ಬೆಂಗಳೂರಿಗರೇ 1533 ಒತ್ತಿರಿ: ಹಾವು, ಕೋತಿ, ಪಕ್ಷಿಗಳ ಹಾವಳಿಗೆ ದೂರು ಸಲ್ಲಿಸಿ!
ಬೆಂಗಳೂರು, ಆಗಸ್ಟ್ 9: ಸಿಲಿಕಾನ್ ಸಿಟಿ ಮಂದಿಗೆ ಕೋತಿಗಳು, ಪಕ್ಷಿಗಳು ಮತ್ತು ಹಾವುಗಳು ಸೇರಿದಂತೆ ಕಾಡು ಪ್ರಾಣಿಗಳಿಂದ ಉಂಟಾಗುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದೂರು ನೀಡುವುದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಟೋಲ್ ಫ್ರೀ ಸಂಖ್ಯೆಯನ್ನು ಪ್ರಾರಂಭಿಸಿದೆ.
ನಮ್ಮ ಬೆಂಗಳೂರು ಸಹಾಯ 2.0 ಮೊಬೈಲ್ ಆ್ಯಪ್ನಲ್ಲಿ ಮಂಗಗಳ ಕಾಟ ಅಥವಾ ಹಾವು ಮತ್ತು ಪಕ್ಷಿಗಳ ಬಗ್ಗೆ ನಿವಾಸಿಗಳು ದೂರು ಸಲ್ಲಿಸಬಹುದು ಎಂದು ಬಿಬಿಎಂಪಿ ಅರಣ್ಯ ಉಪ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿಗರು ಇನ್ನು ಮುಂದೆ 1533 ಸಂಖ್ಯೆಗೆ ಕರೆ ಮಾಡುವುದರ ಮೂಲಕ ಅಥವಾ ನಮ್ಮ ಬೆಂಗಳೂರು ಮೊಬೈಲ್ ಅಪ್ಲಿಕೇಶನ್ನಲ್ಲಿ ದೂರುಗಳನ್ನು ನೋಂದಾಯಿಸಬಹುದು. ಈ ಮಧ್ಯೆ ಯಾವುದೇ ಕಾಡು ಪ್ರಾಣಿಗಳಿಗೆ ಹಾನಿ ಮಾಡದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಟೋಲ್ ಫ್ರೀ ಸಂಖ್ಯೆ ಪರಿಚಯಿಸಿದ ಬಿಬಿಎಂಪಿ
ಬಿಡಾಡಿ ಪ್ರಾಣಿಗಳಿಗೆ ಪುನರ್ವಸತಿ ಕಲ್ಪಿಸಲು ಕರ್ನಾಟಕ ಹೈಕೋರ್ಟ್ ರಿಟ್ ಅರ್ಜಿ 5120/2021ರ ನಿರ್ದೇಶನದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಟೋಲ್-ಫ್ರೀ ಸಂಖ್ಯೆ ಮತ್ತು ಅಪ್ಲಿಕೇಶನ್ ಅನ್ನು ಪರಿಚಯಿಸಿದೆ.
"ನ್ಯಾಯಾಲಯದ ನಿರ್ದೇಶನಗಳನ್ನು ಅನುಸರಿಸಿ, ಬಿಬಿಎಂಪಿ ಸಹಾಯವಾಣಿಯನ್ನು ಪ್ರಾರಂಭಿಸಿದೆ. ಜನರು 'ನಮ್ಮ ಬೆಂಗಳೂರು ಮೊಬೈಲ್ ಅಪ್ಲಿಕೇಶನ್ನಲ್ಲಿ ಯಾವುದೇ ಪ್ರಾಣಿಗಳಿಗೆ ಸಂಬಂಧಿಸಿದ ಅನಾಹುತಗಳ ಕುರಿತು ದೂರು ನೀಡಬಹುದು" ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಿಲಿಕಾನ್ ಸಿಟಿಯಲ್ಲಿ ಕೋತಿಗಳ ಹಾವಳಿ ಬಗ್ಗೆ ಉಲ್ಲೇಖ
ಆಹಾರ ಅರಸಿ ಬರುವ ಕೋತಿಗಳ ಗುಂಪುಗಳು ನಗರದ ಹಲವಾರು ಮನೆಗಳ ಮೇಲೆ ದಾಳಿ ಮಾಡುವುದಕ್ಕೆ ರಿಟ್ ಅರ್ಜಿದಾರರು ಒತ್ತಿ ಹೇಳಿದ್ದರು. ನಿವಾಸಿಗಳು ಮತ್ತು ಕಲ್ಯಾಣ ಸಂಘಗಳು ಈ ಹಾವಳಿಯನ್ನು ಎದುರಿಸಲು ನಾಗರಿಕ ಅಧಿಕಾರಿಗಳ ನೆರವು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರ ಬದಲಿಗೆ ಖಾಸಗಿಯಾಗಿ ಕೋತಿಗಳನ್ನು ಸೆರೆ ಹಿಡಿಯುವ ವ್ಯಕ್ತಿಗಳ ಮೊರೆ ಹೋಗುವಂತೆ ಆಗಿದೆ ಎಂದು ಹೇಳಿದ್ದರು.

ಕಾಡುಪ್ರಾಣಿಗಳಿಗೆ ಪುನರ್ ವಸತಿ ಕಲ್ಪಿಸುವುದಕ್ಕೆ ಮನವಿ
ದೆಹಲಿ ಹೈಕೋರ್ಟ್ನ ನಿರ್ದೇಶನಗಳ ಪ್ರಕಾರ, ಕೋತಿಗಳ ಕಾಟದಿಂದ ನಿವಾಸಿಗಳನ್ನು ರಕ್ಷಿಸಲು ಕಾರ್ಯವಿಧಾನವನ್ನು ರೂಪಿಸಬೇಕು. ಕಾನೂನಿನ ಪ್ರಕಾರ ಮಂಗಗಳನ್ನು ನೋಡಿಕೊಳ್ಳಲು ನಾಗರಿಕ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ರಿಚ್ ಅರ್ಜಿದಾರರು ತಾವು ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಿದ್ದರು.

ಬಿಬಿಎಂಪಿಗೆ ಸೂಚನೆ ನೀಡಿದ್ದ ಕರ್ನಾಟಕ ಹೈಕೋರ್ಟ್
ಬೆಂಗಳೂರಿನ ನಿವಾಸಿಗಳನ್ನು ಮಂಗಗಳ ಹಾವಳಿಯಿಂದ ರಕ್ಷಿಸಲು ಮತ್ತು ಕೋತಿಗಳಿಗೆ ಆಶ್ರಯವನ್ನು ಒದಗಿಸುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿತ್ತು. ಇದರ ಜೊತೆಗೆ ನೈಸರ್ಗಿಕ ಆವಾಸಸ್ಥಾನನಗಳಿಗೆ ಯಾವುದೇ ರೀತಿ ಹಾನಿಯಾಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ, ಅರಣ್ಯ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಕೋರ್ಟ್ ನಿರ್ದೇಶನ ನೀಡಿತ್ತು.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications