ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಳೆಗೆ ಕೊಚ್ಚಿ ಹೋದ ವೃಷಭಾವತಿ ನದಿ ತಡೆಗೋಡೆ: ಮೇಯರ್, ಆಯುಕ್ತ ಭೇಟಿ

|
Google Oneindia Kannada News

ಬೆಂಗಳೂರು, ಜೂನ್ 26: ಗುರುವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೆಂಗೇರಿಯ ಬಳಿಯ ವೃಷಭಾವತಿ ನದಿ ಕಾಲುವೆಯ ತಡೆಗೋಡೆ ಕೊಚ್ಚಿ ಹೋಗಿದೆ. ಗೋಡೆ ಕುಸಿದ ಕಾರಣ ನದಿ ನೀರು ರಸ್ತೆಗೆ ನುಗ್ಗಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.

Recommended Video

ಜನಸಾಮಾನ್ಯರಿಗೆ ಒಂದು ನ್ಯಾಯ, ರಾಜಕಾರಣಿಗಳಿಗೊಂದು ನ್ಯಾಯ | Oneindia Kannada

ಈ ಹಿನ್ನೆಲೆ ಶುಕ್ರವಾರ ಬೆಳಿಗ್ಗೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಮತ್ತು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯ ಎಚ್ಚರಿಕೆಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯ ಎಚ್ಚರಿಕೆ

ಪರಿಶೀಲನೆ ಬಳಿಕ, ''ಶೀಘ್ರವಾಗಿ ರಸ್ತೆ ಕೊರೆಯದಂತೆ ನೀರಿನ ಡೈವರ್ಷನ್ ಮಾಡಿ ನೂತನವಾಗಿ ತಡೆಗೋಡೆ ನಿರ್ಮಿಸಲು ಕ್ರಮ ವಹಿಸಲಾಗಿದೆದ್ದು, ಕೂಡಲೇ ಕಾಮಗರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ'' ಎಂದು ಮೇಯರ್ ತಿಳಿಸಿದ್ದಾರೆ.

ಈ ವೇಳೆ ಸ್ಥಳೀಯ ಬಿಬಿಎಂಪಿ ಸದಸ್ಯ ವಿ.ವಿ.ಸತ್ಯನಾರಾಯಣ ಸಹ ಮೇಯರ್ ಜೊತೆ ಉಪಸ್ಥಿತರಿದ್ದರು.

Bbmp Mayor And Commissioner Has Visit Near Vrishabhavathi River In Kengeri

ಗುರುವಾರ ಮಧ್ಯಾಹ್ನದಿಂದ ಸುರಿದ ಮಳೆಯಿಂದ ಸಂಜೆ ವೇಳೆ 5.30 ವೇಳೆ ವೃಷಭಾವತಿ ನದಿ ಕಾಲುವೆಯ ಗೋಡೆ ಕುಸಿದಿದೆ. ಸುಮಾರು 300 ಮೀಟರ್ ಉದ್ದ ಕುಸಿದಿದ್ದು, ರಸ್ತೆ ಮೇಲೆ ನೀರು ಹರಿಯಲಾರಂಭಿಸಿದೆ. ರಾತ್ರಿ ಸ್ಥಳಕ್ಕೆ ಬಂದ ಬಿಬಿಎಂಪಿ ಅಧಿಕಾರಿಗಳು ಪರಿಶೀಲನೆ ನಡೆಸಿ, ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದರು.

English summary
BBMP Mayor Goutham Kumar and Commissioner Anil kumar has Visit near Vrishabhavathi river in Kengeri where a retaining wall collapsed due to persistent rain yesterday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X