ಬಿಬಿಎಂಪಿ ಮೇಯರ್ ಬಿಎನ್ ಮಂಜುನಾಥ್ ರೆಡ್ಡಿ ವ್ಯಕ್ತಿ ಚಿತ್ರ
ಬೆಂಗಳೂರು, ಸೆ. 11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೊಸ ಮೇಯರ್ ಹಾಗೂ ಉಪಮೇಯರ್ ಆಯ್ಕೆಗಾಗಿ ಶುಕ್ರವಾರ ಚುನಾವಣೆ ನಡೆಸಲಾಯಿತು.
ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷದ ಮಡಿವಾಳ ವಾರ್ಡ್ ನ ಬಿಬಿಎಂಪಿ ಸದಸ್ಯ ಬಿ.ಎನ್ ಮಂಜುನಾಥ ರೆಡ್ಡಿ ಅವರು ನೂತನ ಮೇಯರ್ ಆಗಿ ಆಯ್ಕೆಯಾದರೆ, ವೃಷಭಾವತಿ ನಗರ ವಾರ್ಡ್ ನ ಜೆಡಿಎಸ್ ಪಕ್ಷದ ಹೇಮಲತಾ ಅವರು ಉಪ ಮಹಾಪೌರರಾಗಿ ಚುನಾಯಿತರಾಗಿದ್ದಾರೆ.
ಬಿಬಿಎಂಪಿ ಮೇಯರ್, ಉಪ ಮೇಯರ್ ಅಲ್ಲದೆ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣೆಯನ್ನು ಕೂಡಾ ನಗರ ಪ್ರಾದೇಶಿಕ ಆಯುಕ್ತರಾದ ಎಂವಿ ಜಯಂತಿ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಸಲಾಯಿತು.[ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಜಯ]
ಚುನಾವಣೆಗೂ ಮುನ್ನ ಹಂಚಿಕೆಯಾದಂತೆ ಮೇಯರ್ ಸ್ಥಾನ ಸ್ಥಾನ ಕಾಂಗ್ರೆಸ್ಗೆ, ಉಪ ಮೇಯರ್ ಸ್ಥಾನ ಜೆಡಿಎಸ್ಗೆ ಹಂಚಿಕೆಯಾದರೆ, 12 ಸ್ಥಾಯಿ ಸಮಿತಿಗಳಲ್ಲಿ 7 ಸ್ಥಾನ ಪಕ್ಷೇತರರಿಗೆ ಸಿಗಲಿದೆ. ಉಳಿದ 5ರಲ್ಲಿ ಕಾಂಗ್ರೆಸ್ಗೆ 3, ಜೆಡಿಎಸ್ಗೆ 2 ಸ್ಥಾನ ಸಿಕ್ಕಿದೆ.
ಬೆಂಗಳೂರು ಉಸ್ತುವರಿ ಸಚಿವ ರಾಮಲಿಂಗಾರೆಡ್ಡಿ ಅವರ ಅತ್ಯಾಪ್ತರಾದ ಬಿಎನ್ ಮಂಜುನಾಥ್ ರೆಡ್ಡಿ ಅವರ ಪರಿಚಯ ಇಲ್ಲಿದೆ
* ಬಿ .ನಾರಾಯಣ ರೆಡ್ಡಿ ಮಂಜುನಾಥ ರೆಡ್ಡಿ (52 ವರ್ಷ)ಅವರು ಮಡಿವಾಳದ ನಿವಾಸಿ.
* ಮನೆ ವಿಳಾಸ : ಸಂಖ್ಯೆ 84/19, 1ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ, ಮಾರುತಿ ನಗರ, ಮಡಿವಾಳ, ಬೆಂಗಳೂರು - 560 068.

ಮಡಿವಾಳ ವಾರ್ಡ್ ಕಾರ್ಪೊರೇಟರ್ ಆಗಿ 3ನೇ ಬಾರಿ
* ಈ ಹಿಂದೆ ಮಡಿವಾಳ ವಾರ್ಡ್ ಕಾರ್ಪೊರೇಟರ್ ಆಗಿ 3ನೇ ಬಾರಿ, ಮಡಿವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ 3 ಬಾರಿ ಆಯ್ಕೆಯಾಗಿದ್ದಾರೆ. 1991ರಿಂದ ಬಿಬಿಎಂಪಿ ಬೆಂಗಳೂರಿನ ವಾರ್ಡ್ ಗಳ ಪರಿಚಯವಿದೆ. ಅನುಭವಿ ಬೆಂಗಳೂರು ನಾಗರಿಕ.
* ಕಳೆದ ಅವಧಿ(2013)ಯಲ್ಲಿ ಬಿಬಿಎಂಪಿಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕರಾಗಿದ್ದರು
* ಮಂಜುನಾಥ್ ರೆಡ್ಡಿ ಬಿಎ ಪದವಿಧರ.
* 1983ರಲ್ಲಿ ಎನ್ಎಸ್ಯುಐ ಸದಸ್ಯರಾಗಿ ಎಂಟ್ರಿ ನೀಡಿದ ಇವರು ಜಯನಗರ ಯೂತ್ ಬ್ಲಾಕ್ ಅಧ್ಯಕ್ಷರಾಗಿದ್ದರು.
* 1996ರಲ್ಲಿ ಮೊದಲ ಬಾರಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದರು.

ರಾಮಲಿಂಗಾರೆಡ್ಡಿ ಅವರ ಆತ್ಯಾಪ್ತರು
* 2001ರಲ್ಲಿ ಸ್ಥಾಯಿ ಸಮಿತಿ ಸದಸ್ಯರಾಗಿದ್ದರು.
* 2015ರಲ್ಲಿ ಬೆಂಗಳೂರಿನ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ(172)ದ ಮಡಿವಾಳ ವಾರ್ಡ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
1996, 2010 ಮತ್ತು 2015ರಲ್ಲಿ ಸೇರಿ ಒಟ್ಟು ಮೂರು ಬಾರಿ ಬಿಬಿಎಂಪಿ ಸದಸ್ಯರಾಗಿ ಆಯ್ಕೆಯಾಗಿರುವ ಇವರ ಹೆಸರನ್ನು ಮೇಯರ್ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ಅವರೇ ಸೂಚಿಸಿದ್ದರು.

131 ಮತಗಳನ್ನು ಪಡೆದ ಮಂಜುನಾಥ ರೆಡ್ಡಿ
ಬಿಬಿಎಂಪಿ ಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತೆ ಎಂ.ವಿ.ಜಯಂತಿ, ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್, ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ 131 ಮತಗಳನ್ನು ಪಡೆದ ಮಂಜುನಾಥ ರೆಡ್ಡಿ ಅವರು ಮೇಯರ್ ಆಗಿ ಆಯ್ಕೆಯಾದರು. ಬಿಜೆಪಿ ಪರವಾಗಿ ಕಾಡು ಮಲ್ಲೇಶ್ವರ ವಾರ್ಡ್ ಬಿಜೆಪಿ ಸದಸ್ಯ ಮಂಜುನಾಥ ರಾಜು ಅವರು ಮೇಯರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು.
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications