ಸೆ.5ರಂದು ಬಿಬಿಎಂಪಿಗೆ ಹೊಸ ಮೇಯರ್ ಆಯ್ಕೆ
ಬೆಂಗಳೂರು, ಆ.28 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗಾಗಿ ಸೆ.5ರಂದು ಚುನಾವಣೆ ನಡೆಯಲಿದೆ. ಹಾಲಿ ಮೇಯರ್ ಕಟ್ಟೆ ಸತ್ಯನಾರಾಯಣ ಮತ್ತು ಉಪ ಮೇಯರ್ ಇಂದಿರಾ ಅವರ ಅಧಿಕಾರಾವಧಿ ಸೆ.3ರಂದು ಕೊನೆಗೊಳ್ಳಲಿದೆ.
ಬಿಬಿಎಂಪಿ ಚುನಾವಣೆಯ ಅಧಿಸೂಚನೆಯನ್ನು ಪ್ರಾದೇಶಿಕ ಆಯುಕ್ತ ಗೌರವ ಗುಪ್ತ ಅವರ ಬುಧವಾರ ಪ್ರಕಟಿಸಿದ್ದು, ಸೆ.5ರಂದು ಚುನಾವಣೆ ನಡೆಸುವಂತೆ ಪಾಲಿಕೆಯ ಕೌನ್ಸಿಲ್ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ. ಸೆ.5ರಂದು ಬೆಳಗ್ಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಅಗತ್ಯಬಿದ್ದರೆ, ಮಧ್ಯಾಹ್ನ ಚುನಾವಣೆ ನಡೆಯಲಿದೆ.

ಬಿಬಿಎಂಪಿಯ ಮೇಯರ್ ಮತ್ತು ಉಪ ಮೇಯರ್ ಪಟ್ಟವನ್ನು ಈ ಬಾರಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿಡಲಾಗಿದ್ದು, ಎರಡು ಹುದ್ದೆಗಳಿಗೆ ಭಾರೀ ಪೈಪೋಟಿ ನಡೆಯುತ್ತಿದೆ. ಹಾಲಿ ಮೇಯರ್ ಆಗಿರುವ ಕಟ್ಟೆ ಸತ್ಯನಾರಾಯಣ ಮತ್ತು ಉಪ ಮೇಯರ್ ಇಂದಿರಾ ಅವರ ಅವಧಿ ಸೆ.3ರಂದು ಕೊನೆಗೊಳ್ಳಲಿದೆ. [ಮೇಯರ್, ಉಪ ಮೇಯರ್ ಪಟ್ಟಕ್ಕೆ ಪೈಪೋಟಿ]
ಮಹಾನಗರ ಪಾಲಿಕೆಯ ಕೌನ್ಸಿಲ್ನ ಕೊನೆಯ ಅವಧಿ ಇದಾಗಿದ್ದು, 2015ರ ಏಪ್ರಿಲ್ನಲ್ಲಿ ಮತ್ತೆ ಪಾಲಿಕೆಗೆ ಚುನಾವಣೆ ನಡೆಯಲಿದೆ. ಆದ್ದರಿಂದ ಆಯ್ಕೆಯಾಗುವ ಮೇಯರ್ ಮತ್ತು ಉಪ ಮೇಯರ್ ಅಧಿಕಾರಾವಧಿ ಆರು ತಿಂಗಳಾಗಿರುತ್ತದೆ.
ಮೇಯರ್ ಗೌನ್ ಧರಿಸಲು ಪೈಪೋಟಿ : ಮೂಡಲಪಾಳ್ಯ ವಾರ್ಡ್ನ ಶಾಂತಕುಮಾರಿ, ಡಾ.ರಾಜ್ಕುಮಾರ್ ವಾರ್ಡ್ನ ಗಂಗಭೈರಯ್ಯ, ಜೆ.ಪಿ.ಪಾರ್ಕ್ನ ಬಿ.ಆರ್. ನಂಜುಂಡಪ್ಪ, ಬನಶಂಕರಿ ದೇವಸ್ಥಾನದ ಎ.ಎಚ್. ಬಸವರಾಜು, ವಿಜಯನಗರದ ಎಚ್.ರವೀಂದ್ರ ಮತ್ತು ಪಟ್ಟಾಭಿರಾಮನಗರದ ಸಿ.ಕೆ. ರಾಮಮೂರ್ತಿ ಅವರ ಹೆಸರುಗಳು ಮೇಯರ್ ಪಟ್ಟಕ್ಕೆ ಕೇಳಿಬರುತ್ತಿವೆ.
ಮೇಯರ್ ಪಟ್ಟಕ್ಕೆ ಪ್ರತಿ ಬಾರಿಯು ದಕ್ಷಿಣ ವಲಯದ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ ಈ ಬಾರಿ ಬೇರೆ ವಲಯಗಳಿಗೆ ಆದ್ಯತೆ ನೀಡಬೇಕು ಎಂಬ ಮಾತು ಕೇಳಿಬರುತ್ತಿದೆ. ಶೀಘ್ರದಲ್ಲೇ ಬಿಜೆಪಿ ನಾಯಕರು ಸಭೆ ಸೇರಿ ಮೇಯರ್ ಆಯ್ಕೆ ಕುರಿತಂತೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications