ಬೆಂಗಳೂರಿನ ವೃಷಭಾವತಿ ನದಿ ಉಳಿಸಲು ಬಿಬಿಎಂಪಿ ಮಾಸ್ಟರ್ ಪ್ಲಾನ್!
Vrishabhavati Valley: ಬೆಂಗಳೂರಿನ ಜೀವನದಿಯಾಗಿದ್ದ ನದಿಯೊಂದನ್ನು ಸರಿಪಡಿಸುವುದಕ್ಕೆ ಬಿಬಿಎಂಪಿ ಮುಂದಾಗಿದೆ. ಒಂದು ಕಾಲದಲ್ಲಿ ಬೆಂಗಳೂರಿನ ಜೀವನಾಡಿಯಾಗಿದ್ದ ಈ ನದಿ ಕಳೆದ ಹಲವು ದಶಕಗಳಿಂದ ಕೊಳಚೆ ನೀರು ಸೇರಿ ಹಾಳಾಗಿದೆ. ಇದೀಗ ಈ ನದಿಯನ್ನು ಉಳಿಸುವುದಕ್ಕೆ ಪ್ಲಾನ್ ಮಾಡಿದೆ. ವೃಷಭಾವತಿ ವ್ಯಾಲಿಗೆ ಕೊಳಚೆ ನೀರು ಸೇರುವುದನ್ನು ನಿಯಂತ್ರಣ ಮಾಡುವುದಕ್ಕೆ ಸಮಗ್ರ ಯೋಜನೆ ರೂಪಿಸುತ್ತಿರುವುದಾಗಿ ಬಿಬಿಎಂಪಿ ಹೇಳಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾಹಿತಿ ನೀಡಿದ್ದಾರೆ. ವೃಷಭಾವತಿ ವ್ಯಾಲಿಗೆ ಕೊಳಚೆ ನೀರು ಸೇರಿ ಕಲುಷಿತ ಆಗುವುದನ್ನು ತಪ್ಪಿಸುವ ಉದ್ದೇಶದಿಂದ ಸಮಗ್ರ ಯೋಜನೆ ರೂಪಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಲಮಂಡಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ವೃಷಭಾವತಿ ವ್ಯಾಲಿ ಪುನಶ್ಚೇತನ ಮಾಡುವ ನಿಟ್ಟಿನಲ್ಲಿ ಸಭೆಯ ಸಹ ನಡೆದಲಾಗಿದೆ. ಈ ಸಂಬಂಧ ಮಾತನಾಡಿರುವ ತುಷಾರ್ ಗಿರಿನಾಥ್ ಅವರು, ವೃಷಭಾವತಿ ನದಿಯಲ್ಲಿ ಕೊಳಚೆ ನೀರು ಸೇರಿ ಕಲುಷಿತ ಆಗುತ್ತಿದೆ. ಇದನ್ನು ತಡೆಯುವ ಸಲುವಾಗಿ ಪಾಲಿಕೆ, ಜಲಮಂಡಳಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಸಮಗ್ರ ಯೋಜನೆ ರೂಪಿಸುವುದಕ್ಕೆ ಸೂಚಿಸಲಾಗಿದೆ.

ವೃಷಭಾವತಿ ವ್ಯಾಲಿಗೆ ಎಲ್ಲೆಲ್ಲಿ ಕೊಳಚೆ ನೀರು ಬರುತ್ತಿದೆ ಎನ್ನುವುದನ್ನು ಮೊದಲು ಪರಿಶೀಲನೆ ಮಾಡಿ. ಇದಾದ ಮೇಲೆ ಎಲ್ಲೆಲ್ಲಿ ಕೊಳಚೆ ನೀರು ಸೇರುತ್ತಿದೆ ಎನ್ನುವುದನ್ನು ಪಟ್ಟಿ ಮಾಡಬೇಕು. ಅಲ್ಲದೆ ನದಿ ಪಕ್ಕದಲ್ಲಿ ಎಷ್ಟು ಅಪಾರ್ಟ್ಮೆಂಟ್ಗಳು ಬರಲಿವೆ. ಖಾಸಗಿ ಅಪಾರ್ಟ್ಮೆಂಟ್ಗಳಿಂದ ನೇರವಾಗಿ ಬರುತ್ತಿದೆ ಎನ್ನುವುದನ್ನು ಪರಿಶೀಲನೆ ಮಾಡಬೇಕು. ಇದರೊಂದಿಗೆ ಜೊತೆಗೆ ಅಪಾರ್ಟ್ಮೆಂಟ್ಗಳಲ್ಲಿ ಅಳವಡಿಸಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳು ಸರಿಯಾಗಿ ಕೆಲಸ ಮಾಡುತ್ತಿದೆಯೇ ಎನ್ನುವುದನ್ನು ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ.
ಇನ್ನು ಜಲಮಂಡಳಿ ವತಿಯಿಂದ ಎಷ್ಟು ಎಸ್ಟಿಪಿಗಳು ಕಾರ್ಯನಿರ್ವಹಿಸುತ್ತಿವೆ. ಹೊಸದಾಗಿ ಎಸ್.ಟಿಪಿಗಳನ್ನು ನಿರ್ಮಾಣ ಮಾಡಲು ಯಾವ ರೀತಿಯಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎನ್ನುವುದರ ವಿವರವಾದ ಮಾಹಿತಿ ನೀಡಬೇಕು. ಅಲ್ಲದೆ ಕೊಳಚೆ ನೀರು ನದಿಗೆ ಸೇರುತ್ತಿರುವುದನ್ನು ಗುರುತಿಸಿ ಅದನ್ನು ಪೈಪ್ಗಳ ಮೂಲಕ ಎಸ್.ಟಿ.ಪಿಗೆ ಹೋಗುವ ವ್ಯವಸ್ಥೆ ಮಾಡಬೇಕು ಎಂದೂ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ 28.08 ಕಿ.ಮೀ ವ್ಯಾಪ್ತಿಯಲ್ಲಿ ವೃಷಭಾವತಿ ವ್ಯಾಲಿಯ ವ್ಯಾಪ್ತಿ ಇದೆ. ವಿ-100 ವ್ಯಾಲಿ ಸ್ಯಾಂಕಿ ಕೆರೆಯಿಂದ ಬೆಂಗಳೂರು ವಿಶ್ವವಿದ್ಯಾಲಯದವರೆಗೆ 14.04 ಕಿ.ಮೀ ಇದ್ದರೆ. ವಿ-200 ವ್ಯಾಲಿ ಗೊರಗುಂಟೆ ಪಾಳ್ಯ - ಪೀಣ್ಯ ಮೆಟ್ರೊ ನಿಲ್ದಾಣದಿಂದ ಬೆಂಗಳೂರು ವಿಶ್ವವಿದ್ಯಾಲಯದವರೆಗೆ 14.04 ಕಿ.ಮೀ ಬರಲಿದೆ.
ಒತ್ತುವರಿ ತೆರವು ಸಂಬಂಧ ಕ್ರಮವಹಿಸಿ: ವೃಷಭಾವತಿ ವ್ಯಾಲಿಗೆ ಸಂಪರ್ಕ ಕಲ್ಪಿಸುವ 42 ಕೆರೆಗಳು ಬರಲಿದೆ. ಒತ್ತುವರಿಯಾಗಿರುವ ಪ್ರದೇಶವನ್ನು ಗುರುತಿಸಬೇಕು. ಜಿಲ್ಲಾಧಿಕಾರಿಗಳ ಬಳಿ ಬಾಕಿಯಿರುವ ಪ್ರಕರಣಗಳ ಪೈಕಿ ಭೂಮಾಪಕರಿಂದ ಸಮೀಕ್ಷೆ ನಡೆಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಸ ಹಾಕದಂತೆ ಫೆನ್ಸಿಂಗ್ ಅಳವಡಿಸಿಕೊಳ್ಳಿ: ಇನ್ನು ವೃಷಭಾವತಿ ವ್ಯಾಲಿಗೆ ಕಸ ಹಾಕದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅಗತ್ಯವಿರುವ ಕಡೆ ಫೆನ್ಸಿಂಗ್ ಅಳವಡಿಸುವ ಕೆಲಸ ಮಾಡಬೇಕು. ಇನ್ನು ಜೆಸಿಬಿಗಳನ್ನು ಇಟ್ಟು ಹೂಳೆತ್ತುವ ಕಾರ್ಯವನ್ನು ನಡೆಸಬೇಕು. ವೃಷಭಾವತಿ ವ್ಯಾಲಿಯಲ್ಲಿ ಸಂಪೂರ್ಣವಾಗಿ ಹೂಳೆತ್ತಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
-
Bengaluru: ಬೆಂಗಳೂರು ಸ್ವಚ್ಛ ಸರ್ವೇಕ್ಷಣಾ ಅಭಿಯಾನ: ನಟ ಅನಿರುದ್ಧ್ ಜಟ್ಕರ್ ಸೇರಿ 6 ರಾಯಭಾರಿಗಳ ಆಯ್ಕೆ -
ಬೆಂಗಳೂರಲ್ಲಿ 1010 ಆಸ್ತಿದಾರರಿಂದ 33.89 ಕೋಟಿ ರೂ. ಆಸ್ತಿ ತೆರಿಗೆ ಬಾಕಿ: ಆಸ್ತಿದಾರರಿಗೆ ಜಿಬಿಎ ಫೈನಲ್ ವಾರ್ನಿಂಗ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ












Click it and Unblock the Notifications