ಕೊಟ್ಟ ಮಾತು ಉಳಿಸಿಕೊಂಡ ಪಾಲಿಕೆ, ಸರ್ಕಾರ
ಬೆಂಗಳೂರು, ನ. 21 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಸರ್ಕಾರ ಮಂಡೂರಿನ ಜನರಿಗೆ ಕೊಟ್ಟಿದ್ದ ಮಾತನ್ನು ಉಳಿಸಿಕೊಂಡಿದೆ. ಬೆಂಗಳೂರು ನಗರದ ಕಸವನ್ನು ಮಂಡೂರಿನಲ್ಲಿ ಸುರಿಯುವುದನ್ನು ಶುಕ್ರವಾರದಿಂದಲೇ ಸ್ಥಗಿತಗೊಳಿಸಲಾಗಿದ್ದು, ಮಂಡೂರು ಜನರ ಹೋರಾಟಕ್ಕೆ ಫಲ ದೊರಕಿದೆ.
ಡಿಸೆಂಬರ್ 1ರಿಂದ ಮಂಡೂರಿನಲ್ಲಿ ಕಸ ಸುರಿಯುವುದಿಲ್ಲ ಎಂದು ಮಂಡೂರಿನ ಜನರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಬೃಹತ್ ಬೆಂಗಳೂರ ಮಹಾನಗರ ಪಾಲಿಕೆ ಮಾತು ಕೊಟ್ಟಿತ್ತು. ಅದಕ್ಕೂ ಅದಕ್ಕೂ ಮುನ್ನವೇ ಕಸ ಸುರಿಯುವುದು ಬಂದ್ ಮಾಡಲಾಗಿದ್ದು, ಕಸನವನ್ನು ಎಲ್ಲಿ ಹಾಕುತ್ತಾರೆ? ಎಂಬ ಪ್ರಶ್ನೆಗೆ ಉತ್ತರ ದೊರಕಿಲ್ಲ.

ಘನತ್ಯಾಜ್ಯ ನಿರ್ವಹಣೆಗಾಗಿ ನೇಮಕವಾಗಿದ್ದ ವಿಶೇಷ ಆಯುಕ್ತ ದರ್ಪಣ ಜೈನ್ ಅವರ ಆದೇಶದಂತೆ ಶುಕ್ರವಾರದಿಂದಲೇ ಮಂಡೂರಿಗೆ ಕಸ ಹೊತ್ತು ಹೋಗುವ ಲಾರಿಗಳನ್ನು ನಿಲ್ಲಿಸಲಾಗಿದೆ. ಹೊಸದಾಗಿ 5 ಕಡೆ ಜಾಗಗಳನ್ನು ಗುರುತಿಸಿದ್ದು, ಅಲ್ಲಿ ಕಸ ಸುರಿಯಲು ನಿರ್ಧರಿಸಲಾಗಿದ್ದು, ಆ ಸ್ಥಳಗಳು ಯಾವುದು ಎಂಬುದು ಬಹಿರಂಗಗೊಂಡಿಲ್ಲ. [1 ಕೆಜಿ ಕಸಕ್ಕೆ 2 ರೂ. ಕರೆ ಮಾಡಿ ಪಡೆಯಿರಿ]
ಆಗಸ್ಟ್ 3ರಂದು ಮಂಡೂರು ತ್ಯಾಜ್ಯ ಘಟಕಕ್ಕೆ ಭೇಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟಕಕ್ಕೆ ಡಿಸೆಂಬರ್ 1 ರಿಂದ ಯಾವುದೇ ಕಾರಣಕ್ಕೂ ಕಸ ಸುರಿಯಲು ಬಿಡುವುದಿಲ್ಲ. ಇದು ನಾನು ನಿಮಗೆ ಕೊಡುತ್ತಿರುವ ವಾಗ್ದಾನ. ಇಲ್ಲಿ ಬಿದ್ದಿರುವ ಕಸವನ್ನು ಮೂರು ವರ್ಷಗಳಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. [ಮಂಡೂರಿಗೆ ಸಿಎಂ ಭೇಟಿ]

ನಂತರ ಬಿಬಿಎಂಪಿ ಮೇಯರ್, ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರ ಜೊತೆ ಹಲವಾರು ಸುತ್ತಿನ ಮಾತುಕತೆ ನಡೆಸಿದ್ದ ಸಿಎಂ ಬೇರೆ ಸ್ಥಳ ಗುರುತಿಸಿ, ಡಿಸೆಂಬರ್ನಂತರ ಕಸ ಸುರಿಯಬಾರದು ಎಂದು ಖಡಕ್ ಸೂಚನೆ ನೀಡಿದ್ದರು. ಅದರಂತೆ ಈಗ ಕಸದ ಲಾರಿಗಳ ಸಾಗಣೆಯನ್ನು ಸ್ಥಗಿತಗೊಳಿಸಲಾಗಿದೆ.
ಮಾಗಡಿ ತಾಲೂಕಿನ ಗೊರೂರಿನಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಮುಂದಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿರ್ಣಯಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಉದ್ದೇಶಿತ ಸ್ಥಳದಲ್ಲಿ ಸರ್ವೆ ನಡೆಸಲು ಬಂದ ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು.
ಸದ್ಯ ಬಿಬಿಎಂಪಿ ಹಸಿ ಕಸದಿಂದ ಬಯೋಗ್ಯಾಸ್ ತಯಾರಿಸುವ ಚಿಕ್ಕ-ಚಿಕ್ಕ ಘಟಕಗಳನ್ನು ವಾರ್ಡ್ ಮಟ್ಟದಲ್ಲಿ ಸ್ಥಾಪಿಸಿದೆ. 198 ವಾರ್ಡ್ಗಳ ಪೈಕಿ 168ರಲ್ಲಿ ಅವುಗಳನ್ನು ಮಾಡಲಾಗಿದ್ದು, ಹಲವು ಟನ್ ಕಸ ಇಲ್ಲೇ ಕರಗುತ್ತಿದೆ. ಉಳಿದ ಕಸ ಸುರಿಯಲು ಹೊಸ ಸ್ಥಳ ಗುರುತಿಸಲಾಗಿದೆ. [ಮೇಯರ್ ಸಂದರ್ಶನ ಓದಿ]
ಅಂದಹಾಗೆ 2006 ರಿಂದ ಮಂಡೂರಿಗೆ ಕಸ ವಿಲೇವಾರಿ ಪ್ರಕ್ರಿಯೆ ಆರಂಭಗೊಂಡಿತ್ತು. ಬೆಂಗಳೂರು ನಗರದಲ್ಲಿ ಪ್ರತಿ ದಿನ ಉತ್ಪತ್ತಿಯಾಗುವ 3500 ಟನ್ ಕಸದಲ್ಲಿ 2000 ಟನ್ಗೂ ಹೆಚ್ಚು ಕಸವನ್ನು ಮಂಡೂರಿಗೆ ಸಾಗಿಸಲಾಗುತ್ತಿತ್ತು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications