Get Updates
Get notified of breaking news, exclusive insights, and must-see stories!

ಬೆಂಗಳೂರಿನ ರಸ್ತೆಗಳಲ್ಲಿ ಬಿಬಿಎಂಪಿಯಿಂದ ಬೃಹತ್‌ ಕಾರ್ಯಾಚರಣೆ, ಉದ್ದೇಶವೇನು

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಬೃಹತ್‌ ಬೆಂಗಳೂರು ಮಹಾನಗರ (ಬಿಬಿಎಂಪಿ) ಪಾಲಿಕೆ ಮುಂದಾಗಿದ್ದು, ಬೃಹತ್‌ ಕಾರ್ಯಾಚರಣೆ ನಡೆಸುತ್ತಿದೆ. ಬೆಂಗಳೂರಿನ ರಸ್ತೆಗಳಲ್ಲಿ ಜನ ಓಡಾಡುವುದಕ್ಕೆ ಕಷ್ಟವಾಗುತ್ತಿದೆ. ಕೆಲವರು ಉದ್ದೇಶಪೂರ್ವಕವಾಗಿ ಜನ ಓಡಾಡುವ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಇದೀಗ ಬೆಂಗಳೂರಿನಾದ್ಯಂತ ಈ ಸಮಸ್ಯೆಯನ್ನು ಪರಿಹರಿಸುವುದಕ್ಕೆ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದು ಫೀಲ್ಡ್‌ಗೆ ಇಳಿದಿದ್ದಾರೆ. ಬೆಂಗಳೂರಿನಲ್ಲಿ ಜನ ಆರಾಮಾಗಿ ನಡೆದಾಡುವಂತೆ ಅನುಕೂಲ ಮಾಡಿಕೊಡುವುದಕ್ಕೆ ಬಿಬಿಎಂಪಿ ಕಾರ್ಯಾಚರಣೆ ಶುರು ಮಾಡಿದೆ.

ಪಾದಚಾರಿ ಮಾರ್ಗದಲ್ಲಿ ಜನ ನಡೆದಾಡಲು ಜಾಗ ಇದ್ದರೂ ಕೆಲವರು ಒತ್ತುವರಿ ಮಾಡಿಕೊಂಡು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಪಾದಚಾರಿ ಮಾರ್ಗದಲ್ಲಿ ಜಾಗ ಇಲ್ಲದೆ ಜನ ಬೀದಿಗೆ ಬರುತ್ತಿದ್ದು, ಬೀದಿಯಲ್ಲಿ ವಾಹನ ಸವಾರರು ಹಾಗೂ ನಡೆದುಕೊಂಡು ಹೋಗುವವರು ಇಬ್ಬರಿಗೂ ಸಮಸ್ಯೆ ಆಗುತ್ತಿದೆ. ಹೀಗಾಗಿ, ಪಾದಚಾರಿ ಮಾರ್ಗದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಆದ್ಯತೆ ನೀಡಲಾಗುತ್ತಿದೆ. ಇದರ ಭಾಗವಾಗಿ ಬಿಬಿಎಂಪಿಯು ಬೊಮ್ಮನಹಳ್ಳಿ ಹಾಗೂ ದಕ್ಷಿಣ ವಲಯಗಳಲ್ಲಿ ಬೃಹತ್‌ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಮಾಡಿದೆ.

BBMP launches operation to crack down on pedestrian encroachment on Bengaluru roads

ಶುಕ್ರವಾರ (ಡಿಸೆಂಬರ್‌ 13ಕ್ಕೆ) ಬೆಂಗಳೂರಿನ ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯಗಳಲ್ಲಿ ಬೃಹತ್‌ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಬಿಬಿಎಂಪಿಯ ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆಸಿರುವುದಾಗಿ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಎರಡು ಪ್ರಮುಖ ವಲಯಗಳ ವಿವಿಧ ಸ್ಥಳಗಳಲ್ಲಿ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ಸಾರ್ವಜನಿಕರು ನಡೆದಾಡುವುದಕ್ಕೆ ಸಮಸ್ಯೆ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವುದಾಗಿ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಮುಂದಿನ ದಿನಗಳಲ್ಲಿ ಪಾದಚಾರಿ ಮಾರ್ಗದಲ್ಲಿರುವ ಅಂಗಡಿಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಅಕ್ರಮವಾಗಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪಾಲಿಕೆಯಿಂದ ಮುಂದುವರಿಸುವುದಾಗಿ ಹೇಳಲಾಗಿದೆ. ಪಾಲಿಕೆ ದಕ್ಷಿಣ ವಲಯದ ಚೋಳರಪಾಳ್ಯ ವ್ಯಾಪ್ತಿಯಲ್ಲಿನ ಮಾಗಡಿ ಮುಖ್ಯರಸ್ತೆ ಹಾಗೂ ಬೊಮ್ಮನಹಳ್ಳಿ ವಲಯದ ಜಂಬೂ ಸವಾರಿ ದಿಣ್ಣೆ ಮುಖ್ಯರಸ್ತೆಯಲ್ಲಿದ್ದ ಪಾದಚಾರಿ ಮಾರ್ಗ ಒತ್ತುವರಿಗಳನ್ನು ತೆರವು ಮಾಡಲಾಗಿದೆ.

BBMP launches operation to crack down on pedestrian encroachment on Bengaluru roads

ಈ ಸಂದರ್ಭದಲ್ಲಿ ಈ ಪಾದಚಾರಿ ಮಾರ್ಗಗಳಲ್ಲಿ ಹಾಕಲಾಗಿದ್ದ ಜಾಹೀರಾತು ಫಲಕಗಳು, ಬೆಂಚುಗಳು, ಪೆಟ್ಟಿಗೆಗಳನ್ನು ತೆರವುಗೊಳಿಸಿ ಪಾದಚಾರಿಗಳು ನಡೆದಾಡುವುದಕ್ಕೆ ದಾರಿ ಮಾಡಲಾಗಿದೆ. ತೆರವುಗೊಳಿಸಿದ ವಸ್ತುಗಳನ್ನು ಪಾಲಿಕೆ ವಶಕ್ಕೆ ಪಡೆದು ಮತ್ತೆ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡದಂತೆ ಕಟ್ಟೆಚ್ಚರಿಕೆಗಳನ್ನು ನೀಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೊಮ್ಮನಹಳ್ಳಿ ವಲಯದಲ್ಲಿ ಹೂಳು ತೆರವು: ಇನ್ನು ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ವಸಂತಪುರ ವಾರ್ಡ್ ವ್ಯಾಪ್ತಿಯಲ್ಲಿ ಪಿ.ಎನ್.ಬಿ. ಬಡಾವಣೆ ಹಾಗೂ ವಿಠ್ಠಲ ನಗರ ಬಡಾವಣೆಗಳ ಚರಂಡಿಗಳ ಸ್ವಚ್ಛತಾ ಕಾರ್ಯ ನಡೆದಿದೆ. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡುವ ಉದ್ದೇಶದಿಂದ ಚರಂಡಿಗಳಲ್ಲಿ ತುಂಬಿದ್ದ ಹೂಳನ್ನು ತೆಗೆಯಲಾಗಿದೆ. ಈ ಭಾಗದಲ್ಲಿನ ಚರಂಡಿಗಳಲ್ಲಿ ಹೂಳು ತುಂಬಿಕೊಂಡು ಸಮಸ್ಯೆ ಆಗುತ್ತಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+