ಬಿಜೆಪಿ ಮೇಯರ್, ಉಪ ಮೇಯರ್ ಅಭ್ಯರ್ಥಿಗಳು ಅಂತಿಮ
ಬೆಂಗಳೂರು, ಸೆಪ್ಟೆಂಬರ್, 11 : ಸುಮಾರು 15 ದಿನಗಳಿಂದ ನಡೆಯುತ್ತಿದ್ದ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಕಸರತ್ತಿಗೆ ಇಂದು ತೆರೆ ಬೀಳುತ್ತಿದೆ. ಮೂರೂ ಪಕ್ಷಗಳಲ್ಲಿ ನಡೆದ ರೆಸಾರ್ಟ್ ರಾಜಕೀಯದ ಅಂತಿಮ ಚಿತ್ರಣ ಇಂದು ಹೊರಬರಲಿದ್ದು, ಯಾರು ಬೆಂಗಳೂರಿನ ಪ್ರಥಮ ಪ್ರಜೆ? ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ 100 ಸ್ಥಾನಗಳನ್ನು ಗಳಿಸಿರುವ ಬಿಜೆಪಿ ಮೇಯರ್ ಮತ್ತು ಉಪ ಮೇಯರ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮೇಯರ್ ಗದ್ದುಗೆ ಏರಲು 131 ಸದಸ್ಯ ಬಲದ ಅಗತ್ಯವಿದೆ. ಶಾಸಕರು, ಸಂಸದರು ಸೇರಿ ಬಿಜೆಪಿ 128 ಸದಸ್ಯ ಬಲವನ್ನು ಹೊಂದಿದೆ. [ಕಾಂಗ್ರೆಸ್ ನಿಂದ ಮೇಯರ್ ಯಾರು?]

ಶುಕ್ರವಾರ ಬೆಳಗ್ಗೆ 11.30ಕ್ಕೆ ಮೇಯರ್, ಉಪಮೇಯರ್ ಚುನಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಮೇಯರ್ ಚುನಾವಣೆಗಾಗಿ ಕಾಂಗ್ರೆಸ್-ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿಗಳು ಸೇರಿ ಮೈತ್ರಿಕೂಟ ರಚಿಸಿಕೊಂಡಿದ್ದಾರೆ. ಮೈತ್ರಿಕೂಟದ ಸದಸ್ಯ ಬಲ 132. [ಬಿಬಿಎಂಪಿ: ಮೇಯರ್ ಆಯ್ಕೆಗೆ ಮತ ಹಾಕುವವರು ಯಾರು?]
ಮೇಯರ್ ಅಭ್ಯರ್ಥಿ ಅಂತಿಮ : ಗುರುವಾರ ರಾತ್ರಿ ನಗರದ ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ಸಭೆ ನಡೆಸಿದ ಬಿಜೆಪಿ ನಾಯಕರು ಮೇಯರ್ ಮತ್ತು ಉಪ ಮೇಯರ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ. 'ಮೈತ್ರಿಕೂಟ, ಸಂಖ್ಯಾ ಲೆಕ್ಕಾಚಾರ ನಮಗೆ ಬೇಡ. ಬೆಂಗಳೂರಿನ ಜನರ ತೀರ್ಪಿನ ಬಗ್ಗೆ ನಮಗೆ ಗೌರವವಿದೆ' ಎಂದು ಬಿಬಿಎಂಪಿ ಬಿಜೆಪಿ ಚುನಾವಣಾ ಉಸ್ತುವಾರಿ ಆರ್.ಅಶೋಕ್ ಹೇಳಿದ್ದಾರೆ.[ಹೇಗೆ ನಡೆಯುತ್ತೆ ಮೇಯರ್ ಚುನಾವಣೆ?]
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಕಾಡು ಮಲ್ಲೇಶ್ವರ ವಾರ್ಡ್ನಿಂದ ಈ ಬಾರಿಯ ಚುನಾವಣೆಯಲ್ಲಿ 8,953 ಮತಗಳನ್ನು ಪಡೆದು ಜಯಗಳಿಸಿರುವ ಮಂಜುನಾಥ ರಾಜು ಅವರ ಹೆಸರನ್ನು ಮೇಯರ್ ಪಟ್ಟಕ್ಕೆ ಬಿಜೆಪಿ ಅಂತಿಮಗೊಳಿಸಿದೆ. ಕಳೆದ ಬಾರಿ ಸಹ ಇದೇ ಕ್ಷೇತ್ರದಿಂದ ಆಯ್ಕೆಯಾಗಿದ್ದ ಇವರು ಸ್ಥಾಯಿ ಸಮಿತಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ.
ಉಪ ಮೇಯರ್ ಹುದ್ದೆ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿದೆ ಪಟ್ಟಾಭಿರಾಮನಗರ ವಾರ್ಡ್ನ ಎಚ್.ಸಿ.ನಾಗರತ್ನ ಅವರನ್ನು ಉಪ ಮೇಯರ್ ಹುದ್ದೆಗೆ ಆಯ್ಕೆ ಮಾಡಲಾಗಿದೆ. ಇಂದು ಬೆಳಗ್ಗೆ 8 ರಿಂದ 9 ಗಂಟೆಯ ತನಕ ನಾಮಪತ್ರ ಸಲ್ಲಿಸಲು ಅವಕಾಶವಿದೆ. 11.30ರ ನಂತರ ಮೇಯರ್, ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದ್ದು, 260 ಸದಸ್ಯರು ಮತದಾನ ಮಾಡಲಿದ್ದಾರೆ.
-
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು











Click it and Unblock the Notifications