ದೇವೇಗೌಡರನ್ನು ಭೇಟಿ ಮಾಡಿದ ರಾಮಲಿಂಗಾ ರೆಡ್ಡಿ
Recommended Video
ಬೆಂಗಳೂರು, ಸೆಪ್ಟೆಂಬರ್ 12 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಮೈತ್ರಿ ಕುರಿತು ಚರ್ಚಿಸಲು ಸಚಿವ ರಾಮಲಿಂಗಾ ರೆಡ್ಡಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಈ ಭೇಟಿ ನಡೆದಿದೆ.
ಮಂಗಳವಾರ ಬೆಳಗ್ಗೆ ಪದ್ಮನಾಭನಗರದಲ್ಲಿನ ದೇವೇಗೌಡರ ನಿವಾಸಕ್ಕೆ ರಾಮಲಿಂಗಾ ರೆಡ್ಡಿ ಭೇಟಿ ನೀಡಿದರು. ಉಭಯ ನಾಯಕರು ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಬಿಬಿಎಂಪಿ ಮೈತ್ರಿ : ಎಚ್.ಡಿ.ಕುಮಾರಸ್ವಾಮಿ ಹೇಳುವುದೇನು?
ಸೆ.28ಕ್ಕೆ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಆದ್ದರಿಂದ, ಜೆಡಿಎಸ್ ನಾಯಕರ ಜೊತೆ ಮಾತುಕತೆ ನಡೆಸುವಂತೆ ಸಿದ್ದರಾಮಯ್ಯ ಸಚಿವರಿಗೆ ಸೂಚನೆ ನೀಡಿದ್ದರು.
ಬಿಬಿಎಂಪಿ ಮೇಯರ್ ಆಯ್ಕೆಗೆ ಸಿದ್ಧತೆ ಆರಂಭ, ಯಾರೊಂದಿಗೆ ಮೈತ್ರಿ?
ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದೆ. ಮೇಯರ್ ಮತ್ತು ಉಪ ಮೇಯರ್ ಪಟ್ಟವನ್ನು ಎರಡೂ ಪಕ್ಷಗಳು ಹಂಚಿಕೊಂಡಿವೆ. ಆದರೆ, ಈ ಬಾರಿ ಜೆಡಿಎಸ್ ಮೇಯರ್ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದು, ಚುನಾವಣೆ ಕುತೂಹಲ ಮೂಡಿಸಿದೆ.
ಶಾಸಕರು, ಬಿಬಿಎಂಪಿ ಸದಸ್ಯರ ಜೊತೆ ಭಾನುವಾರ ಸಭೆ ನಡೆಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, 'ಬಿಬಿಎಂಪಿಯಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭಾದಿತ ಎಂದು ಕಾಂಗ್ರೆಸ್ ನಾಯಕರು ತಿಳಿದುಕೊಂಡಿದ್ದರೆ ಅದು ತಪ್ಪು' ಎಂದು ಹೇಳಿಕೆ ನೀಡಿದ್ದರು.
ಬಿಬಿಎಂಪಿಯಲ್ಲಿನ ಕಾಂಗ್ರೆಸ್ ಆಡಳಿತ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಕುಮಾರಸ್ವಾಮಿ, 'ಮೈತ್ರಿ ಬಗ್ಗೆ ಚರ್ಚೆ ನಡೆಸಲು ಯಾವ ಕಾಂಗ್ರೆಸ್ ನಾಯಕರು ತಮ್ಮನ್ನು ಭೇಟಿಮಾಡಿಲ್ಲ' ಎಂದು ಹೇಳಿದ್ದರು.