Benglauru News: ಅನಧಿಕೃತ OFC ಕೇಬಲ್ ಅಳವಡಿಕೆ ವಿರುದ್ಧ ಸಮರ, ಹೊಸ ಪಾದಾಚಾರಿ ನಿರ್ಮಾಣ
ಬೆಂಗಳೂರು: ಮೇ. 15: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಓಎಫ್ಸಿ ಕೇಬಲ್ ಅಳವಡಿಕೆ ಮಾಡಲಾಗುತ್ತದೆ. ಇದರಿಂದ ಅದೆಷ್ಟೋ ಬಾರಿ ವಾಹನ ಸವಾರರಿಗೆ, ಸಾರ್ವಜನಿಕರಿಗೆ ತೊಂದರೆ ಆಗಿದೆ. ಕೆಲವು ಸಲ ರಸ್ತೆ ಅಪಘಾತಗಳಿಗೂ ಕಾರಣವಾಗಿದೆ. ಈ ಸಂಬಂಧ ಎಚ್ಚೆತ್ತುಕೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಸಮರ ಸಾರಿಗೆ ನಗರದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್ಸಿ ಕೇಬಲ್ ಗಳನ್ನು ತೆರವುಗೊಳಿಸಲು ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿಯ ಪೂರ್ವ ವಲಯ ವ್ಯಾಪ್ತಿಯಲ್ಲಿ ಗುಟ್ಟಹಳ್ಳಿ ಮೇಲ್ಸೆತುವೆ ಬಳಿಯಿಂದ ಗುರುವಾರ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಪಾದಚಾರಿ ಮಾರ್ಗದಲ್ಲಿ ಅನಧಿಕೃತ ಓಎಫ್ಸಿ ಕೇಬಲ್ಗಳು ನೇತಾಡುತ್ತಿರುವುದನ್ನು ಕಂಡು ಅದನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದರು.

ಟೆಂಡರ್ ಶ್ಯೂರ್, ವೈಟ್ ಟಾಪಿಂಗ್ ಮಾಡಿರುವ ರಸ್ತೆಗಳಲ್ಲಿ ಕೇಬಲ್ ಗಳನ್ನು ನೆಲದಡಿ ಅಳವಡಿಸಲು ಡಕ್ಟ್ ಗಳ ವ್ಯವಸ್ಥೆ ಮಾಡಲಾಗಿದೆ. ಆಗಿದ್ದರೂ ಕೂಡಾ ಕೆಲ ಸಂಸ್ಥೆಗಳು ರಸ್ತೆ ಬದಿ, ಪಾದಚಾರಿ ಮಾರ್ಗ, ವಿದ್ಯುತ್ ಕಂಬಗಳು ಹಾಗೂ ಮರಗಳಲ್ಲಿ ನೇತಾಡುವ ರೀತಿಯಲ್ಲಿದ್ದು, ಅದರಿಂದ ನಾಗರಿಕರಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ಡಕ್ಟ್ ಗಳನ್ನು ಅಳವಡಿಸಿರುವ ಕಡೆ ಯಾವುದೇ ರೀತಿಯ ಅನಧಿಕೃತ ಓಎಫ್ಸಿ ಕೇಬಲ್ ಗಳನ್ನು ಅಳವಡಿಸಿದಂತೆ ಕ್ರಮವಹಿಸಿ ಎಂದರು.
ಸಾರ್ವಜನಿಕ ಉಪಯೋಗಕ್ಕೆ ಖಾಲಿ ಜಾಗ
ಪಾಲಿಕೆಯ ಒಡೆತನದ ಖಾಲಿ ಜಾಗಗಳು ಸಾಕಷ್ಟು ಕಡೆ ಬಳಕೆ ಮಾಡದೆ ಸ್ವಚ್ಛತೆ ಇಲ್ಲದಂತಾಗಿರುತ್ತದೆ. ಆದ್ದರಿಂದ, ಅಂತಹ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಬೇಕು. ಸದ್ಯ ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗಾಗಿ ವ್ಯಾಪಾರ ವಲಯಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಪಾಲಿಕೆ ಒಡೆತನದ ವಿಶಾಲ ಜಾಗಗಳನ್ನು ಗುರುತಿಸುವಂತೆ ನಿರ್ದೇಶಿಸಿದರು.

ಟ್ರಾನ್ಸಫಾರ್ಮರ್ಸ್ ಬಳಿ ಸ್ವಚ್ಛತೆ ನೋಡಿಕೊಳ್ಳಿ
ರಸ್ತೆ ಬದಿ ಪಾದಚಾರಿ ಮಾರ್ಗಗಳಲ್ಲಿರುವ ಟ್ರಾನ್ಸಫಾರ್ಮರ್ ಗಳ ಬಳಿ ಸ್ವಚ್ಛತೆ ಇಲ್ಲದೆ ಓಡಾಡದಂತಹ ಸ್ಥಿತಿ ನಿರ್ಮಾಣ ಆಗಿರುತ್ತದೆ. ಈ ನಿಟ್ಟಿನಲ್ಲಿ ಟ್ರಾನ್ಸಫಾರ್ಮರ್ಸ್ ಇರುವ ಕಡೆ ಫೆನ್ಸಿಂಗ್ ಅಳವಡಿಸಿ ಫೆನ್ಸಿಂಗ್ ಮಾಡಬೇಕು. ಜೊತೆಗೆ ಅಲ್ಲಿ ಸದಾ ಸ್ವಚ್ಛತೆಯನ್ನು ಕಾಪಾಡುವ ಜವಾಬ್ದಾರಿಯನ್ನು ಬೆಸ್ಕಾಂ ಅಧಿಕಾರಿಗಳ ವಹಿಸಿದರು.
ಹೊಸದಾಗಿ ಪಾದಚಾರಿ ಮಾರ್ಗ ನಿರ್ಮಾಣ
ನಗರದ ಅರಮನೆ ರಸ್ತೆ, ವಸಂತನಗರದ 12ನೇ ಮುಖ್ಯ ರಸ್ತೆ ಹಾಗೂ ಕಂಟೋನ್ಮೆಂಟ್ ರೈಲ್ವೇ ಹಳಿ ಬಳಿ ಪಾದಚಾರಿ ಮಾರ್ಗ ನಿರ್ಮಾಣ ಮಾಡದಿರುವುದನ್ನು ಗಮನಿಸಿ, ಕೂಡಲೆ ಪರಿಶೀಲಿಸಿ ಎಲ್ಲೆಲ್ಲಿ ಪಾದಚಾರಿ ಮಾರ್ಗ ನಿರ್ಮಾಣ ಮಾಡಬೇಕಿದೆ ಹಾಗೂ ವಿಸ್ತರಿಸಬೇಕಿದೆ ಎಂಬುದನ್ನು ಗುರುತಿಸಿ ಹೊಸದಾಗಿ ಪಾದಚಾರಿ ಮಾರ್ಗ ನಿರ್ಮಾಣ ಮಾಡಲು ಅವರು ಸೂಚಿಸಿದರು.
ಅರಮನೆ ರಸ್ತೆ ಹಾಗೂ ಇನ್ನಿತರೆ ಕಡೆ ಗೋಡೆ, ಬ್ಯಾರಿಕೇಡ್ ಗಳಿಗೆ ಬಿತ್ತಿ ಪತ್ರಗನ್ನು ಅಂಟಿಸಿಸಲಾಗಿದೆ. ಅದರಿಂದ ನಗರ ಸೌಂದರ್ಯಕ್ಕೆ ಧಕ್ಕೆ ಉಂಟಾಗಲಿದೆ. ಈ ಸಂಬಂಧ ಎಲ್ಲೆಲ್ಲಿ ಬಿತ್ತಿಪತ್ರಗಳನ್ನು ಅಂಟಿಸಲಾಗಿದೆ ಎಂಬುದನ್ನು ಗುರುತಿಸಿ ಅದನ್ನು ತೆರವುಗೊಳಿಸಬೇಕು. ಅದಲ್ಲದೆ ರಸ್ತೆ ಬದಿ ಖಾಸಗಿ ಸಂಸ್ಥೆ, ಶಾಲಾ-ಕಾಲೇಜುಗಳ ಜಾಹೀರಾತು ಫಲಕಗಳನ್ನು ತೆರವುಗೊಳಿಸಿ ದಂಡ ವಿಧಿಸಬೇಕು ಎಂದು ಹೇಳಿದರು.
ಮಿಲ್ಲರ್ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಬೆಳಗಿನ ಉಪಹಾರಕ್ಕೆ ಸಿದ್ದಪಡಿಸಿದ್ದ ಇಡ್ಲಿ ಹಾಗೂ ವೆಜಿಟೆಬಲ್ ಪಲಾವ್ ಅನ್ನು ಸೇವಿಸುವ ಮೂಲಕ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಉಪಹಾರದ ರುಚಿ ಚೆನ್ನಾಗಿದ್ದು, ಆಹಾರದ ಗುಣಮಟ್ಟ ಕಾಯ್ದುಕೊಳ್ಳುವ ಜೊತೆಗೆ ಶುಚಿತ್ವ ಕಾಪಾಡಲು ಸಿಬ್ಬಂದಿಗೆ ಸೂಚನೆ ನೀಡಿದರು.
ಮೋರಿಯಲ್ಲಿ ಹೂಳೆತ್ತಿ ಸ್ವಚ್ಛಗೊಳಿಸಿ
ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ಹಳಿ ಬಳಿಯಿರುವ ಮೋರಿಯಲ್ಲಿ ಹೂಳು ತುಂಬಿದ್ದು, ಅದರಿಂದ ನೀರಿನ ಹರಿವು ನಿಧಾನಗತಿಯಲ್ಲಿದೆ. ಆದ್ದರಿಂದ ಮೋರಿಯಲ್ಲಿ ತುಂಬಿರುವ ಹೂಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು.
ಪೂರ್ವ ವಲಯ ವ್ಯಾಪ್ತಿಯಲ್ಲಿ ಗುಟ್ಟಹಳ್ಳಿ ಮೇಲ್ಸೆತುವೆ ಬಳಿಯಿಂದ ಪರಿಶೀಲನೆ ಪ್ರಾರಂಭಿಸಿ, ಅರಮನೆ ರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜು ಮುಂಭಾಗದ ರಸ್ತೆ, ಕನ್ನಿಂಗ್ಯಾಮ್ ರಸ್ತೆ, ಮಿಲ್ಲರ್ ರಸ್ತೆಯ ಮೂಲಕ ಕಂಟೋನ್ಮೆಂಟ್ ರೈಲ್ವೆ ಹಳಿಯವರೆಗೆ 2.5 ಕಿ.ಮೀ ರಸ್ತೆ ಪರಿಶೀಲನೆ ನಡೆಸಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications