ಸೆಪ್ಟೆಂಬರ್ ವರೆಗೆ ಬಿಬಿಎಂಪಿ ಮೇಯರ್ ಸ್ಥಾನ ಅಭಾದಿತ
ಬೆಂಗಳೂರು, ಏ. 23 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಅಧಿಕಾರಾವಧಿ ಬಗ್ಗೆ ಎದ್ದಿದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು, ಮೇಯರ್ ಕಟ್ಟೆ ಸತ್ಯನಾರಾಯಣ ಮತ್ತು ಉಪ ಮೇಯರ್ ಇಂದಿರಾ ಅವರು ಸೆ.4ರವರೆಗೆ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ.
ಮೇಯರ್ ಮತ್ತು ಉಪ ಮೇಯರ್ ಅವಧಿ ಏ.23 ರಂದು ಕೊನೆಗೊಳ್ಳುತ್ತಿತ್ತು. ನೂತನ ಮೇಯರ್ ಆಯ್ಕೆಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸದಿರುವುದು ಗೊಂದಲಕ್ಕೆ ಕಾರಣವಾಗಿತ್ತು. ಸದ್ಯ ಬಿಬಿಎಂಪಿ ಆಯುಕ್ತ ಎಂ.ಡಿ.ಲಕ್ಷ್ಮೀನಾರಾಯಣ ಸೆ.4ರಂದು ಮೇಯರ್ ಹಾಗೂ ಉಪ ಮೇಯರ್ ಅವರನ್ನು ಆಯ್ಕೆ ಮಾಡಲಾಗಿದೆ. 2014ರ ಸೆ. 4ರವರೆಗೆ ಅವರು ಅಧಿಕಾರದಲ್ಲಿ ಇರಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮೇಯರ್ ಹಾಗೂ ಉಪ ಮೇಯರ್ ಅಧಿಕಾರಾವಧಿ ಕುರಿತಂತೆ ಯಾವುದೇ ಗೊಂದಲವಿಲ್ಲ. ಆಯ್ಕೆಯಾದ ದಿನದಿಂದ ಒಂದು ವರ್ಷದವರೆಗೆ ಅವರು ಅಧಿಕಾರ ಹೊಂದಿರುತ್ತಾರೆ ಎಂಬುದು ಕರ್ನಾಟಕ ಪೌರಾಡಳಿತ ಕಾಯ್ದೆ -1976ರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಎಂದು ಅವರು ವಿವರಿಸಿದರು. [ಬಿಬಿಎಂಪಿಗೆ ಹೊಸ ಮೇಯರ್ ಬರ್ತಾರಾ?]
ಬಿಬಿಎಂಪಿ ಚುನಾವಣೆ ನಡೆದ ನಂತರ ಮೊದಲ ಮೇಯರ್ ಆಗಿ ನಟರಾಜ್ ಅವರು 2010ರ ಏಪ್ರಿಲ್ 23ರಂದು ಅಧಿಕಾರ ಸ್ವೀಕರಿಸಿದ್ದರು. ಆದ್ದರಿಂದ ಪ್ರತಿವರ್ಷ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ನೂತನ ಮೇಯರ್ ಆಯ್ಕೆ ಮಾಡುವುದು ವಾಡಿಕೆಯಾಗಿತ್ತು.
ಆದರೆ, ಕಟ್ಟೆ ಸತ್ಯನಾರಾಯಣ ಮತ್ತು ಇಂದಿರಾ ಅವರ ಆಯ್ಕೆ ವಿವಿಧ ಕಾರಣಗಳಿಂದಾಗಿ ವಿಳಂಬವಾಗಿತ್ತು. ಏಪ್ರಿಲ್ ನಲ್ಲಿ ಆಯ್ಕೆ ಆಗಬೇಕಿದ್ದ ಅವರು, 2013ರ ಸೆ. 4ರಂದು ಆಯ್ಕೆಯಾಗಿದ್ದರು. ಆದ್ದರಿಂದ ಇವರ ಅವಧಿ ಯಾವಾಗ ಮುಕ್ತಾಯವಾಗಲಿದೆ ಎಂಬ ಗೊಂದಲ ಉಂಟಾಗಿತ್ತು.
ಮೇಯರ್ ಕಟ್ಟೆ ಸತ್ಯನಾರಾಯಣ ಅವರು ಸಹ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಕೆಎಂಸಿ ಕಾಯ್ದೆಯ ಪ್ರಕಾರ ಮೇಯರ್ ಸ್ಥಾನ ಅಲಂಕರಿಸಿದ ದಿನದಿಂದ ಒಂದು ವರ್ಷದ ಅವಧಿಗೆ ಮೇಯರ್ ಅಧಿಕಾರವಧಿ ಇರುತ್ತದೆ. ಈ ನಿಯಮದಂತೆ ಒಂದು ವರ್ಷ ಪೂರೈಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications