ಗಳಲ್ಲಿ ಮಾತ್ರ ಲಭ್ಯವಿರುವ ಆ್ಯಪ್ನಲ್ಲಿ ನಿಮ್ಮ ಸ್ಥಳೀಯ ಗುಂಡಿಬಿದ್ದ ರಸ್ತೆಯ ಚಿತ್ರಗಳನ್ನು ಮತ್ತು ಗುಂಡಿಯ ಸ್ಥಳವನ್ನು ಹಂಚಿಕೊಳ್ಳಬಹುದಾಗಿದೆ. ಗುಂಡಿಗಳನ್ನು ಮುಚ್ಚುವ ಚಟುವಟಿಕೆಯನ್ನು ಪರಿಶೀಲಿಸಲು ಎಂಜಿನಿಯರ್ಗಳು ಈ ಅಪ್ಲಿಕೇಶನ್ ಅನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ಆಪ್ ಅನ್ನು ಪರಿಶೀಲಿಸಿ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಗುಂಡಿಗಳನ್ನು ಮುಚ್ಚುವಂತೆ ಎಂಜಿನಿಯರ್ಗಳಿಗೆ ಸೂಚನೆ ನೀಡಿದ್ದಾರೆ.

ರಸ್ತೆಗಳ ನಿರ್ವಹಣೆಗೆ ಬೆಂಗಳೂರು ನಾಗರಿಕ ಸಂಸ್ಥೆಯಾದ ಬಿಬಿಎಂಪಿ ಹೆಚ್ಚು ಹಣ ಖರ್ಚು ಮಾಡುತ್ತದೆ. ಜೋಡಿ ರಸ್ತೆಗಳ ವಾರ್ಷಿಕ ನಿರ್ವಹಣೆಯನ್ನು ಪರಿಚಯಿಸುವುದರ ಜೊತೆಗೆ ಬಿಬಿಎಂಪಿಯು ನಗರದ ಹೊರವಲಯದಲ್ಲಿ ತನ್ನದೇ ಆದ ಬ್ಯಾಚ್ ಮಿಶ್ರಣ ಘಟಕವನ್ನು ಹೊಂದಿದೆ. ಅಲ್ಲದೆ ಸ್ವಯಂಚಾಲಿತ ಗುಂಡಿಗಳನ್ನು ತುಂಬುವ ಯಂತ್ರದ ಮೂಲಕ ಪ್ರಮುಖ ರಸ್ತೆಗಳನ್ನು ಮುಚ್ಚುವ ಏಜೆನ್ಸಿಯನ್ನು ಸಹ ನೇಮಿಸಿಕೊಂಡಿದೆ.
ಜನವರಿ 1ರಿಂದಲೇ ಈ ಆಪ್ಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಲಾಗಿತ್ತು. ಆದರೆ ತಾಂತ್ರಿಕ ಸಮಸ್ಯೆಗಳನ್ನು ಪರಿಹಾರ ಮಾಡಿ ಈಗ ಮತ್ತೆ ಜನರಿಗೆ ಅವಕಾಶ ನೀಡಲಾಗಿದೆ. ಜನವರಿ 1, 2023 ರಿಂದ ನಾವು ಈ ಅಪ್ಲಿಕೇಶನ್ ಅನ್ನು ನವೀಕರಿಸುತ್ತೇವೆ. ನಂತರ ಜನರು ಫಿಕ್ಸ್ ಮೈ ಸ್ಟ್ರೀಟ್ ಅಪ್ಲಿಕೇಶನ್ನಲ್ಲಿ ತಮ್ಮ ರಸ್ತೆ ಗುಂಡಿಗಳ ಬಗ್ಗೆ ನೇರವಾಗಿ ದೂರು ನೀಡಬಹುದು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಈ ಹಿಂದೆ ತಿಳಿಸಿದ್ದರು.
ಸಾರ್ವಜನಿಕರಿಗಾಗಿ 2017 ರಲ್ಲಿ ಈ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಾಗಿತ್ತು. ಒಮ್ಮೆ ಜನರು ಅಪ್ಲಿಕೇಶನ್ನಲ್ಲಿ ಗುಂಡಿಗಳ ಬಗ್ಗೆ ದೂರನ್ನು ಕಳುಹಿಸಲು ಪ್ರಾರಂಭಿಸಿದರೆ, ಅದನ್ನು ಆ ವ್ಯಾಪ್ತಿಯ ಸಹಾಯಕ ಎಂಜಿನಿಯರ್ ಪ್ರಮಾಣೀಕರಿಸಬೇಕು. ಒಮ್ಮೆ ಪ್ರಮಾಣೀಕರಿಸಿದ ನಂತರ, ಕೆಲಸದ ಆದೇಶವು ಸ್ವಯಂಚಾಲಿತವಾಗಿ ನಡೆಯುತ್ತದೆ. ಕೆಲವು ತಾಂತ್ರಿಕ ದೋಷಗಳನ್ನು ಅಧಿಕಾರಿಗಳು ಸರಿಪಡಿಸುತ್ತಿದ್ದಾರೆ ಎಂದು ಆಯುಕ್ತರು ತಿಳಿಸಿದ್ದರು.

ಐದು ವರ್ಷಗಳ ಹಿಂದೆ ಪ್ರಾರಂಭಿಸಲಾದ ಫಿಕ್ಸ್ ಮೈ ಸ್ಟ್ರೀಟ್ ಮೊಬೈಲ್ ಅಪ್ಲೀಕೇಶನ್ ಅನ್ನು ತಾಂತ್ರಿಕ ದೋಷ ಕಾಣಿಸಿಕೊಂಡ ನಂತರ 2019 ರಲ್ಲಿ ಸ್ಥಗಿತ ಮಾಡಲಾಗಿತ್ತು. ಅಂದಿನಿಂದ, ಇದನ್ನು ಬಿಬಿಎಂಪಿ ಅಧಿಕಾರಿಗಳು ಮಾತ್ರ ಬಳಸುತ್ತಿದ್ದರು. ಈಗ ಎಲ್ಲಾ ತಂತ್ರಿಕ ಅಡಚಣೆ ಸರಿಪಡಿಸಿ ಸಾರ್ವಜನಿಕರ ಮುಂದೆ ಇಡಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications