ಮೇಯರ್ ಚುನಾವಣೆ: ಮತದಾನ ಹಕ್ಕಿನ ಬಗ್ಗೆ ಪ್ರಶ್ನಿಸಿದ ಬಿಜೆಪಿ
ಬೆಂಗಳೂರು, ಸೆ.01: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಯರ್ ಚುನಾವಣೆಯಲ್ಲಿ ಶಾಸಕರು ಹಾಗೂ ಸಂಸದರಿಗೆ ಮತದಾನದ ಹಕ್ಕು ಏಕೆ ಬೇಕು ಎಂದು ಬಿಜೆಪಿ ಕರ್ನಾಟಕ ಪ್ರಶ್ನಿಸಿದೆ. ಈ ಬಗ್ಗೆ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.
ಬಿಬಿಎಂಪಿ ಮಹಾಪೌರರ ಆಯ್ಕೆ ಪ್ರಕ್ರಿಯೆಗಾಗಿ ನಡೆಯುವ ಚುನಾವಣೆಯಲ್ಲಿ ಶಾಸಕರು ಹಾಗೂ ಸಂಸದರಿಗೆ ಮತದಾನದ ಹಕ್ಕು ನೀಡಿರುವ ಬಗ್ಗೆ ಪ್ರಶ್ನಿಸಲು ಬಿಜೆಪಿ ಮುಂದಾಗಿದೆ ಎಂದು ಬಿಜೆಪಿ ಮೂಲಗಳು ಒನ್ ಇಂಡಿಯಾಕ್ಕೆ ತಿಳಿಸಿವೆ. [ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್ಸಿಗೆ ಮುಖಭಂಗ]
ಬಿಬಿಎಂಪಿಯಲ್ಲಿ ಮತದಾನದ ಹಕ್ಕು ಕೇವಲ ಚುನಾಯಿತ ಕಾರ್ಪೊರೇಟರ್ ಗಳಿಗೆ ನೀಡಿದರೆ ಸಾಕು. ಮತದಾನದ ಹಕ್ಕಿನ ಬಗ್ಗೆ ಸ್ಪಷ್ಟ ಚಿತ್ರಣ ಸಿಗಬೇಕು ಹೀಗಾಗಿ ಕರ್ನಾಟಕ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಲು ಬಿಜೆಪಿ ನಿರ್ಧರಿಸಿದೆ. [ಯಾರು ಯಾರು ವೋಟ್ ಮಾಡಲಿದ್ದಾರೆ?]
ಬೆಂಗಳೂರಿನ ಐವರು ಲೋಕಸಭಾ ಸದಸ್ಯರು ಹಾಗೂ 28 ಜನ ಶಾಸಕರ ಜೊತೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಹೊಂದಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಪಡೆದುಕೊಂಡಿರುವ ರಾಜ್ಯಸಭಾ ಸದಸ್ಯರು (ಉದಾ : ವೆಂಕಯ್ಯ ನಾಯ್ಡು, ರಾಜೀವ್ ಚಂದ್ರಶೇಖರ್) ಹಾಗೂ ವಿಧಾನಪರಿಷತ್ ಸದಸ್ಯರು ಮತದಾನ ಮಾಡುವ ಮೂಲಕ ಮೇಯರ್ ಅವರನ್ನು ಆಯ್ಕೆ ಮಾಡಲಿದ್ದಾರೆ.
ಜನರು ನೀಡಿದ ತೀರ್ಪಿನಂತೆ ನಮಗೆ ಬಿಬಿಎಂಪಿ ಮೇಯರ್ ಸ್ಥಾನ ಪಡೆಯುವ ಎಲ್ಲಾ ಹಕ್ಕಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಮೇಯರ್ ಚುನಾವಣೆ ಸೆ.09ರ ನಂತರ ನಡೆಯುವ ಸಾಧ್ಯತೆ ಇದೆ. ಅಲ್ಲಿ ತನಕ ಈ ಅಂಕಿ ಸಂಖ್ಯೆಗಳ ಲೆಕ್ಕಾಚಾರ, ವ್ಯಾಪಾರ, ವ್ಯವಹಾರಗಳು ಬಿರುಸಿನಿಂದ ನಡೆಯಲಿದೆ.

ಹೊಸ ಮ್ಯಾಜಿಕ್ ನಂಬರ್ 131
ಮೇಯರ್ ಆಗಿ ಆಯ್ಕೆಯಾಗಲು 128 ಮತಗಳ ಅಗತ್ಯವಿತ್ತು. ಅದರೆ, ಶಾಸಕರು, ಕಾರ್ಪೊರೇಟರ್ ಗಳು, ಎಂ ಎಲ್ಸಿಗಳು, ಸಂಸದರು ಹೀಗೆ ಸಂಖ್ಯೆ 260 ಮುಟ್ಟುವುದರಿಂದ ಮೇಯರ್ ಆಯ್ಕೆಯಾಗಲು 131 ಸಂಖ್ಯೆ ಪಡೆದುಕೊಳ್ಳಬೇಕಾಗುತ್ತದೆ ಎಂದು ಬಿಬಿಎಂಪಿ ಕಚೇರಿ ಪ್ರಕಟಿಸಿದೆ.

ಮತದಾನದ ಹಕ್ಕು ಯಾರಿಗೆ ಇದೆ
ಬಿಜೆಪಿ 23, ಕಾಂಗ್ರೆಸ್ 22 ಜನ ಪಾಲಿಕೇತರ ಸದಸ್ಯರನ್ನು ಹೊಂದಿದೆ. ಜೆಡಿಎಸ್ 7 ಜನ ಹಾಗೂ ಪಕ್ಷೇತರ ವಿಧಾನಪರಿಷತ್ ಸದಸ್ಯ (ಡಿಯು ಮಲ್ಲಿಕಾರ್ಜುನ) ಹಾಗೂ ರಾಜ್ಯಸಭಾ ಸದಸ್ಯರಾದ ರಾಜೀವ್ ಚಂದ್ರಶೇಖರ್ ಮತ್ತು ವಿಜಯ್ ಮಲ್ಯ ಅವರು ಮತದಾನದ ಹಕ್ಕು ಹೊಂದಿದ್ದಾರೆ.

ಮ್ಯಾಜಿಕ್ ನಂಬರ್ ಮುಟ್ಟುವ ಸಂಖ್ಯೆ ಸಿಕ್ಕಿಲ್ಲ
ಬಿಜೆಪಿ ಶಾಸಕರು, ಸಂಸದರು ಹಾಗೂ ಪಾಲಿಕೇತರ ಸದಸ್ಯರು ಸೇರಿ ಈಗ 126 ಮತಗಳನ್ನು ಹೊಂದಿದೆ. ಕಾಂಗ್ರೆಸ್ 101 ಹಾಗೂ ಜೆಡಿಎಸ್ 21. ಇದರ ಜೊತೆಗೆ 8 ಜನ ಪಕ್ಷೇತರರು,, 3 ಜನ ರಾಜ್ಯಸಭಾ ಸದಸ್ಯರು, 2 ಎಂ ಎಲ್ಸಿಗಳು ಸೇರಿದಂತೆ 12 ಜನ ಆಗುತ್ತಾರೆ. ಸದ್ಯದ ಪರಿಸ್ಥಿತಿಯಲ್ಲಿ ಯಾವ ಪಕ್ಷಕ್ಕೂ ಮ್ಯಾಜಿಕ್ ನಂಬರ್ ಮುಟ್ಟುವ ಸಂಖ್ಯೆ ಸಿಕ್ಕಿಲ್ಲ.

ಸಂಖ್ಯೆ ಕೊರತೆ ಎದುರಾಗಿದೆ
ಬಿಜೆಪಿಗೆ 5 ಹಾಗೂ ಕಾಂಗ್ರೆಸ್ಸಿಗೆ 30 ಸಂಖ್ಯೆ ಕೊರತೆ ಎದುರಾಗಿದೆ. ಈ ನಡುವೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಸಮ್ಮತಿಸಿರುವುದು ಮತ್ತೊಮ್ಮೆ ಲೆಕ್ಕಾಚಾರ ಎಣಿಕೆಗೆ ನಾಂದಿ ಹಾಡಿದೆ.
ಜನರು ನೀಡಿದ ತೀರ್ಪಿನಂತೆ ನಮಗೆ ಬಿಬಿಎಂಪಿ ಮೇಯರ್ ಸ್ಥಾನ ಪಡೆಯುವ ಎಲ್ಲಾ ಹಕ್ಕಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಮೇಯರ್ ಚುನಾವಣೆ ಸೆ.09ರ ನಂತರ ನಡೆಯುವ ಸಾಧ್ಯತೆ ಇದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications