ಬಿಬಿಎಂಪಿ ಬಜೆಟ್ನಲ್ಲಿ ಜನಾಭಿಪ್ರಾಯ ಸೇರ್ಪಡೆಗೆ 'ನನ್ನ ನಗರ-ನನ್ನ ಬಜೆಟ್' ಅಭಿಯಾನ: ರಾಯಪುರ
ಬೆಂಗಳೂರು, ನವೆಂಬರ್ 24: ಬೆಂಗಳೂರಿನ ಅಭಿವೃದ್ಧಿ ಮತ್ತಿತರ ಬಿಬಿಎಂಪಿಯ ಕಾರ್ಯ ಚಟುವಟಿಕೆಗಳಲ್ಲಿ ಎಲ್ಲ ನಾಗರಿಕಸ ಸಹಭಾಗಿತ್ವ, ಒಳಗೊಳ್ಳುವಿಕೆ ಹೆಚ್ಚಿಸುವ ಉದ್ದೇಶದಿಂದ 'ನನ್ನ ನಗರ-ನನ್ನ ಬಜೆಟ್' ಅಭಿಯಾನ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯಪುರ ಹೇಳಿದರು.
ಎರಡರಿಂದ ಮೂರು ತಿಂಗಳಲ್ಲಿ ಬಿಬಿಎಂಪಿ ಬಜೆಟ್ ಮಂಡನೆ ಸಾಧ್ಯತೆ ಇದೆ. ಇದಕ್ಕೆ ಪೂರ್ವಭಾವಿಯಾಗಿ ಜನರಿಂದ ಎಲ್ಲ ವಾರ್ಡ್ ಅಭಿವೃದ್ಧಿ, ವಸ್ತುಸ್ಥಿತಿ ಕುರಿತು ಜನಾಗ್ರಹ ಸಂಸ್ಥೆ ಅಭಿಪ್ರಾಯ, ಸಲಹೆಗಳನ್ನು ಸಂಗ್ರಹಿಸಲಿದೆ. ಅದಕ್ಕಾಗಿ ಸಂಸ್ಥೆ ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ 'ನನ್ನ ನಗರ - ನನ್ನ ಬಜೆಟ್ (My City- My Budget) ಅಭಿಯಾನಕ್ಕೆ ಚಾಲನೆ ನೀಡಿ ಜಯರಾಮ್ ರಾಯಪುರ ಮಾತನಾಡಿದರು.
ಅಭಿಯಾನದಡಿ ವಾಹನವು ಒಂದು ವಾರ ಇಲ್ಲವೇ ಹತ್ತು ದಿನಗಳ ಕಾಲ ನಗರದ ಎಲ್ಲ 243ವಾರ್ಡ್ಗಳಲ್ಲಿ ಸಂಚರಿಸಲಿದೆ. ಎಲ್ಲ ನಾಗರಿಕರ ಸಲಹೆ, ಕುಂದು ಕೊರತೆಗಳನ್ನು ಪಡೆದುಕೊಳ್ಳಲಿದೆ. ವಾರ್ಡ್ ಮಟ್ಟದಲ್ಲಿ ಆಗಬೇಕಾದ ಕೆಲಸಗಳು, ಆಗಿರುವ ಅಭಿವೃದ್ಧಿ ಕುರಿತು ಅಭಿಪ್ರಾಯ ಸಂಗ್ರಹಿಸಲಿದೆ. ನಂತರ ಆ ಕುರಿತ ವರದಿಯನ್ನು ಜನಾಗ್ರಹ ಸಂಸ್ಥೆ ಬಿಬಿಎಂಪಿ ಸಲ್ಲಿಸಲಿದೆ ಎಂದರು.
ಬಿಬಿಎಂಪಿ ಆಯವ್ಯಯದಲ್ಲಿ ಜನಾಭಿಪ್ರಾಯ
ಜನರ ಅಭಿಪ್ರಾಯ, ಸಲಹೆಗಳನ್ನು ಬಿಬಿಎಂಪಿ ಮಂಡಿಸಲಿರುವ 2023-24ರ ವಾರ್ಷಿಕ ಆಯವ್ಯಯದಲ್ಲಿ ಅಗತ್ಯವುಗಳನ್ನು ಸೇರಿಸಲಾಗುವುದು. ಈ ಮೂಲಕ ಬೆಂಗಳೂರಿನಲ್ಲಿ ಕೈಗೊಳ್ಳಬೇಕಾದ ಕ್ರಮ ಹಾಗೂ ವಾರ್ಡ್ ಮಟ್ಟದಲ್ಲಿ ವಸ್ತುಸ್ಥಿತಿಯ ಸ್ಪಷ್ಟತೆ ದೊರೆಯಲಿದೆ.

ಈಗಾಗಲೇ ಬಿಬಿಎಂದು ಒಂದು ವಾರ್ಡ್ಗೆ ಒಂದು ಕೋಟಿ ರೂ. ಅನುದಾನ ಎಂದು ನಿರ್ಧರಿಸಿದೆ. ಈ ಅನುದಾನವನ್ನು ನಾವು ಖರ್ಚು ಮಾಡದೇ ವಾರ್ಡ್ನಲ್ಲಿನ ಸಮಿತಿ ಅಭಿಪಾಯ ಪಡೆದು ಅವರ ಸಲಹೆಯಂತೆ ಖರ್ಚು ಮಾಡುತ್ತೇವೆ. ಈಗಾಗಲೇ ಪ್ರತಿ ವಾರ್ಡ್ಗೆ ಒಂದು ಕೋಟಿ ರೂ. ಅನುದಾನ ಪೈಕಿ 70ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಅದು ವಾರ್ಡ್ ಸಮಿತಿ ಸಲಹೆ ಮೇರೆಗೆ ಅಭಿವೃದ್ಧಿಗೆ ಖರ್ಚಾಗಲಿದೆ. ಆದಷ್ಟು ಶೀಘ್ರವೇ ಈ ಅನುದಾನ ಏರಿಕೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಬಿಬಿಎಂಪಿಯಿಂದ ಪ್ರಾಮಾಣಿಕ ಎನ್ಜಿಓ ಬಳಕೆ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಚಿಲುಮೆ ಸಂಸ್ಥೆಯ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಬಿಎಂಪಿ ವ್ಯಾಪ್ತಿಯ ಒಂದಷ್ಟು ಜವಾಬ್ದಾರಿ ಕೆಲಸಗಳನ್ನು ಪ್ರಮಾಣಿಕವಾಗಿ ಮಾಡುಲು ಮುಂದೆ ಬಂದ ಎನ್ಜಿಓಗಳ ಜೊತೆ ಕೈ ಜೋಡಿಸಬಹುದು.
ಈ ನಿಟ್ಟಿನಲ್ಲಿ ಕಳೆದ 20 ವರ್ಷದಿಂದ ಜನಾಗ್ರಹ ಸಂಸ್ಥೆ ನಂಬಿಕೆ, ಪ್ರಾಮಾಣಿಕವಾಗಿ ಬಿಬಿಎಂಪಿ ಜೊತೆ ಕೆಲಸ ಮಾಡುತ್ತಿದೆ. ಈ ಅಭಿಯಾನವು ಉಚಿತವಾಗಿ ನಡೆಯಲಿದೆ ಎಂದು ಅವರು ವಿವರಿಸಿದರು.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications