ದುಬೈ ಪ್ರವಾಸ ರದ್ದುಗೊಳಿಸಿದ ಬಿಬಿಎಂಪಿ ಮೇಯರ್
ಬೆಂಗಳೂರು, ಜೂ. 19 : ಬೆಂಗಳೂರಿನ ಕಸದ ಸಮಸ್ಯೆ ಬಗೆಹರಿಸಲು ಅಂತಾರಾಷ್ಟ್ರೀಯ ಸಂಸ್ಥೆಯೊಂದು ದುಬೈನಲ್ಲಿ ನಿರ್ಮಿಸಿರುವ ಘಟಕ ವೀಕ್ಷಣೆ ಮಾಡಿಕೊಂಡು ಬರುವ ಪ್ರವಾಸವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಕಟ್ಟೆ ಸತ್ಯನಾರಾಯಣ ರದ್ದುಗೊಳಿಸಿದ್ದಾರೆ. ಬಿಬಿಎಂಪಿ ಮೇಯರ್ ವಿದೇಶ ಪ್ರವಾಸಕ್ಕೆ ಸಾರ್ವಜನಿಕರು, ವಿವಿಧ ರಾಜಕೀಯ ಪಕ್ಷಗಳು ಸಹ ವಿರೋಧ ವ್ಯಕ್ತಪಡಿಸಿದ್ದವು.
ಈ ಕುರಿತು ಹೇಳಿಕೆ ನೀಡಿರುವ ಮೇಯರ್ ಕಟ್ಟೆ ಸತ್ಯನಾರಾಯಣ, ಅಂತಾರಾಷ್ಟ್ರೀಯ ಸಂಸ್ಥೆಯೊಂದು ದುಬೈನಲ್ಲಿ ನಿರ್ಮಿಸಿರುವ ಘಟಕ ವೀಕ್ಷಣೆಗೆ ಆಹ್ವಾನ ಬಂದಿತ್ತು. ಆದರೆ, ಸದ್ಯಕ್ಕೆ ವಿದೇಶ ಪ್ರವಾಸ ಕೈಗೊಳ್ಳುವ ಯಾವುದೇ ಚಿಂತನೆ ಇಲ್ಲ. ಸದ್ಯ ತ್ಯಾಜ್ಯ ಸಂಸ್ಕರಣೆಗೆ ಅಗತ್ಯ ವ್ಯವಸ್ಥೆ ಕಲ್ಪಿಸುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ. [ಮೇಯರ್ ವಿದೇಶ ಪ್ರವಾಸಕ್ಕೆ ಲೋಕಸತ್ತಾ ವಿರೋಧ]

ನಾಗರಿಕ ಸೇವಾ ಸಂಸ್ಥೆಗಳು, ವಿವಿಧ ಕ್ಷೇತ್ರದ ಗಣ್ಯರು, ರಾಜಕೀಯ ಪಕ್ಷಗಳು ಮೇಯರ್ ವಿದೇಶ ಪ್ರವಾಸಕ್ಕೆ ಅಸಮಧಾನ ವ್ಯಕ್ತಪಡಿಸಿದ್ದವು. ಬೆಂಗಳೂರಿಗೆ ಹೊಂದಿಕೊಳ್ಳುವ ವೈಜ್ಞಾನಿಕ ಕಸ ಸಂಸ್ಕರಣಾ ವಿಧಾನ ಕೈಗೊಳ್ಳುವ ಬದಲು ವಿದೇಶಗಳಲ್ಲಿ ನಡೆದ ಪ್ರಯೋಗಗಳ ವೀಕ್ಷಣೆಗೆ ತೆರಳುವುದು ಅರ್ಥಹೀನ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. [ಕಸದ ಸಮಸ್ಯೆ ಬಗೆಹರಿಸಲು ಸ್ಯಾನ್ ಫ್ರಾನ್ಸಿಸ್ಕೋ ನೆರವು]
ಈ ಹಿಂದೆ ಸಹ ಅಧ್ಯಯನ ನೆಪದಲ್ಲಿ ಜನಪ್ರತಿನಿಧಿಗಳ ತಂಡ ದೇಶ ಹಾಗೂ ವಿದೇಶ ಸುತ್ತಿ ಬಂದರೂ ನಗರದಲ್ಲಿ ಹೊಸ ಕಸ ವಿಲೇವಾರಿ ಘಟಕ ನಿರ್ಮಾಣವಾಗಿರಲಿಲ್ಲ. ಆದ್ದರಿಂದ ವಿದೇಶ ಪ್ರವಾಸದ ಅಗತ್ಯವಿಲ್ಲ ಎಂದು ಎಲ್ಲರೂ ಅಭಿಪ್ರಾಯಪಟ್ಟಿದ್ದರು. ಆದ್ದರಿಂದ ಮೇಯರ್ ತಮ್ಮ ದುಬೈ ಪ್ರವಾಸವನ್ನು ರದ್ದುಗೊಳಿಸಿದ್ದು, ನಗರದ ಕಸ ವಿಲೇವಾರಿ ಬಗ್ಗೆ ಗಮನ ಹರಿಸಿದ್ದಾರೆ. [ಕಸ ವಿಲೇವಾರಿ ಸಮಸ್ಯೆಗೆ ತಾತ್ಕಾಲಿಕ ಮುಕ್ತಿ]
ಹಿಂದೆಯೂ ವಿದೇಶ ಪ್ರವಾಸ : 2010ರಲ್ಲಿ ಅಂದಿನ ಮೇಯರ್ ಎಸ್.ಕೆ.ನಟರಾಜ್ ನೇತೃತ್ವದ ತಂಡ ಮುಂಬೈ ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿತ್ತು. 2012ರಲ್ಲಿ ಅಂದಿನ ಉಪಮೇಯರ್ ಎಸ್.ಹರೀಶ್ ನೇತೃತ್ವದ ನಿಯೋಗ ಇಸ್ರೇಲ್ಗೆ ಹೋಗಿಬಂದಿತ್ತು.
ಮೇಯರ್ ಶಾರದಮ್ಮ ನೇತೃತ್ವದ ತಂಡ ಪುಣೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಆದರೆ, ಈ ಎಲ್ಲಾ ಪ್ರವಾಸಗಳ ಬಳಿಕ ನಗರದಲ್ಲಿ ಯಾವುದೇ ಹೊಸ ಕಸ ವಿಲೇವಾರಿ ಘಟಕಗಳನ್ನು ಬಿಬಿಎಂಪಿ ಆರಂಭಿಸಿಲ್ಲ. ಕಸ ವಿಲೇವಾರಿಯಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡಿಲ್ಲ.
ಮೇಯರ್ ಪ್ರವಾಸಕ್ಕೆ ವಿರೋಧ ವ್ಯಕ್ತಪಡಿಸಿದ್ದ ಲೋಕಸತ್ತಾ ಪಕ್ಷ, ಮೇಯರ್ ಅವರ ಉದ್ದೇಶಿತ ದುಬೈ ಪ್ರವಾಸ ಈ ಹಿಂದಿನ ವಿದೇಶಿ ಪ್ರವಾಸಗಳಂತೆ ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ ಮತ್ತು ಅನವಶ್ಯಕ ಖರ್ಚು ಮತ್ತು ಕಾಲಹರಣಕ್ಕೆ ಕಾರಣವಾಗುತ್ತದೆ ಎಂದು ಆರೋಪಿಸಿತ್ತು. ಸದ್ಯ ಪ್ರವಾಸ ರದ್ದುಗೊಳಿಸಿ ಮೇಯರ್ ಎಲ್ಲಾ ವಿವಾದಗಳಿಗೆ ತೆರೆ ಎಳೆದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications