ಬಿಬಿಎಂಪಿ ಕಾಯ್ದೆ ಸೋಮವಾರದಿಂದ ಜಾರಿ: ಕಾಯ್ದೆಯಲ್ಲಿ ಏನೇನಿದೆ?
ಬೆಂಗಳೂರು, ಜನವರಿ 9: ಮೇಯರ್ ಮತ್ತು ಉಪ ಮೇಯರ್ ಅಧಿಕಾರಾವಧಿ ವಿಸ್ತರಿಸುವ, ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ 2020, ಜನವರಿ 11ರಿಂದ ಜಾರಿಯಾಗಲಿದೆ.
ಈ ಕಾಯ್ದೆಯು ಬಿಬಿಎಂಪಿಯ ಸ್ವರೂಪದಲ್ಲಿ ಅನೇಕ ಬದಲಾವಣೆಗಳನ್ನು ತರಲಿದೆ. ಈ ಮೂಲಕ ವಾರ್ಡ್ಗಳ ಸಂಖ್ಯೆಯು 198ರಿಂದ 243ಕ್ಕೆ ಏರಿಕೆಯಾಗಲಿವೆ. ಮೇಯರ್ ಮತ್ತು ಉಪ ಮೇಯರ್ ಅವರ ಅಧಿಕಾರಾವಧಿ 30 ತಿಂಗಳು ಇರಲಿದೆ. ಮೇಯರ್, ಮುಖ್ಯ ಆಯುಕ್ತ, ವಲಯ ಆಯುಕ್ತ, ವಲಯ ಸಮಿತಿಗಳು, ಸ್ಥಾಯಿ ಸಮಿತಿಗಳು, ವಾರ್ಡ್ ಸಮಿತಿಗಳು ಮತ್ತು ಪ್ರದೇಶ ಸಭಾಗಳು ಇರಲಿವೆ.
ವಿಧಾನಮಂಡಲದಲ್ಲಿ ಬಿಬಿಎಂಪಿ ಮಸೂದೆ ಚರ್ಚೆ ನಡೆದು ಅಂಗೀಕಾರಗೊಂಡಿತ್ತು. ಅದಕ್ಕೆ ಡಿ. 19ರಂದು ರಾಜ್ಯಪಾಲ ವಜೂಭಾಯಿ ವಾಲಾ ಒಪ್ಪಿಗೆ ನೀಡಿದ್ದರು. ಈಗ ಕಾಯ್ದೆಯ ಜಾರಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಂತದ ಅಧಿಕಾರಿಯು ಮುಖ್ಯ ಆಯುಕ್ತರಾಗಬಹುದು. ಮುಖ್ಯ ಆಯುಕ್ತರ ಕಾರ್ಯವೈಖರಿ ತೃಪ್ತಿದಾಯಕ ಎಂದು ಸರ್ಕಾರಕ್ಕೆ ಅನಿಸಿದರೆ ಎರಡು ವರ್ಷ ಅವರನ್ನು ಹುದ್ದೆಯಲ್ಲಿ ಮುಂದುವರಿಸಬೇಕು. ಆಡಳಿತ ಇನ್ನಷ್ಟು ಪರಿಣಾಮಕಾರಿಯಾಗಬೇಕು ಎನಿಸಿದರೆ ಅವರನ್ನು ವರ್ಗಾವಣೆ ಮಾಡಬಹುದು. ಆದರೆ ವರ್ಗಾವಣೆಗೆ ಏಕಾಏಕಿ ತೀರ್ಮಾನ ತೆಗೆದುಕೊಳ್ಳುವಂತಿಲ್ಲ. ಪಾಲಿಕೆ ಜತೆ ಸಮಾಲೋಚನೆ ನಡೆಸಬೇಕು ಮತ್ತು ಅದಕ್ಕೆ ಕಾರಣಗಳನ್ನು ಸಹ ನಮೂದಿಸಬೇಕು.
ವಲಯ ಆಯುಕ್ತರು ಆಯಾ ವಲಯದ ಆಡಳಿತ ನಿರ್ವಹಿಸುವ ನೋಡಲ್ ಅಧಿಕಾರಿ ಆಗಿರುತ್ತಾರೆ. ಮೇಯರ್ ಹಾಗೂ ಆಯುಕ್ತರ ನಿರ್ದೇಶನದಂತೆ ವಾರ್ಡ್ ಸಮಿತಿ, ಪ್ರದೇಶ ಸಭಾದ ಮೇಲ್ವಿಚಾರಣೆ, ನಿರ್ದೇಶನ ಮತ್ತು ಸಮನ್ವಯದ ಕಾರ್ಯ ನಿರ್ವಹಿಸುತ್ತಾರೆ.
ವಲಯ ಸಮಿತಿಯು ಬಿಬಿಎಂಪಿ ಬಜೆಟ್ನಲ್ಲಿ ನಿರ್ದಿಷ್ಟ ವಲಯಕ್ಕೆ ಮೀಸಲಾದ ಅನುದಾನವನ್ನು ವಾರ್ಡ್ ಸಮಿತಿಗಳಿಗೆ ಹಂಚಿಕೆ ಮಾಡುತ್ತದೆ. ಅನುದಾನಗಳ ಹಂಚಿಕೆ ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿರಬೇಕು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications